More

    ಕೋವಿಡ್​ ಪರಿಹಾರ ನಿಧಿಗೆ ಒಂದು ಕೋಟಿ ರೂ. ನೀಡಿದ ಆದಿಚುಂಚನಗಿರಿ ಶ್ರೀಗಳು

    ಬೆಂಗಳೂರು: ಆದಿಚುಂಚಗಿರಿ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಕೋವಿಡ್​ ಪರಿಹಾರ ನಿಧಿಗೆ ಒಂದು ಕೋಟಿ ರೂಪಾಯಿಗಳ ದೇಣಿಗೆ ನೀಡಿದ್ದಾರೆ.
    ರಾಜ್ಯ ಸರ್ಕಾರದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 50 ಲಕ್ಷ ರೂ. ಹಾಗೂ ಪ್ರಧಾನ ಮಂತ್ರಿಗಳ ಪಿಎಂ ಕೇರ್ಸ್​ ನಿಧಿಗೆ 50 ಲಕ್ಷ ರೂ.ಗಳನ್ನು ಪ್ರತ್ಯೇಕವಾಗಿ ನೀಡಿದ್ದಾರೆ.

    ಸಿಎಂ ಬಿ.ಎಸ್​. ಯಡಿಯೂರಪ್ಪ ಭಾನುವಾರ ಬೆಂಗಳೂರಿನ ವಿಜಯನಗರದಲ್ಲಿರುವ ಆದಿಚುಂಚನಗಿರಿ ಶಾಖಾ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆರ್ಶೀವಾದ ಪಡೆದರು. ಸಿಎಂ ರಾಜಕೀಯ ಕಾರ್ಯದರ್ಶಿ ಎಸ್​. ಆರ್​. ವಿಶ್ವನಾಥ್ ಹಾಗೂ ಶಾಸಕ ಕೃಷ್ಣಪ್ಪ ಸಹ ಹಾಜರಿದ್ದರು.

    ಇದನ್ನೂ ಓದಿ; ಹೊರ ರಾಜ್ಯ, ವಿದೇಶದಿಂದ ರಾಜ್ಯಕ್ಕೆ ಬರುವವರಿಗೆ ಕಡ್ಡಾಯ ಕ್ವಾರಂಟೈನ್​

    ಸ್ವಾಮಿಜಿಗಳ ಜತೆ ಪ್ರತ್ಯೇಕವಾಗಿ ಸಿಎಂ ಚರ್ಚೆ ನಡೆಸಿದರು. ಕೋವಿಡ್ ಪರಿಸ್ಥಿತಿ ನಿಯಂತ್ರಣ ಹಿನ್ನೆಲೆ ಸ್ವಾಮೀಜಿ ಹಲವು ಸಲಹೆಯನ್ನು ನೀಡಿದ್ದಾರೆ.

    ರಾಜ್ಯದ ಪರಿಸ್ಥಿತಿ, ಹಾಗೂ ಸಮಸ್ಯೆಗಳ ಬಗ್ಗೆ ಶ್ರೀಗಳಿಗೆ ಅರಿವಿದೆ. ಕೋವಿಡ್ ಪರಿಸ್ಥಿತಿ ನಿಯಂತ್ರಣ , ಆರ್ಥಿಕ ಪರಿಸ್ಥಿತಿ ಸುಧಾರಣೆ ಸೇರಿ ಹಲವು ವಿಚಾರಗಳ ಬಗ್ಗೆ ಸ್ವಾಮೀಜಿ ಸಲಹೆ ನೀಡಿದ್ದಾರೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ

    ಪ್ರಧಾನಿ ಮೋದಿ ಜತೆ ಸೋಮವಾರ (ಮೇ 11) ವಿಡಿಯೋ ಕಾನ್ಫರೆನ್ಸ್ ಇದೆ. ಆ ಸಭೆಯಲ್ಲಿ ಯಾವ ನಿಲುವು ತಳೆಯಬೇಕೆಂಬುದರ ಬಗ್ಗೆಯೂ ಸಮಾಲೋಚನೆ ನಡೆಸಿದ್ದೇನೆ ಎಂದೂ ಯಡಿಯೂರಪ್ಪ ಹೇಳಿದರು.

    ಮೇ 12ರಿಂದ ಹಂತಹಂತವಾಗಿ ಸಂಚರಿಸಲಿವೆ ಪ್ಯಾಸೆಂಜರ್​ ರೈಲುಗಳು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts