More

    ಹೂಲಗೇರಿ ಏಕಪಕ್ಷೀಯ ನಿರ್ಧಾರಗಳಿಂದ ಬೇಸರ

    ಲಿಂಗಸುಗೂರು: ಮಾಜಿ ಶಾಸಕ ಡಿ.ಎಸ್.ಹೂಲಗೇರಿ ಅವರ ನಡವಳಿಕೆ ಮತ್ತು ಏಕಪಕ್ಷೀಯ ನಿರ್ಧಾರಗಳಿಂದ ಬೇಸತ್ತು ಅವರಿಂದ ಅಂತರ ಕಾಯ್ದುಕೊಂಡಿದ್ದರೂ ಕಾಂಗ್ರೆಸ್‌ನಲ್ಲೇ ಮುಂದುವರಿಯುವುದಾಗಿ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪನಗೌಡ ಪಾಟೀಲ್ ಹೇಳಿದರು.


    ಪಟ್ಟಣದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿ, ಕಳೆದ ಮೂರು ದಶಕಗಳಿಂದ ಕಾಂಗ್ರೆಸ್ ಸಂಘಟನೆ ಮತ್ತು ಕಳೆದ ಮೂರು ವಿಧಾನಸಭಾ ಚುನಾವಣೆಯಲ್ಲಿ ಡಿ.ಎಸ್.ಹೂಲಗೇರಿ ಪರ ಕೆಲಸ ಮಾಡಿದ್ದೇವೆ. ಆದರೆ, ಹೂಲಗೇರಿ ಏಕಪಕ್ಷೀಯ ನಿರ್ಧಾರಗಳಿಂದ ಪಕ್ಷದಲ್ಲಿ ಗುಂಪುಗಾರಿಕೆ ಕಂಡು ಬರುತ್ತಿದೆ ಎಂದು ದೂರಿದರು.


    ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಾಗೂ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಸ್ಥಾನ ಯಾರನ್ನು ಆಯ್ಕೆ ಮಾಡಬೇಕೆಂಬುದರ ಬಗ್ಗೆ ಪಕ್ಷದ ವೇದಿಕೆಯಲ್ಲಿ ಚರ್ಚಿಸಿಲ್ಲ. ಹಲವು ದಶಕಗಳಿಂದ ಪಕ್ಷಕ್ಕಾಗಿ ದುಡಿದವರಿಗೆ ಸ್ಥಾನಮಾನ ನೀಡಬೇಕಿತ್ತು. ಆದರೆ ಕಳೆದ ವಿಧಾನಸಭಾ ಚುನಾವಣೆ ವೇಳೆ ಕಾಂಗ್ರೆಸ್ ಸೇರ್ಪಡೆಗೊಂಡ ಬಿಜೆಪಿ ಮತ್ತು ಆರ್‌ಎಸ್‌ಎಸ್ ಸಂಸ್ಕೃತಿಯಿಂದ ಬಂದಿರುವ ಗೋವಿಂದ ನಾಯಕರನ್ನು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಆರೋಪಿಸಿದರು.


    ಪಕ್ಷದಲ್ಲಿ ಹಿರಿಯ ಮುಖಂಡರಾದ ಡಿ.ಜಿ.ಗುರಿಕಾರ, ಮಲ್ಲಣ್ಣ ವಾರದ ಸೇರಿ ಇನ್ನೂ ಹಲವರನ್ನು ಕಡೆಗಣಿಸಲಾಗಿದೆ. ಇಂತಹ ಬೆಳವಣಿಗೆಗಳಿಂದ ಲೋಕಸಭೆ ಹಾಗೂ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಪಕ್ಷಕ್ಕೆ ಹಿನ್ನಡೆಯಾಗಲಿದೆ. ಪಕ್ಷದ ವರಿಷ್ಠರ ಗಮನಕ್ಕೆ ಎಲ್ಲ ವಿಚಾರಗಳನ್ನು ತರಲಾಗುವುದು ಎಂದು ಭೂಪನಗೌಡ ಪಾಟೀಲ್ ತಿಳಿಸಿದರು. ಪ್ರಮುಖರಾದ ಪಾಮಯ್ಯ ಮುರಾರಿ, ಗುಂಡಪ್ಪ ನಾಯಕ, ಮಲ್ಲಣ್ಣ ವಾರದ, ಏಕ ಅಮರಣ್ಣ, ಆದೇಶ ನಾಯಕ, ಚಂದ್ರಣ್ಣ ಹಳ್ಳಿ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts