ತುಮಕೂರು: ಜಿಲ್ಲೆಯಲ್ಲಿ ಉಂಟಾಗಿದ್ದ ಫ್ಲೆಕ್ಸ್ ಸಂಘರ್ಷ ಮುಂದುವರಿದಿದ್ದು, ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದ ಕಾರ್ಯಕರ್ತರು ಪುನಃ ವಿನಾಯಕ ದಾಮೋದರ್ ಸಾವರ್ಕರ್ ಅವರ ಫ್ಲೆಕ್ಸ್ ಅಳವಡಿಸಿದ್ದಾರೆ. ಈ ಮೂಲಕ ಸಾವರ್ಕರ್ ಫ್ಲೆಕ್ಸ್ ಕಿತ್ತುಹಾಕಿದ್ದ ಕಿಡಿಗೇಡಿಗಳಿಗೆ ಎದಿರೇಟು ನೀಡಿದ್ದಾರೆ.
ತುಮಕೂರಿನ ಅಶೋಕ್ ರಸ್ತೆಯಲ್ಲಿ ಮೊನ್ನೆ ರಾತ್ರಿ ಅಳವಡಿಸಲಾಗಿದ್ದ ವೀರ ಸಾವರ್ಕರ್ ಅವರ ಫ್ಲೆಕ್ಸ್ಅನ್ನು ಕಿಡಿಗೇಡಿಗಳು ಹರಿದು ಹಾಕಿದ್ದರು. ತುಮಕೂರು ಮಹಾನಗರ ಪಾಲಿಕೆಯಿಂದ ರಸ್ತೆ ಬದಿ ಅಳವಡಿಸಿದ್ದ ಫ್ಲೆಕ್ಸ್ಗಳನ್ನು ತೆರವುಗೊಳಿಸಲಾಗಿತ್ತು.
ಆದರೆ ಇಂದು ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದ ಕಾರ್ಯಕರ್ತರು ಇಂದು ತುಮಕೂರಿನ ಟೌನ್ಹಾಲ್ ಸರ್ಕಲ್ನಲ್ಲಿರುವ ಗಣಪತಿ ದೇವಸ್ಥಾನದ ಎದುರು ಇಂದು ಸಂಜೆ ಸಾರ್ವಕರ್ ಫ್ಲೆಕ್ಸ್ ಅಳವಡಿಸಿದ್ದಾರೆ. ಈ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ತುಮಕೂರು ನಗರ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿದ್ದರು.
ಅಜಿತ್ ದೋವಲ್ಗೆ ಭದ್ರತಾ ವೈಫಲ್ಯ, ಎನ್ಎಸ್ಎ ಸೆಕ್ಯುರಿಟಿಯಿಂದ ಮೂವರು ಕಮಾಂಡೋಗಳ ಎತ್ತಂಗಡಿ..