More

    4 ರಾಜ್ಯಗಳಲ್ಲಿ ಮತದಾನ ಮುಗಿದ ಮೇಲೆ ಬಂತು ಚುನಾವಣಾ ಆಯೋಗದ ಕರೊನಾ ಎಚ್ಚರಿಕೆ !

    ನವದೆಹಲಿ : ಕಳೆದ ಎರಡು ತಿಂಗಳಲ್ಲಿ ಕರೊನಾ ಸೋಂಕಿನ ಪ್ರಮಾಣ 13 ಪಟ್ಟು ಹೆಚ್ಚಿದ್ದು, ಶುಕ್ರವಾರ ಒಂದೇ ದಿನ ಕಳೆದ 5 ತಿಂಗಳಲ್ಲಿ ಅತಿ ಹೆಚ್ಚು ಸಾವಿನ ಸಂಖ್ಯೆಯನ್ನು ಭಾರತ ದಾಖಲಿಸಿದೆ. ಈ ಹೆಚ್ಚಳಕ್ಕೆ ಸಾಂಕ್ರಾಮಿಕ ಕರೊನಾ ವೈರಸ್​ ಬಗೆಗಿನ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಜನರ ನಿರ್ಲಕ್ಷ್ಯವೇ ಕಾರಣ ಎಂದು ಕೇಂದ್ರ ಸರ್ಕಾರ ಅಭಿಪ್ರಾಯಪಟ್ಟಿದೆ. ಈ ಹಿನ್ನೆಲೆಯಲ್ಲಿ ಬಹುತೇಕ ರಾಜ್ಯ ಸರ್ಕಾರಗಳು ಜನಜೀವನದ ಮೇಲೆ ಹಲವಾರು ನಿರ್ಬಂಧಗಳನ್ನು ವಿಧಿಸಿವೆ.

    ಆದರೆ, ಚುನಾವಣೆ ನಡೆಯುತ್ತಿದ್ದ ಐದು ರಾಜ್ಯಗಳಲ್ಲಿ ಮಾತ್ರ ಎಲ್ಲಾ ರಾಜಕೀಯ ಪಕ್ಷಗಳು ಬೇಕಾಬಿಟ್ಟಿ ಜನರನ್ನು ಸೇರಿಸಿ ಪ್ರಚಾರ ಸಭೆಗಳನ್ನು ನಡೆಸಿರುವುದು ಎಲ್ಲರ ಗಮನಕ್ಕೆ ಬಂದಿದೆ. ಇದೀಗ ಈ ಬಗ್ಗೆ ಎಚ್ಚೆತ್ತುಕೊಂಡಿರುವ ಚುನಾವಣಾ ಆಯೋಗವು, ಕರೊನಾ ಮುನ್ನೆಚ್ಚರಿಕೆಗಳನ್ನು ಗಾಳಿಗೆ ತೂರಿ ಚುನಾವಣಾ ರಾಲಿ ಮತ್ತು ಸಭೆಗಳನ್ನು ನಡೆಸುತ್ತಿರುವ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದೆ. ಈ ರೀತಿಯ ನಿರ್ಲಕ್ಷ್ಯದಿಂದ ತಮ್ಮ ಮತ್ತು ಸಾರ್ವಜನಿಕರ ಆರೋಗ್ಯಕ್ಕೆ ಅಪಾಯವೊಡ್ಡುತ್ತಿರುವ ರಾಜಕೀಯ ಪಕ್ಷಗಳಿಗೆ ಮತ್ತು ಅಭ್ಯರ್ಥಿಗಳಿಗೆ ಹೊಸತೊಂದು ಎಚ್ಚರಿಕೆ ನೀಡಿದೆ.

    ಇದನ್ನೂ ಓದಿ: ಸಮಸ್ಯೆ ಬಗೆಹರಿಸುವ ಸೋಗಿನಲ್ಲಿ ಸಿಕ್ಕಸಿಕ್ಕವರಿಗೆ ಪಂಗನಾಮ ಹಾಕ್ತಿದ್ದ ಚಾಲಾಕಿ ಮಹಿಳೆಯರ ಬಂಧನ!

    “ಚುನಾವಣಾ ಆಯೋಗದ ಮಾರ್ಗಸೂಚಿಗಳಿಗೆ ವ್ಯತಿರಿಕ್ತವಾಗಿ ಮಾಸ್ಕ್​ ಧರಿಸದೆ, ಸಾಮಾಜಿಕ ಅಂತರ ಪಾಲಿಸದೆ ಪ್ರಚಾರ ಕಾರ್ಯ ನಡೆಸುತ್ತಿರುವುದು ನಮ್ಮ ಗಮನಕ್ಕೆ ಬರುತ್ತಿದೆ” ಎಂದಿರುವ ಆಯೋಗ, “ಕರೊನಾ ಸುರಕ್ಷತಾ ನಿಯಮಗಳನ್ನು ಪಾಲಿಸದ ಅಭ್ಯರ್ಥಿಗಳು, ಸ್ಟಾರ್ ಕ್ಯಾಂಪೇನರ್​ಗಳು ಅಥವಾ ರಾಜಕೀಯ ನಾಯಕರ ಮೇಲೆ ಯಾವುದೇ ಪ್ರಚಾರ ರಾಲಿ ಅಥವಾ ಸಭೆ ನಡೆಸದಂತೆ ನಿಷೇಧ ಹೇರಲು ಹಿಂಜರಿಯುವುದಿಲ್ಲ” ಎಂದು ಶುಕ್ರವಾರ ಖಡಕ್​ ಎಚ್ಚರಿಕೆ ನೀಡಿದೆ.

    ವಿಪರ್ಯಾಸವೆಂದರೆ, ವಿಧಾನಸಭಾ ಚುನಾವಣೆ ಘೋಷಣೆಯಾಗಿದ್ದ ತಮಿಳುನಾಡು, ಅಸ್ಸಾಂ, ಕೇರಳ ಮತ್ತು ಪುದುಚೆರಿಗಳಲ್ಲಿ ಈಗಾಗಲೇ ಮತದಾನ ಪೂರ್ಣಗೊಂಡಿದೆ. ಕೇವಲ ಪಶ್ಚಿಮ ಬಂಗಾಳದಲ್ಲಿ ಐದು ಸುತ್ತುಗಳ ಮತದಾನ ಬಾಕಿ ಇದೆ. (ಏಜೆನ್ಸೀಸ್)

    “ಕರೊನಾ ಲಸಿಕೆ ರಫ್ತು ಕೂಡಲೇ ನಿಲ್ಲಿಸಿ” : ಪ್ರಧಾನಿ ಮೋದಿಗೆ ರಾಹುಲ್ ಗಾಂಧಿ ಪತ್ರ

    ಕುರ್ಚಿಗಳನ್ನು ಆಕ್ರಮಿಸಿಕೊಂಡ ಪುರುಷರು, ನೋಡುತ್ತಾ ನಿಂತ ಅಧ್ಯಕ್ಷೆ !

     

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts