ಮಾನವೀಯ ಮೌಲ್ಯ ಅಳವಡಿಸಿಕೊಳ್ಳಿ

Adopt human value

ಕಲಾದಗಿ: ಯುವಕರು ಜೀವನದಲ್ಲಿ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು. ಸಮಾಜದಲ್ಲಿ ನೊಂದಿರುವ ದುರ್ಬಲ ವರ್ಗದವರ ಸೇವೆಗೆ ಸಮರ್ಪಿಸಿಕೊಳ್ಳುವುದು ರೆಡ ಕ್ರಾಸ ಸಂಸ್ಥೆಯ ಉದ್ದೇಶವಾಗಿದೆ ಎಂದು ಸ್ಕೌಟ್ಸ್ ಮತ್ತು ಗೈಡ್ಸ್ ಸಂಯೋಜಕ ಡಾ.ಯಲ್ಲಪ್ಪ ಜೀ ಹೇಳಿದರು.

blank

ಸ್ಥಳಿಯ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ವಿಶ್ವ ರೆಡ್ ಕ್ರಾಸ್ ದಿನಾಚರಣೆಯ ಪ್ರಯುಕ್ತ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬದುಕಿನಲ್ಲಿ ಬರುವ ಅಡೆತಡೆಗಳನ್ನು ಹೋಗಲಾಡಿಸಲು ಮತ್ತೊಬ್ಬರಿಗೆ ಸಹಾಯ ಸಹಕಾರ ನೀಡುವ ಗುಣ ಬೆಳೆಸಿಕೊಳ್ಳಬೇಕು ಎಂದರು.

ಪ್ರಾಚಾರ್ಯ ಡಾ. ಎಚ್.ಬಿ. ಮಹಾಂತೇಶ ಅಧ್ಯಕ್ಷತೆ ವಹಿಸಿ ಮಾತನಾಡಿ, ಇಂದಿನ ಯುವಕರಲ್ಲಿ ಮಾನವೀಯ ಮೌಲ್ಯಗಳು ಮರೆಯಾಗುತ್ತಿವೆ. ಯುವಕರು ತಮ್ಮ ಜವಾಬ್ದಾರಿಗಳನ್ನು ಮರೆಯದೆ ಹಿರಿಯರ, ವೃದ್ಧರ ಅವಶ್ಯಕತೆಗಳಿಗೆ ಸಹಾಯ ಮಾಡುವುದನ್ನು ಮೈಗೂಡಿಸಿಕೊಳ್ಳಬೇಕು ಎಂದರು.

ಪ್ರಾಧ್ಯಾಪಕಿ ಡಾ. ಎಚ್.ಎ. ಬಿಂದು ಪ್ರಾಸ್ತಾವಿಕವಾಗಿ ಮಾತನಾಡಿದರು. ಸಹಾಯಕ ಪ್ರಾದ್ಯಾಪಕಿಯರಾದ ಡಾ. ಸರೋಜಿನಿ ಹೊಸಕೇರಿ, ಸಿ.ವೈ. ಮೆಣಸಿನಕಾಯಿ, ಮೌಲಾಸಾಬ ಮುಲ್ಲಾ ಇದ್ದರು. ಪ್ರಾದ್ಯಾಪಕಿ ಯಂಕಮ್ಮ ಸ್ವಾಗತಿಸಿದರು, ಡಾ. ಪುಂಡಲೀಕ ಹುನ್ನಳ್ಳಿ ನಿರೂಪಿಸಿದರು, ಶ್ರೀದೇವಿ ಮುಂಡಗನೂರ ವಂದಿಸಿದರು.

Share This Article
blank

ರಾತ್ರಿ 9 ಗಂಟೆ ಮೇಲೆ ಊಟ ಮಾಡೋದ್ರಿಂದ ಅನಾನುಕೂಲಗಳೇ ಅಧಿಕ: ಊಟಕ್ಕೆ ಸರಿಯಾದ ಸಮಯ ಯಾವುದು? | Eating

Eating: ಇತ್ತೀಚಿನ ದಿನಗಳಲ್ಲಿ ಅನೇಕ ಜನರು ತಡವಾಗಿ ಭೋಜನ ಮಾಡುತ್ತಿದ್ದಾರೆ, ಆದರೆ ವೈದ್ಯಕೀಯ ತಜ್ಞರು ಇದು…

ಮಳೆಗಾಲದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ ದೇಸಿ ಸೂಪರ್‌ಫುಡ್‌ ತಿನ್ನಿ | Immunity

Immunity: ಮಳೆಗಾಲ ಬಂತೆಂದರೆ ಸೋಂಕುಗಳು ಬರುವುದು ಸಹ ಸಹಜ. ತಂಪಾದ ಗಾಳಿಗೆ ಮನೆಗಳ ಸುತ್ತಲು ಬ್ಯಾಕ್ಟೀರಿಯಾ…

blank