ಮೈಸೂರು: ‘ಟಿಪ್ಪು ನಿಜಕನಸುಗಳು’ ಎಂಬ ನಾಟಕವನ್ನು ರಚಿಸಿ, ನಿರ್ದೇಶನ ಮಾಡಿದ್ದ ರಂಗಾಯಣದ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ಅವರಿಗೆ ಕೊಲೆ ಬೆದರಿಕೆ ಬಂದಿದೆ. ಈ ಬಗ್ಗೆ ಅವರು ಜಯಲಕ್ಷ್ಮಿಪುರಂ ಪೊಲೀಸರಿಗೆ ದೂರು ನೀಡಿದ್ದಾರೆ. ಜತೆಗೆ ಜೀವ ಬೆದರಿಕೆ ಇದ್ದು ಪೊಲೀಸ್ ರಕ್ಷಣೆ ನೀಡಬೇಕೆಂದು ಕೋರಿದ್ದಾರೆ.
ರಂಗಾಯಣದಿಂದ ‘ಟಿಪ್ಪು ನಿಜಕನಸುಗಳು’ ಎಂಬ ನಾಟಕವನ್ನು ರಚಿಸಿ, ನಿರ್ದೇಶನ ಮಾಡಿ ಇದೀಗ ಪ್ರದರ್ಶನಗೊಳ್ಳುತ್ತಿದೆ. ಈ ಪ್ರದರ್ಶನ ಆರಂಭವಾದಂದಿನಿಂದ ನನ್ನ ವಿರುದ್ಧ ಕೆಲವರು ಪ್ರತಿಭಟನೆ, ಜಿಲ್ಲಾಧಿಕಾರಿಗಳಿಗೆ ದೂರು, ಇತ್ಯಾದಿ ಮಾಡುತ್ತಾ ಬಂದಿದ್ದಾರೆ.
ಮೈಸೂರಿನ ಮಹೇಶ್ ಚಂದ್ರಗುರು ಎಂಬುವವರು ವೀಡಿಯೋ ಒಂದರಲ್ಲಿ ನನ್ನನ್ನು ‘ಮನೆಹಾಳ’ ಕಾರ್ಯಪ್ಪ ಇತ್ಯಾದಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಪ್ರಸಾರ ಮಾಡುತ್ತಿದ್ದಾರೆ ಎಂದು ಅಡ್ಡಂಡ ಕಾರ್ಯಪ್ಪಹೇಳಿಕೊಂಡಿದ್ದಾರೆ.