More

    ಆಮ್‌ ಆದ್ಮಿ ಪಾರ್ಟಿಗೆ ವಕೀಲ ಜಗದೀಶ್ ಸೇರ್ಪಡೆ

    ಬೆಂಗಳೂರು: ಅಭಿವೃದ್ಧಿಪರ ಆಡಳಿತ ನೀಡಲು ವಿಫಲವಾಗಿರುವ ಹಾಗೂ ಸದಾ ಭ್ರಷ್ಟಾಚಾರದಲ್ಲಿ ಮುಳುಗಿರುವ ಬಿಜೆಪಿ, ಕಾಂಗ್ರೆಸ್, ಜೆಡಿಎಸ್‌ ಪಕ್ಷಗಳಿಂದ ರಾಜ್ಯವನ್ನು ಕಾಪಾಡಲು ಆಮ್‌ ಆದ್ಮಿ ಪಾರ್ಟಿ(ಎಎಪಿ)ಯ ಅವಶ್ಯಕತೆ ರಾಜ್ಯಕ್ಕಿದೆ ಎಂದು ವಕೀಲ ಹಾಗೂ ಸಾಮಾಜಿಕ ಕಾರ್ಯಕರ್ತ ಕೆ.ಎನ್‌.ಜಗದೀಶ್‌ ಮಹಾದೇವ್‌ ಹೇಳಿದ್ದಾರೆ.

    ಬೆಂಗಳೂರಿನ ಪ್ರೆಸ್‌ ಕ್ಲಬ್‌ನಲ್ಲಿ ಇಂದು ನಡೆದ ಸಮಾರಂಭದಲ್ಲಿ ಎಎಪಿಗೆ ಸೇರ್ಪಡೆಗೊಂಡ ಬಳಿಕ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ಜಗದೀಶ್‌, ಸುಮಾರು 10 ವರ್ಷಗಳಿಂದ ಭ್ರಷ್ಟಾಚಾರದ ವಿರುದ್ಧ ಕಾನೂನಾತ್ಮಕ ಹೋರಾಟ ಮಾಡುತ್ತಿದ್ದೇನೆ. ಇದಕ್ಕಾಗಿ ದೊಡ್ಡದೊಡ್ಡ ರಾಜಕಾರಣಿಗಳನ್ನು ಎದುರು ಹಾಕಿಕೊಂಡು ಮುನ್ನಡೆಯುತ್ತಿದ್ದೇನೆ. ಅನೇಕ ಸಂದರ್ಭಗಳಲ್ಲಿ ಕಾರ್ಮಿಕರು, ರೈತರು ಹಾಗೂ ಯುವಜನತೆಯ ನ್ಯಾಯಯುತ ಹೋರಾಟಕ್ಕೆ ಬೆಂಬಲವಾಗಿ ನಿಂತ ತೃಪ್ತಿಯಿದೆ. ನನ್ನಂತೆಯೇ ಎಎಪಿ ಕೂಡ ಭ್ರಷ್ಟಾಚಾರದ ವಿರುದ್ಧ ಹೋರಾಡುತ್ತಿದ್ದು, ಪಕ್ಷ ಸೇರ್ಪಡೆಯಿಂದ ನನ್ನ ಹೋರಾಟದ ಶಕ್ತಿ ಹೆಚ್ಚಾಗಲಿದೆ. ಪಕ್ಷಕ್ಕೂ ನನ್ನಿಂದ ಅನುಕೂಲವಾಗುವ ದೃಢ ವಿಶ್ವಾಸವಿದೆ ಎಂದರು.

    ಇದನ್ನೂ ಓದಿ: ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಅವಕಾಶ ಸಿಗದೆ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಪೂರಕ ಪರೀಕ್ಷೆಯಲ್ಲಿ ರಾಜ್ಯಕ್ಕೆ ಟಾಪರ್

    “ದೆಹಲಿಯ ಕೇಜ್ರಿವಾಲ್‌ ಸರ್ಕಾರವು ಜನಪರ ಆಡಳಿತ ನೀಡುತ್ತಿದ್ದರೆ, ಪ್ರಧಾನಿ ನರೇಂದ್ರ ಮೋದಿಯವರ ಸರ್ಕಾರವು ಜನವಿರೋಧಿ ಆಡಳಿತ ನೀಡುತ್ತಿದೆ. ಕೇಜ್ರಿವಾಲ್‌ ಆಡಳಿತದಲ್ಲಿ ಕುಡಿಯುವ ನೀರು, ವಿದ್ಯುತ್‌, ವೈದ್ಯಕೀಯ ಸೌಲಭ್ಯ ಮುಂತಾದವುಗಳು ಒಂದು ಮಿತಿಯವರೆಗೆ ಉಚಿತವಾಗಿ ಸಿಗುತ್ತಿದೆ. ಆದರೆ ಮೋದಿ ಸರ್ಕಾರ ಪೆಟ್ರೋಲ್‌, ಡಿಸೇಲ್‌, ಗ್ಯಾಸ್‌ ಬೆಲೆಯನ್ನು ಮನಬಂದಂತೆ ಹೆಚ್ಚಿಸುವ ಮೂಲಕ ಸಾಮಾನ್ಯ ಜನರನ್ನು ಹೈರಾಣಾಗಿಸುತ್ತಿದೆ. ಇದರ ವಿರುದ್ಧ ಹೋರಾಡಲು ಯುವಜನತೆ ಮುಂದಾಗಬೇಕು. ಭ್ರಷ್ಟ ಹಾಗೂ ಕೋಮುವಾದಿ ನಾಯಕರೇ ತುಂಬಿರುವ ಬಿಜೆಪಿಯನ್ನು ಅಧಿಕಾರದಿಂದ ಕಿತ್ತೊಗೆಯುವ ಪ್ರತಿಜ್ಞೆ ಮಾಡಬೇಕು” ಎಂದರು.

    ಎಎಪಿ ರಾಜ್ಯ ಸಂಚಾಲಕ ಪೃಥ್ವಿ ರೆಡ್ಡಿ ಮಾತನಾಡಿ, “ಒಳ್ಳೆಯ ಜನರು ಒಗ್ಗೂಡಿದರೆ ಸಾಮಾನ್ಯರ ಜೀವನದಲ್ಲಿ ಕ್ರಾಂತಿಕಾರಿ ಬದಲಾವಣೆಯನ್ನು ತರಬಹುದು ಎಂಬುದನ್ನು ದೆಹಲಿ ರಾಜಕೀಯವು ನಮಗೆ ತೋರಿಸಿದೆ. ದಶಕಗಳಿಂದ ನಮ್ಮ ರಾಜ್ಯದಲ್ಲಿ ಅನೇಕ ವ್ಯಕ್ತಿಗಳು ಮತ್ತು ಸಂಘಟನೆಗಳು ವಿವಿಧ ಸಮಸ್ಯೆಗಳು ಮತ್ತು ಅನ್ಯಾಯದ ವಿರುದ್ಧ ಪ್ರತ್ಯೇಕವಾಗಿ ಹೋರಾಡುತ್ತಿವೆ. ದೊಡ್ಡ ಪ್ರಮಾಣದ ಬದಲಾವಣೆ ತರಲು ಅಂಥವರೆಲ್ಲರೂ ಒಟ್ಟಾಗಿ ಸೇರುವ ಸಮಯ ಈಗ ಬಂದಿದೆ ಎಂದರು.

    ಇದನ್ನೂ ಓದಿ: ವಿಜಯಪುರ ತಾಲೂಕು ಹೋರಾಟ ಪುನರಾರಂಭ, ಶಾಸಕರ ಬೆಂಬಲ ಕೋರಲು ಹೋರಾಟ ಸಮಿತಿ ನಿರ್ಧಾರ

    ‘ವಕೀಲ್ ಸಾಬ್‌’ ಎಂದು ಪ್ರೀತಿಯಿಂದ ಕರೆಯಲ್ಪಡುವ ಕೆ.ಎನ್‌.ಜಗದೀಶ್‌ ಸಾಮಾನ್ಯ ಜನರಿಗಾಗಿ ಧೈರ್ಯದಿಂದ ಹೋರಾಡಿ ರಾಜ್ಯಾದ್ಯಂತ ಜನರ ಹೃದಯ ಗೆದ್ದಿದ್ದಾರೆ. ಇವರ ಸೇರ್ಪಡೆಯಿಂದ ಪಕ್ಷಕ್ಕೆ ಆನೆಬಲ ಬಂದಂತಾಗಿದೆ. ಅವರಿಗೆ ಅನೇಕ ಹಿತೈಷಿಗಳು, ಅಪಾರ ಅನುಯಾಯಿಗಳಿದ್ದು, ನಮ್ಮ ಧ್ವನಿಯನ್ನು ಇನ್ನಷ್ಟು ಗಟ್ಟಿಗೊಳಿಸಲು ಹಾಗೂ ಪಕ್ಷದ ಸಂದೇಶವನ್ನು ಕರ್ನಾಟಕದ ಮೂಲೆಮೂಲೆಗೂ ತಲುಪಿಸಲು ಸಹಾಯವಾಗುತ್ತದೆ ಎಂದು ರೆಡ್ಡಿ ಹೇಳಿದರು.

    ಪಕ್ಷದ ಬೆಂಗಳೂರು ನಗರ ಅಧ್ಯಕ್ಷ ಮೋಹನ್‌ ದಾಸರಿ, ಮುಖಂಡರಾದ ಲಕ್ಷ್ಮೀಕಾಂತ ರಾವ್‌, ನಂಜಪ್ಪ ಕಾಳೇಗೌಡ, ಕುಶಲಸ್ವಾಮಿ, ಉಷಾ ಮೋಹನ್‌, ಬಿ.ಟಿ.ನಾಗಣ್ಣ, ಸುರೇಶ್‌ ರಾಥೋಡ್‌, ಜಗದೀಶ್‌ ವಿ. ಸದಂ ಮತ್ತಿತರರು ಭಾಗವಹಿಸಿದ್ದರು.

    ರಾಂಪ್​ ವಾಕ್​ ಮಾಡಿ ಗಮನ ಸೆಳೆದ ಕರೀನಾ; ‘ನನ್ನ ಆಯ್ಕೆಗೆ ಬಿಟ್ಟಿದ್ದರೆ, ಕಫ್ತಾನ್ ತೊಟ್ಟಿರುತ್ತಿದ್ದೆ’ ಎಂದರು!

    ಮದುವೆಯ ವಾಯ್ದೆ ನೀಡಿ ಶೋಷಿಸಿದ ಮದರಸಾ ಶಿಕ್ಷಕನ ವಿರುದ್ಧ ರೇಪ್​ ಕೇಸ್

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts