ಬೆಂಗಳೂರು: ಕೆಎಸ್ಆರ್ಪಿ ಹೆಡ್ ಕಾನ್ಸ್ಟೇಬಲ್ ಆತ್ಮಹತ್ಯೆಯಿಂದ ಪೊಲೀಸ್ ಇಲಾಖೆಯಲ್ಲಿ ಭಯದ ವಾತಾವರಣ ಉಂಟಾಗಿದ್ದು, ಕರೊನಾ ವಿರುದ್ಧ ಹೋರಾಟದಲ್ಲಿ ಎದೆಗುಂದದೆ ಹೋರಾಟ ನಡೆಸುತ್ತಿರುವ ವಾರಿಯರ್ಸ್ಗೆ ಎಡಿಜಿಪಿ ಅಲೋಕ್ ಕುಮಾರ್ ಧೈರ್ಯ ತುಂಬಿದ್ದಾರೆ.
ಸದ್ಯ ಕರೊನಾದಿಂದ ಕೆಎಸ್ಆರ್ಪಿ ಪೊಲೀಸರು ಚಿಂತಾಕ್ರಾಂತರಾಗಿದ್ದಾರೆ. ಹೀಗಾಗಿ ಕ್ವಾರೆಂಟೈನ್ನಲ್ಲಿರುವ ಪೊಲೀಸರಿಗೆ ಯೋಗ ಟೀಚರ್ ಆದ ಖಡಕ್ ಅಧಿಕಾರಿ ಅಲೋಕ್ ಕುಮಾರ್, ಕರೊನಾ ಬಂದರೆ ಧೈರ್ಯವಾಗಿ ಎದುರಿಸುವಂತೆ ಆತ್ಮಬಲ ತುಂಬಿದರು. ಇದನ್ನೂ ಓದಿ: ಸುಶಾಂತ್ ವ್ಯಕ್ತಿತ್ವ ಎಂಥದ್ದು ಎನ್ನುವುದಕ್ಕೆ ಲಾರೆನ್ ಗಾಟ್ಲೀಬ್ ನಡುವಿನ ವಾಟ್ಸ್ಆ್ಯಪ್ ಚಾಟ್ ಸಾಕ್ಷಿ
ಮಾನಸಿಕವಾಗಿ ಕುಗ್ಗಬೇಡಿ, ರೋಗ ಲಕ್ಷಣಗಳು ಕಾಣಿಸಿದರೆ ಕಡೆಗಣನೆ ಕೂಡ ಮಾಡಬೇಡಿ. ಬಿಡುವಿನ ಸಮಯದಲ್ಲಿ ವಾಕಿಂಗ್, ಯೋಗ ಹಾಗೂ ಪ್ರಾಣಾಯಾಮ ಮಾಡಿ ಎಂದು ಹೇಳಿದರು. ವಿಶೇಷವಾಗಿ ಸ್ವತಃ ಅವರೇ ಪ್ರಾಣಾಯಾಮ ಹೇಗೆ ಮಾಡಬೇಕು ಎಂದು ತೋರಿಸಿದರು.
ನೂರಾರು ಕ್ವಾರಂಟೈನ್ ಸಿಬ್ಬಂದಿಗೆ ಯೂನಿಫಾರ್ಮ್ನಲ್ಲೇ ಯೋಗಾಭ್ಯಾಸ ಕಲಿಸಿದ ಅಲೋಕ್ ಕುಮಾರ್, ಆತ್ಮಹತ್ಯೆ ಮಾಡಿಕೊಂಡ ಹೆಡ್ ಕಾನ್ಸ್ಟೇಬಲ್ ಮನೆಗೆ ಭೇಟಿ ನೀಡಿ ಸಾಂತ್ವಾನ ಹೇಳಿದರು. ಸರ್ಕಾರದ ಪರಿಹಾರ ಕೊಡಿಸುವುದಾಗಿ ಭರವಸೆ ನೀಡಿದರು. (ದಿಗ್ವಿಜಯ ನ್ಯೂಸ್) ಇದನ್ನೂ ಓದಿ: ಫೇಸ್ಬುಕ್ನಲ್ಲಿ ಅಪರಿಚಿತ ಮಹಿಳೆ ಜತೆ ಸ್ನೇಹ ಬೆಳೆಸಿದವನ ಧರ್ಮಸಂಕಟ ಹೇಳ ತೀರದು…!
ಕರೊನಾಗೆ ಹೆದರಬೇಡಿ: ಪೊಲೀಸರಿಗೆ ಯೋಗ ಟೀಚರ್ ಆಗಿ ಧೈರ್ಯ ತುಂಬಿದ ಅಲೋಕ್ ಕುಮಾರ್!
ಬೆಂಗಳೂರು: ಕೆಎಸ್ಆರ್ಪಿ ಹೆಡ್ ಕಾನ್ಸ್ಟೇಬಲ್ ಆತ್ಮಹತ್ಯೆಯಿಂದ ಪೊಲೀಸ್ ಇಲಾಖೆಯಲ್ಲಿ ಭಯದ ವಾತಾವರಣ ಉಂಟಾಗಿದ್ದು, ಕರೊನಾ ವಿರುದ್ಧ ಹೋರಾಟದಲ್ಲಿ ಎದೆಗುಂದದೆ ಹೋರಾಟ ನಡೆಸುತ್ತಿರುವ ವಾರಿಯರ್ಸ್ಗೆ ಎಡಿಜಿಪಿ ಅಲೋಕ್ ಕುಮಾರ್ ಧೈರ್ಯ ತುಂಬಿದ್ದಾರೆ. #ADGPAlokKumar #IPSAlokKumar #Coronavirus #Covid19 #Pandemic
Posted by Vijayavani on Tuesday, June 23, 2020
4 ತಿಂಗಳ ಬಳಿಕ ಕಾಲುವೆಯಲ್ಲಿ ಪತ್ತೆಯಾದ ಕಾರನ್ನು ಹೊರತೆಗೆದ ಪೊಲೀಸರಿಗೆ ಕಾದಿತ್ತು ಶಾಕ್!