ರಟ್ಟಿಹಳ್ಳಿಯಲ್ಲಿ ಪ್ರಜಾಸೌಧ ಕಟ್ಟಲು ಆಡಳಿತಾತ್ಮಕ ಅನುಮೋದನೆ: ಶಾಸಕ ಯು.ಬಿ. ಬಣಕಾರ

blank

ರಟ್ಟಿಹಳ್ಳಿ: ಪಟ್ಟಣದಲ್ಲಿ ಈಗಾಗಲೇ ಸರ್ಕಾರದಿಂದ ಪ್ರಜಾಸೌಧ ಕಟ್ಟಡ ನಿರ್ವಣಕ್ಕೆ ನೀಡಲಾಗಿದ್ದ ಗ್ರೀನ್ ಸಿಗ್ನಲ್​ಗೆ ಅನುಗುಣವಾಗಿ ಕರ್ನಾಟಕ ಗೃಹ ಮಂಡಳಿಯಿಂದ ಅವಶ್ಯವಿರುವ ನಕ್ಷೆ ತಯಾರಿಸಿ ಮತ್ತು ಸವಿವರ ಅಂದಾಜು ಪಟ್ಟಿ ವರದಿ ಸಲ್ಲಿಸಿ ಸರ್ಕಾರದಿಂದ ಗುರುವಾರ ಆಡಳಿತಾತ್ಮಕವಾಗಿ ಅನುಮೋದನೆ ಪಡೆಯಲಾಗಿದೆ ಎಂದು ಶಾಸಕ ಯು.ಬಿ. ಬಣಕಾರ ಹೇಳಿದರು.

ಈ ಕುರಿತು ‘ವಿಜಯವಾಣಿ’ಯೊಂದಿಗೆ ಮಾತನಾಡಿದ ಅವರು, ಹೊಸದಾಗಿ ರಚನೆಯಾಗಿರುವ ರಟ್ಟಿಹಳ್ಳಿ ತಾಲೂಕು ಕೇಂದ್ರಕ್ಕೆ ತಾಲೂಕು ಆಡಳಿತ ಕೇಂದ್ರ ಕಟ್ಟಡ ಪ್ರಜಾಸೌಧ ನಿರ್ವಣಕ್ಕೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿತ್ತು. ಮನವಿಗೆ ಸ್ಪಂದಿಸಿರುವ ಸರ್ಕಾರ ಕರ್ನಾಟಕ ಗೃಹ ಮಂಡಳಿ ಸಲ್ಲಿಸಿರುವ ಅಂದಾಜು ಮೊತ್ತ 8 ಕೋಟಿ 60 ಲಕ್ಷ ರೂ.ಗಳ ವೆಚ್ಚದಲ್ಲಿ ‘ಎ’ ಮಾದರಿಯಲ್ಲಿ ಕಟ್ಟಡ ನಿರ್ವಣಕ್ಕೆ ಆಡಳಿತಾತ್ಮಕವಾಗಿ ಅನುಮೋದನೆಯ ಆದೇಶ ನೀಡಿದೆ. ಒಂದು ವಾರದಲ್ಲಿ ಟೆಂಡರ್ ಕರೆದು ಶೀಘ್ರವೇ ಕಟ್ಟಡದ ಕಾಮಗಾರಿ ಆರಂಭಿಸಲಾಗುವುದು. ತಾಲೂಕು ಆಡಳಿತ ಕೇಂದ್ರದ ಕಟ್ಟಡದಲ್ಲಿ ವಿವಿಧ ಇಲಾಖೆಗಳ ಕಚೇರಿಗಳೂ ಆರಂಭವಾಗುವುದರಿಂದ ತಾಲೂಕಿನ ಜನತೆಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.

ಸ್ಥಳ ಪರಿಶೀಲಿಸಿ ವರದಿ ಸಲ್ಲಿಕೆ:

ಸರ್ಕಾರದ ಆದೇಶದಂತೆ ಪ್ರಜಾಸೌಧ ಕಟ್ಟಡ ನಿರ್ವಣಕ್ಕೆ ಅವಶ್ಯವಿರುವ ಜಾಗಕ್ಕೆ ಸಂಬಂಧಿಸಿದಂತೆ ಕಂದಾಯ ಇಲಾಖೆಯ ಸರ್ವೆ ನಂ. 87ರಲ್ಲಿ ಒಟ್ಟು 7 ಎಕರೆ ಜಾಗದಲ್ಲಿ 1 ಎಕರೆ 20 ಗುಂಟೆ ಜಾಗವನ್ನು ಪ್ರಜಾಸೌಧ ನಿರ್ವಣಕ್ಕೆ ಅಂತಿಮಗೊಳಿಸಲಾಗಿತ್ತು. ಇತ್ತೀಚೆಗೆ ಜಿಲ್ಲಾಧಿಕಾರಿಗಳು, ಕರ್ನಾಟಕ ಗೃಹ ಮಂಡಳಿಯ ಜಿಲ್ಲಾ ಮಟ್ಟದ ಅಧಿಕಾರಿಗಳು ಶಾಸಕ ಯು.ಬಿ. ಬಣಕಾರ ಭೇಟಿ ನೀಡಿ ಪರಿಶೀಲಿಸಿ ಈ ಕುರಿತು ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿ ಅನುಮೋದನೆ ಪಡೆಯಲಾಗಿದೆ. 

Share This Article

ಸಂಬಳ ಸಾಲ್ತಿಲ್ಲ! ಸಾಲ ತೀರಿಸಲು ಚಿನ್ನದ ಸಾಲ ತಗೋತ್ತಿದ್ದೀರಾ? ಹಾಗಿದ್ರೆ ಈ ತಪ್ಪುಗಳನ್ನು ಮಾತ್ರ ಮಾಡಬೇಡಿ | Gold Loan

Gold Loan: ಸಂಸ್ಥೆ ಕೊಡುತ್ತಿರುವ ಸಂಬಳ ನಮಗೆ ಮಾತ್ರವಲ್ಲ, ನಮ್ಮ ಸಾಲ ತೀರಿಸಲು ಸಹ ಸಾಲುತ್ತಿಲ್ಲ…

ಭಾರತದಲ್ಲಿ ಅನಾರೋಗ್ಯಕರ ಆಹಾರ ಸೇವನೆಯೇ ಹೆಚ್ಚು: ಶೇ. 56 ರೋಗಗಳಿಗೆ ಕೆಟ್ಟ ಆಹಾರ ಪದ್ಧತಿ ಕಾರಣವೆಂದ ಏಮ್ಸ್! Indians Food

Indians Food : ಭಾರತದಲ್ಲಿ ಬೊಜ್ಜು ಅಥವಾ ಸ್ಥೂಲಕಾಯತೆ ಇಂದು ಸಾಮಾನ್ಯ ಹಾಗೂ ಸಂಕೀರ್ಣ ಕಾಯಿಲೆಗಳಲ್ಲಿ…

ನೀವು ಚಿಕನ್ ಅಥವಾ ಮಟನ್​ ಲಿವರ್​ ತಿಂತಿರಾ? ಹಾಗಾದ್ರೆ ಎಚ್ಚರ! ಈ ವಿಚಾರ ನಿಮಗೆ ಗೊತ್ತಿರಲೇಬೇಕು… Liver

Liver : ಮಾಂಸಾಹಾರ ಬಹುತೇಕರ ಪ್ರಿಯವಾದ ಆಹಾರ. ಬೇರೆ ಯಾವುದನ್ನು ಬೇಕಾದರೂ ಬಿಡುತ್ತೇನೆ ಆದರೆ, ಒಂದು…