ಗುವಾಹಟಿ: ಅಸ್ಸಾಂನಲ್ಲಿ ದಿನದಿಂದ ದಿನಕ್ಕೆ ಅಫ್ರಿಕನ್ ಹಂದಿ ಜ್ವರ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದೀಗ ಲಖಿಂಪುರ್ ಜಿಲ್ಲೆಯಲ್ಲಿ ರೋಗ ಪತ್ತೆಯಾಗಿದೆ. ಹಂದಿಜ್ವರ ಪ್ರಕರಣ ವರದಿಯಾಗುತ್ತಿದ್ದಂತೆ ಎಚ್ಚೆತ್ತಿರುವ ಜಿಲ್ಲಾಡಳಿತ ಪ್ರದೇಶದ ಸುತ್ತ ಫಾರ್ಮ್ಗಳಲ್ಲಿ ಸಾಕಿರುವ ಹಂದಿಗಳನ್ನು ಹತ್ಯೆ ಮಾಡಿದೆ.
ಪಶು ವೈದ್ಯರ ಸಹಾಯದೊಂದಿಗೆ ಸೋಂಕು ಕಾಣಿಸಿಕೊಂಡಿರುವ ಪ್ರದೇಶದ ಸುತ್ತ ಮುತ್ತ ಸಾಕಲಾಗಿದ್ದ ಒಂದು ಸಾವಿರಕ್ಕೂ ಹೆಚ್ಚು ಹಂದಿಗಳನ್ನು ಕರೆಂಟ್ ಶಾಕ್ ನೀಡಿ ಕೊಲ್ಲಲಾಗಿದೆ ಎಂದು ಪಶು ಸಂಗೋಪನಾ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ: VIDEO| ಯಾವ ಧರ್ಮ ಸಮಾನ ಹಕ್ಕುಗಳನ್ನು ನೀಡುವುದಿಲ್ಲ ಅದು ರೋಗಕ್ಕೆ ಸಮ: ಸಚಿವ ಪ್ರಿಯಾಂಕ ಖರ್ಗೆ
ಈ ಕುರಿತು ಪ್ರತಿಕ್ರಿಯಿಸಿರುವ ಪಶು ಸಂಗೋಪನಾ ಮತ್ತು ಪಶು ವೈದ್ಯಕೀಯ ಸಚಿವ ಅತುಲ್ ಬೋರಾ ಸೋಂಕನ್ನು ತಡೆಗಟ್ಟುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಅಸ್ಸಾಂ ಸೇರಿದಂತೆ ಈಶಾನ್ಯ ರಾಜ್ಯಗಳಲ್ಲಿ ಏವಿಯನ್ ಇನ್ಫ್ಫ್ಲೂಯೆಂಜಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಈ ನಿಟ್ಟಿನಲ್ಲಿ ಹೊರರಾಜ್ಯಗಳಿಂದ ಕೋಳಿ ಹಾಗೂ ಹಂದಿಗಳ ಅಮದಿಗೆ ನಿಷೇಧ ಹೇರಲಾಗಿದೆ.
ಸೋಂಕು ಕಾಣಿಸಿಕೊಂಡ ಪ್ರದೇಶದ ಸುತ್ತ ಮುತ್ತ ಸಾಕಲಾಗಿದ್ದ ಒಂದು ಸಾವಿರಕ್ಕೂ ಹೆಚ್ಚು ಹಂದಿಗಳನ್ನು ಪಶು ವೈದ್ಯರು ಕರೆಂಟ್ ಶಾಕ್ ನೀಡಿ ಸಾಯಿಸಿದ್ದಾರೆ. ರಾಜ್ಯಾದ್ಯಂತ ಕಟ್ಟೆಚ್ಚರ ವಹಿಸಲಾಗಿದ್ದು, ಸೋಂಕು ಹರಡದಂತೆ ಮುಂಜಾಗ್ರಾತ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಪಶು ಸಂಗೋಪನಾ ಮತ್ತು ಪಶು ವೈದ್ಯಕೀಯ ಸಚಿವ ಅತುಲ್ ಬೋರಾ ತಿಳಿಸಿದ್ದಾರೆ.