ಬೆಂಗಳೂರು: ಆದಿಚುಂಚಗಿರಿ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಕೋವಿಡ್ ಪರಿಹಾರ ನಿಧಿಗೆ ಒಂದು ಕೋಟಿ ರೂಪಾಯಿಗಳ ದೇಣಿಗೆ ನೀಡಿದ್ದಾರೆ.
ರಾಜ್ಯ ಸರ್ಕಾರದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 50 ಲಕ್ಷ ರೂ. ಹಾಗೂ ಪ್ರಧಾನ ಮಂತ್ರಿಗಳ ಪಿಎಂ ಕೇರ್ಸ್ ನಿಧಿಗೆ 50 ಲಕ್ಷ ರೂ.ಗಳನ್ನು ಪ್ರತ್ಯೇಕವಾಗಿ ನೀಡಿದ್ದಾರೆ.
ಸಿಎಂ ಬಿ.ಎಸ್. ಯಡಿಯೂರಪ್ಪ ಭಾನುವಾರ ಬೆಂಗಳೂರಿನ ವಿಜಯನಗರದಲ್ಲಿರುವ ಆದಿಚುಂಚನಗಿರಿ ಶಾಖಾ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆರ್ಶೀವಾದ ಪಡೆದರು. ಸಿಎಂ ರಾಜಕೀಯ ಕಾರ್ಯದರ್ಶಿ ಎಸ್. ಆರ್. ವಿಶ್ವನಾಥ್ ಹಾಗೂ ಶಾಸಕ ಕೃಷ್ಣಪ್ಪ ಸಹ ಹಾಜರಿದ್ದರು.
ಇದನ್ನೂ ಓದಿ; ಹೊರ ರಾಜ್ಯ, ವಿದೇಶದಿಂದ ರಾಜ್ಯಕ್ಕೆ ಬರುವವರಿಗೆ ಕಡ್ಡಾಯ ಕ್ವಾರಂಟೈನ್
ಸ್ವಾಮಿಜಿಗಳ ಜತೆ ಪ್ರತ್ಯೇಕವಾಗಿ ಸಿಎಂ ಚರ್ಚೆ ನಡೆಸಿದರು. ಕೋವಿಡ್ ಪರಿಸ್ಥಿತಿ ನಿಯಂತ್ರಣ ಹಿನ್ನೆಲೆ ಸ್ವಾಮೀಜಿ ಹಲವು ಸಲಹೆಯನ್ನು ನೀಡಿದ್ದಾರೆ.
ರಾಜ್ಯದ ಪರಿಸ್ಥಿತಿ, ಹಾಗೂ ಸಮಸ್ಯೆಗಳ ಬಗ್ಗೆ ಶ್ರೀಗಳಿಗೆ ಅರಿವಿದೆ. ಕೋವಿಡ್ ಪರಿಸ್ಥಿತಿ ನಿಯಂತ್ರಣ , ಆರ್ಥಿಕ ಪರಿಸ್ಥಿತಿ ಸುಧಾರಣೆ ಸೇರಿ ಹಲವು ವಿಚಾರಗಳ ಬಗ್ಗೆ ಸ್ವಾಮೀಜಿ ಸಲಹೆ ನೀಡಿದ್ದಾರೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ
ಪ್ರಧಾನಿ ಮೋದಿ ಜತೆ ಸೋಮವಾರ (ಮೇ 11) ವಿಡಿಯೋ ಕಾನ್ಫರೆನ್ಸ್ ಇದೆ. ಆ ಸಭೆಯಲ್ಲಿ ಯಾವ ನಿಲುವು ತಳೆಯಬೇಕೆಂಬುದರ ಬಗ್ಗೆಯೂ ಸಮಾಲೋಚನೆ ನಡೆಸಿದ್ದೇನೆ ಎಂದೂ ಯಡಿಯೂರಪ್ಪ ಹೇಳಿದರು.