ವಿಜಯವಾಣಿ ಸುದ್ದಿಜಾಲ ಹೊಸೂರು
ನಗರ ಸಮೀಪದಲ್ಲಿ ಜನವಸತಿ ಪ್ರದೇಶದಲ್ಲಿ ಗೇಲ್ ಗ್ಯಾಸ್ ಪೈಪ್ಲೈನ್ ಅಳವಡಿಕೆ ವಿರೋಧಿಸಿ ವೆಂಕಟೇಶ್ವರ ನಗರದ ನಿವಾಸಿಗಳು ಪ್ರತಿಭಟನೆ ನಡೆಸಿದರು.
ಗೇಲ್ ಸಂಸ್ಥೆ ಕೇರಳದಿಂದ ತಮಿಳುನಾಡು ಮಾರ್ಗವಾಗಿ ಕರ್ನಾಟಕಕ್ಕೆ ಪೈಪ್ಲೈನ್ ಮೂಲಕ ಅನಿಲ ಸಾಗಿಸಲು ಕಾಮಗಾರಿ ಕೈಗೊಂಡಿದೆ. ತಮಿಳುನಾಡಿನ ಹೊಸೂರು ಸಮೀಪದ ರಾಯಕೋಟ್ಟೈ, ಕೆಳಮಂಗಲ ಮತ್ತಿತರ ಪ್ರದೇಶಗಳಲ್ಲಿ ಗ್ಯಾಸ್ ಪೈಪ್ ಲೈನ್ ಅಳವಡಿಕೆ ಕಾರ್ಯದಲ್ಲಿ ಕಂಪನಿ ನಿರತವಾಗಿದೆ. ನಾಗೊಂಡಪಲ್ಲಿ ಪಂಚಾಯಿತಿ ವ್ಯಾಪ್ತಿಯ ವೆಂಕಟೇಶ್ವರ ನಗರದ ಜನವಸತಿ ಪ್ರದೇಶದಲ್ಲಿ ಪೈಪ್ ಲೇನ್ ಕಾಮಗಾರಿ ನಡೆಸಲು ಪೈಪ್ ಮತ್ತು ಸಲಕರಣೆಗಳನ್ನು ಇರಿಸಲಾಗಿದೆ. ಈ ಹಿಂದೆಯೇ ಕಾಮಗಾರಿ ಕೈಗೊಳ್ಳದಂತೆ ಜಿಲ್ಲಾಧಿಕಾರಿಯವರಿಗೆ ಮನವಿ ಮಾಡಿದರು. ಗ್ಯಾಸ್ ಪೈಪ್ಲೈನ್ ಅಳವಡಿಕೆ ಮಾಡಿದರೆ ನಾವು ಭಯದಲ್ಲಿ ಬದುಕಬೇಕಾಗುತ್ತದೆ. ವಸತಿ ಪ್ರದೇಶದ ನಡುವೆ ಕಾಮಗಾರಿ ನಡೆಸಕೂಡದು ಎಂದು ಒತ್ತಾಯಿಸಿ ಹೊಸೂರು ಉಪ ಜಿಲ್ಲಾಧಿಕಾರಿಯವರು ಸೇರಿ ಕಂದಾಯ ಇಲಾಖೆಯ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಕೂಡಲೇ ಜಿಲ್ಲಾಡಳಿತ ಮಧ್ಯ ಪ್ರವೇಶಿಸಿ ಕಾಮಗಾರಿ ಸ್ಥಗಿತಗೊಳಿಸಬೇಕು. ಇಲ್ಲದಿದ್ದರೆ, ಅಪಾರ್ಟ್ಮೆಂಟ್ನಲ್ಲಿ ವಾಸಿಸುವ 200 ಕ್ಕೂ ಹೆಚ್ಚು ಕುಟುಂಬಗಳು ಹಾಗೂ ಸಾರ್ವಜನಿಕರೊಂದಿಗೆ ಉಗ್ರ ಸ್ವರೂಪದ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು. ಶಿವಪ್ರಕಾಶ್, ಸಂಪಂಗಿ ರಾಮಯ್ಯ, ಜಯಮ್ಮ, ಶಿವಕುಮಾರ್, ನಾಗರಾಜ್ ರೆಡ್ಡಿ ಇತರರು ಪಾಲ್ಗೊಂಡಿದ್ದರು.
ಗ್ಯಾಸ್ ಪೈಪ್ಲೈನ್ ಅಳವಡಿಕೆಗೆ ವಿರೋಧ

ಕನಸಿನಲ್ಲಿ ಈ ಮೂರು ಪಕ್ಷಿಗಳು ಕಂಡ್ರೆ ಲಾಟರಿ ಹೊಡೆದಂತೆ! Lucky Birds ನೀಡುವ ಸುಳಿವೇನು..?
Lucky Birds : ಸಾಮಾನ್ಯವಾಗಿ ನಿದ್ದೆಯಲ್ಲಿ ಕನಸು ಕಾಣೋದು ಸಹಜ. ಈ ಕನಸುಗಳ ಮೂಲಕ ಪ್ರಕೃತಿ…
ಯಾವ ಕಾರಣಕ್ಕೂ ಮಾವಿನ ವಾಟೆ ಎಸೆಯಬೇಡಿ…ಅದರ ಪ್ರಯೋಜನಗಳ ಬಗ್ಗೆ ತಿಳಿದ್ರೆ ನೀವು ಖಂಡಿತ ಅಚ್ಚರಿಪಡ್ತೀರಾ! Mango Kernels
Mango Kernels : ಮಾವಿನ ಹಣ್ಣನ್ನು ಹಣ್ಣುಗಳ ರಾಜ ಎಂದು ಕರೆಯುತ್ತಾರೆ. ರುಚಿಗೆ ಮಾತ್ರವಲ್ಲ, ಮಾವಿನ…
ಪ್ಲಾಸ್ಟಿಕ್ ಬಾಕ್ಸ್ನಲ್ಲಿ ಬಿಸಿ ಅನ್ನ ಇಡುವ ಅಭ್ಯಾಸವಿದೆಯೇ? ಆರೋಗ್ಯದ ಬಗ್ಗೆ ಇರಲಿ ಎಚ್ಚರ.. hot rice in plastic boxes
hot rice in plastic boxes: ಪ್ಲಾಸ್ಟಿಕ್ ಬಳಕೆಯನ್ನು ತಡೆಯಲಾಗುತ್ತಿಲ್ಲ. ಪ್ಲಾಸ್ಟಿಕ್ ಪಾತ್ರೆಗಳನ್ನು ಬಳಸುವುದು ಹಾನಿಕಾರಕ,…