More

    ಆದಿತ್ಯ ರಾವ್ ವಿರುದ್ಧ ಆರೋಪ ಪಟ್ಟಿ ಸಲ್ಲಿಕೆ

    ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇರಿಸಿದ ಪ್ರಕರಣದ ತನಿಖೆ ಪೂರ್ಣಗೊಂಡಿದ್ದು, ಆರೋಪಿ ಆದಿತ್ಯ ರಾವ್ ವಿರುದ್ಧ 700 ಪುಟಗಳ ಆರೋಪ ಪಟ್ಟಿಯನ್ನು ಗುರುವಾರ ಮಂಗಳೂರಿನ ಜೆ.ಎಂ.ಎ್.ಸಿ. ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ.
    ಪ್ರಕರಣದ ತನಿಖೆ ಪ್ರಕ್ರಿಯೆ ಏಪ್ರಿಲ್‌ನಲ್ಲಿ ಮುಕ್ತಾಯಗೊಂಡು ಆರೋಪ ಪಟ್ಟಿ ಸಿದ್ಧವಾಗಿದ್ದು, ಜಿಲ್ಲಾಧಿಕಾರಿಗಳ ಅನುಮತಿ ಪಡೆದು ರಾಜ್ಯ ಸರ್ಕಾರದ ಅನುಮತಿಗಾಗಿ ಕಳುಹಿಸಲಾಗಿತ್ತು. ಈಗ ರಾಜ್ಯ ಗೃಹ ಇಲಾಖೆ ಕಾರ್ಯದರ್ಶಿಗಳಿಂದ ಪೂರ್ವಾನುಮತಿ ಪತ್ರ ಬಂದಿದೆ ಎಂದು ತನಿಖಾಧಿಕಾರಿಯಾಗಿರುವ ಮಂಗಳೂರು ಉತ್ತರ ಉಪ ವಿಭಾಗದ ಎಸಿಪಿ ಕೆ.ಯು.ಬೆಳ್ಳಿಯಪ್ಪ ತಿಳಿಸಿದ್ದಾರೆ.

    ಆದಿತ್ಯ ರಾವ್ ಜ.20ರಂದು ಬೆಳಗ್ಗೆ ವಿಮಾನ ನಿಲ್ದಾಣದ ಟರ್ಮಿನಲ್ ಬಿಲ್ಡಿಂಗ್‌ನ ಟಿಕೆಟ್ ಕೌಂಟರ್ ಬಳಿ ಪ್ರಯಾಣಿಕರು ಕುಳಿತು ಕೊಳ್ಳುವ ಕುರ್ಚಿಯಲ್ಲಿ ಸ್ಫೋಟಕಗಳು ಇರುವ ಬ್ಯಾಗ್ ಇರಿಸಿ ಬಳಿಕ ಪಾರ್ಕಿಂಗ್ ಪ್ರದೇಶದಲ್ಲಿದ್ದ ಆಟೋ ರಿಕ್ಷಾದಲ್ಲಿ ಹೊರ ಹೋಗಿದ್ದ.
    ಅನುಮಾನಾಸ್ಪದ ಬ್ಯಾಗ್‌ನ್ನು ನಿಲ್ದಾಣದ ಅಧಿಕಾರಿಗಳು ತಜ್ಞರಿಂದ ಪರಿಶೀಲನೆಗೆ ಒಳಪಡಿಸಿದಾಗ ಅದರಲ್ಲಿ ಸ್ಫೋಟಕಗಳಿರುವುದು ಪತ್ತೆಯಾಗಿತ್ತು. ಅದನ್ನು ಬಳಿಕ ಕೆಂಜಾರಿನ ನಿರ್ಜನ ಪ್ರದೇಶಕ್ಕೆ ಕೊಂಡೊಯ್ದು ನಿಷ್ಕ್ರಿಯಗೊಳಿಸಲಾಗಿತ್ತು. ಆದಿತ್ಯ ರಾವ್ ಬೆಂಗಳೂರಿಗೆ ತೆರಳಿ ಜ.22ರಂದು ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿ ಶರಣಾಗಿದ್ದ. ಬಳಿಕ ಆರೋಪಿಯನ್ನು ಮಂಗಳೂರು ಪೊಲೀಸರು ಬಂಧಿಸಿ ಕರೆತಂದಿದ್ದು, ತೀವ್ರ ವಿಚಾರಣೆಗೊಳಪಡಿಸಿದ್ದರು. ಹಲವು ಆಯಾಮಗಳಲ್ಲಿ ತನಿಖೆ ನಡೆಸಿದ್ದು, ಪ್ರಸ್ತುತ ಆತ ನ್ಯಾಯಾಂಗ ಬಂಧನದಲ್ಲಿದ್ದಾನೆ.

    ಭಯ ಹುಟ್ಟಿಸುವ ಉದ್ದೇಶ: ಆದಿತ್ಯ ರಾವ್ ವಿರುದ್ಧ ಕಾನೂನು ಬಾಹಿರ ಚಟುವಟಿಕೆಗಳ ತಡೆ ಕಾಯ್ದೆ(ಯುಎಪಿಎ) ಅನ್ವಯ ಪ್ರಕರಣ ದಾಖಲಿಸಿ ಆರೋಪ ಪಟ್ಟಿ ಸಿದ್ಧಪಡಿಸಲಾಗಿದೆ. ಆರೋಪಿ ದುಷ್ಕೃತ್ಯ ಎಸಗಿ ಜನರಲ್ಲಿ ಭಯ ಹುಟ್ಟಿಸುವ ಉದ್ದೇಶದಿಂದ ಸ್ಫೋಟಗಳನ್ನು ಇರಿಸಿದ್ದ ಎನ್ನುವುದು ತನಿಖೆಯಿಂದ ತಿಳಿದು ಬಂದಿದೆ. ಬ್ಯಾಗಿನಲ್ಲಿ ಪತ್ತೆಯಾದ ಸಂಶಯಾಸ್ಪದ ವಸ್ತುಗಳು ಸ್ಫೋಟಕಗಳೇ ಆಗಿವೆ ಎನ್ನುವುದು ಎ್ಎಸ್‌ಎಲ್ ಪರೀಕ್ಷೆಯಿಂದ ಸಾಬೀತಾಗಿರುವುದು ಸೇರಿದಂತೆ ಪ್ರಮುಖ ವಿಷಯಗಳು ಆರೋಪ ಪಟ್ಟಿಯಲ್ಲಿವೆ.

    ಬ್ರೈನ್ ಮ್ಯಾಪಿಂಗ್ ಬಾಕಿ: ಆದಿತ್ಯ ರಾವ್‌ನ ಬ್ರೈನ್ ಮ್ಯಾಪಿಂಗ್ ಪ್ರಕ್ರಿಯೆ ಕರೊನಾ ಲಾಕ್‌ಡೌನ್‌ನಿಂದಾಗಿ ಬಾಕಿ ಉಳಿದಿದೆ. ನ್ಯಾಯಾಲಯದ ಅನುಮತಿ ಪಡೆಯಲಾಗಿದ್ದು, ಲಾಕ್‌ಡೌನ್ ಸಂಪೂರ್ಣ ತೆರವಾದ ಬಳಿಕ ಬೆಂಗಳೂರಿಗೆ ಕರೆದೊಯ್ದು ಈ ಪ್ರಕ್ರಿಯೆ ನಡೆಸಲಾಗುವುದು ಎಂದು ತನಿಖಾಧಿಕಾರಿ ಎಸಿಪಿ ಕೆ.ಯು.ಬೆಳ್ಳಿಯಪ್ಪ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts