ನೆಲಮಂಗಲ: ಪತಿಯ ಮರಣದಿಂದ ಮಾನಸಿಕವಾಗಿ ನೊಂದ ಪತ್ನಿ ಹಾಗೂ ಪುತ್ರ ರೈಲಿಗೆ ತಲೆಯೊಡ್ಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಬೈರನಾಯಕನಹಳ್ಳಿ ಬಳಿ ಈ ಪ್ರಕರಣ ನಡೆದಿದೆ.
ಚಿಕ್ಕಬಾಣಾವರ ಸಮೀಪದ ಸೋಮಶೆಟ್ಟಿಹಳ್ಳಿ ಗ್ರಾಮದ ನಿವಾಸಿ ರೇಖಾ (40), ಅವರ ಪುತ್ರ ಮನೋಜ್ (21) ಮೃತಪಟ್ಟವರು. ಇವರು ಕಳೆದ ರಾತ್ರಿ ಬೆಂಗಳೂರಿನಿಂದ ಹುಬ್ಬಳ್ಳಿಗೆ ತೆರಳುವ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇದನ್ನೂ ಓದಿ: ನೀವು ಬಿಸಿಲಲ್ಲಿ ಬೈಕ್ ನಿಲ್ಲಿಸ್ತೀರಾ.. ಹುಷಾರು: ಇಲ್ಲಿ ಏನಾಯ್ತು ನೋಡಿ…
ರೇಖಾ ಅವರ ಪತಿ ಕೆಲವು ತಿಂಗಳ ಹಿಂದಷ್ಟೇ ಮೃತಪಟ್ಟಿದ್ದರು. ಇದರಿಂದ ಅವರು ಹಾಗೂ ಅವರ ಪುತ್ರ ಇಬ್ಬರೂ ಮಾನಸಿಕವಾಗಿ ತೀವ್ರ ನೊಂದಿದ್ದರು. ಕೊನೆಗೂ ಅಗಲಿಕೆಯ ನೋವನ್ನು ಸಹಿಸಿಕೊಳ್ಳಲಾಗದೆ ತಾಯಿ-ಮಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಂಬಂಧ ಸ್ಥಳಕ್ಕೆ ಧಾವಿಸಿದ ಯಶವಂತಪುರ ರೈಲ್ವೇ ಪೊಲೀಸ್ರು ಪರಿಶೀಲನೆ ನೆಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ: ಎರಡೆರಡು ಸಲ ಲಸಿಕೆ ಪಡೆದರೂ ಕರೊನಾ ಬಂತು!; ವ್ಯಾಕ್ಸಿನ್ ತಗೊಂಡ ಜಿಲ್ಲಾಧಿಕಾರಿಗೂ ಸೋಂಕು!
ಅತ್ಯಾಚಾರಿಗಳಿಂದ ತಪ್ಪಿಸಿಕೊಳ್ಳಲು ಮೂರನೇ ಮಹಡಿಯಿಂದ ಜಿಗಿದ ಯುವತಿ; ಇಲ್ಲಿ ಹೆಣ್ಣಿಗೆ ಹೆಣ್ಣೇ ಶತ್ರು!