ಶಂಕರಾಚಾರ್ಯರ ತತ್ವ ಅಳವಡಿಸಿಕೊಳ್ಳಿ

Adopt Shankaracharya's Tattva

ಲೋಕಾಪುರ: ಆದಿ ಶಂಕರಾಚಾರ್ಯರು ತಮ್ಮ ನಿಶ್ಚಲ ಧರ್ಮಭಾವನೆಯಿಂದ ಭಾರತ ದೇಶವನ್ನೆಲ್ಲ ಸಂಚರಿಸಿ ಹಿಂದು ಧರ್ಮದ ತತ್ವವನ್ನು ಜನಮಾನಸದಲ್ಲಿ ಬಿತ್ತಿದರು ಎಂದು ಜ್ಞಾನೇಶ್ವರ ಮಠದ ಪೀಠಾಧಿಕಾರಿ ಬ್ರಹ್ಮಾನಂದ ಮಹಾಸ್ವಾಮಿಗಳು ಹೇಳಿದರು.

blank

ಪಟ್ಟಣದ ಜ್ಞಾನೇಶ್ವರ ಮಠದಲ್ಲಿ ಆಯೋಜಿಸಿದ್ದ ಆದಿಜಗದ್ಗುರು ಶ್ರೀ ಶಂಕರಾಚಾರ್ಯರ ಜಯಂತಿಯಲ್ಲಿ ಮಾತನಾಡಿದ ಅವರು, ಅಹಂ ಬ್ರಹ್ಮಾಸ್ಮಿ ಎಂಬ ಮಹಾವಾಕ್ಯದ ಮೂಲಕ ಈ ಜಗತ್ತಿನ ಪ್ರತಿ ಜೀವಿಯಲ್ಲೂ ದೈವತ್ವವಿದೆ ಎಂಬ ಸತ್ಯ ಸಾರಿದ್ದಾರೆ ಎಂದರು.

ಕಲಾವಿದ ಹಾಗೂ ಸಮಾಜ ಸೇವಕ ಕೃಷ್ಣ ಭಜಂತ್ರಿ ಮಾತನಾಡಿ, ಶಂಕರಚಾರ್ಯರ ತತ್ವ, ಆದರ್ಶ ಇಂದಿನ ಯುವ ಜನತೆ ಅಳವಡಿಸಿಕೊಳ್ಳಬೇಕು. ಶಂಕರಾಚಾರ್ಯರು ಬೋಧಿಸಿದಂತೆ ನಾವೆಲ್ಲರೂ ಒಳಗೆ ದೈವತ್ವವನ್ನು ಧರಿಸಿಕೊಂಡವರಾಗಿದ್ದೇವೆ. ಈ ತತ್ವವನ್ನು ಜೀವನದೊಳಗೆ ಅಳವಡಿಸಿಕೊಂಡಾಗ ಪ್ರಪಂಚವೇ ದೇವಮಯವಾಗುತ್ತದೆ ಎಂದರು.

ಜ್ಞಾನೇಶ್ವರ ಮಠದ ಸದ್ಭಕ್ತಿ ಮಂಡಳಿ ಉಪಸ್ಥಿತರಿದ್ದರು.

Share This Article
blank

ತೂಕ ಇಳಿಸಿಕೊಳ್ಳಬೇಕೆಂದರೆ ಸಂಜೆ 7 ಗಂಟೆಯ ಮೊದಲು ಮಾತ್ರ ಊಟ ಮಾಡಿ! dinner

dinner :  ಇತ್ತೀಚಿನ ದಿನಗಳಲ್ಲಿ ಅನೇಕ ಜನರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಇದಕ್ಕಾಗಿ ಅವರು ವ್ಯಾಯಾಮ…

ಹೊಳೆಯುವ ಚರ್ಮಕ್ಕಾಗಿ ಬಾಳೆಹಣ್ಣಿನ ಸಿಪ್ಪೆ! banana peel ಬಳಸುವ ಸರಳ ಮಾರ್ಗಗಳು ಇಲ್ಲಿವೆ…

 banana peel : ಬಾಳೆಹಣ್ಣನ್ನು ತಿನ್ನಲು ಇಷ್ಟಪಡುತ್ತಾರೆ. ಅನೇಕ ಜನರು ಬಾಳೆಹಣ್ಣಿನಿಂದ ವಿವಿಧ ರುಚಿಕರವಾದ ಸಿಹಿತಿಂಡಿಗಳನ್ನು ಸಹ…

blank