More

    ಶ್ರದ್ಧಾ ವಾಲ್ಕರ್​ ಹತ್ಯೆ ಪ್ರಕರಣ; ಆರೋಪ ನಿರಾಕರಿಸಿದ ಪ್ರಿಯಕರ

    ನವದೆಹಲಿ: ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದ ಶ್ರದ್ಧಾ ವಾಲ್ಕರ್​(26) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಆರೋಪಿ ಅಫ್ತಾಬ್​ ಹೊಸ ಹೇಳಿಕೆ ನೀಡುವ ಮೂಲಕ ಸುದ್ದಿಯಾಗಿದ್ಧಾನೆ.

    ವಿಚಾರಣೆ ವೇಳೆ ಆರೋಪಿ ಪ್ರಿಯಕರ ಅಫ್ತಾಬ್​ ಪೂನಾವಾಲಾ ಕೊಲೆ ಆರೋಪವನ್ನು ನಿರಾಕರಿಸಿದ್ದು ವಿಚಾರಣೆ ಎದುರಿಸಲು ಸಿದ್ದನಿರುವುದಾಗಿ ನ್ಯಾಯಾಲಯದ ಮುಂದೆ ಹೇಳಿದ್ದಾನೆ.

    ಆರೋಪ ನಿರಾಕರಣೆ

    ಶ್ರದ್ಧಾ ವಾಲ್ಕರ್​ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ಪ್ರಿಯಕರ ಅಫ್ತಾಬ್ ಪೂನಾವಾಲಾ ತನಗೂ ಹತ್ಯೆಗೂ ಯಾವುದೇ ಸಂಬಂಧವಿಲ್ಲ ಎಂದು ನ್ಯಾಯಾಲಯದ ಮುಂದೆ ಹೇಳಿದ್ದಾನೆ.

    ದೆಹಲಿಯ ಸಾಕೇತ್​ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಪೀಠದ ಮುಂದೆ ಮಾತನಾಡಿದ ಆರೋಪಿ ಅಫ್ತಾಬ್​ ತಾನು ಹತ್ಯೆ ಮಾಡಿಲ್ಲ ವಿಚಾರಣೆ ಎದುರಿಸಲು ಸಿದ್ದನಿದ್ದೇನೆ ಎಂದು ನ್ಯಾಯಾಪೀಠ ಮುಂದೆ ವಿವರಿಸಿದ್ದಾನೆ.

    ಇದನ್ನೂ ಓದಿ: ಕೇರಳ ಟೂರಿಸ್ಟ್​ ಬೋಟ್​ ದುರಂತ; 22 ಮಂದಿ ಮೃತ್ಯು, ಹಲವರು ನಾಪತ್ತೆ

    ಉಪವಾಸ ಸತ್ಯಾಗ್ರಹ

    ಪ್ರಕರಣವನ್ನು ಶೀಘ್ರದಲ್ಲೇ ಇತ್ಯರ್ಥಪಡಿಸಬೇಕೆಂದು ಆಗ್ರಹಿಸಿ ಶ್ರದ್ಧಾ ತಂದೆ ವಿಕಾಸ್​ ವಾಲ್ಕರ್​ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು.

    ಪ್ರಕರಣ ಇತ್ಯರ್ಥಗೊಂಡಲ್ಲಿ ಮಗಳ ಅಂತ್ಯಕ್ರಿಯೆಯನ್ನು ಮಾಡಬಹುದು ಹಾಗೂ ವಿಧಿವಿಧಾನಗಳನ್ನು ನೆರವೇರಿಸಬಹುದು. ಪ್ರಕರಣದ ವಿಚಾರಣೆಯನ್ನು ಇನ್ನೊಂದು ತಿಂಗಳಲ್ಲಿ ಮುಗಿಸದಿದ್ದರೆ ಉಪವಾಸ ಸತ್ಯಾಗ್ರಹ ಮಾಡುವುದಾಗಿ ನ್ಯಾಯಾಲಯಕ್ಕೆ ಹೇಳಿದ್ದರು.

    ವಿಚಾರಣೆ ಮುಂದೂಡಿಕೆ

    ಹತ್ಯೆ ಪ್ರಕರಣದ ವಿಚಾರವಾಗಿ ವಾದ-ಪ್ರತಿವಾದವನ್ನು ಸುಧೀರ್ಘವಾಗಿ ಆಲಿಸಿದ ನ್ಯಾಯಾಪೀಠವು ಆರೋಪಿ ಪ್ರಿಯಕರನ ವಿರುದ್ಧ ಭಾರತ ದಂಡ ಸಂಹಿತೆ(IPC Section) 302(ಕೊಲೆ), 201(ಸಾಕ್ಷ್ಯ ನಾಶ) ಅಡಿ ಪ್ರಕರಣ ದಾಖಲಿಸಿದೆ.

    ಪ್ರಕರಣದ ಮುಂದಿನ ವಿಚಾರಣೆಯನ್ನು ಜೂನ್​ 1ಕ್ಕೆ ನಡೆಸಲಾಗುವುದು ಎಂದು ಹೇಳಿ ನ್ಯಾಯಾಲಯ ಮುಂದೂಡಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts