More

    ನೌಕರರ ಸಂಘದ ವಿರುದ್ಧ ಸುಳ್ಳು ದೂರು:ಸಹಾಯಕ ಆಯುಕ್ತ ಅವಿನಾಶ ಶಿಂಧೆಗೆ ಮನವಿ

    ಲಿಂಗಸುಗೂರು: ರಾಜ್ಯ ಸರ್ಕಾರಿ ನೌಕರರ ಸಂಘವನ್ನು ತೇಜೋವಧೆ ಮಾಡುತ್ತಿರುವವರ ವಿರುದ್ಧ ಕಾನೂನು ಕ್ರಮ ವಹಿಸುವಂತೆ ಆಗ್ರಹಿಸಿ ಸಹಾಯಕ ಆಯುಕ್ತ ಅವಿನಾಶ ಶಿಂಧೆಗೆ ಸರ್ಕಾರಿ ನೌಕರರ ಸಂಘದ ತಾಲೂಕು ಘಟಕದ ಪದಾಧಿಕಾರಿಗಳು ಮಂಗಳವಾರ ಮನವಿ ಸಲ್ಲಿಸಿದರು.

    ಇದನ್ನೂ ಓದಿ: ಸರ್ಕಾರಿ ನೌಕರರ ಸಂಘದ ತೇಜೋವಧೆ ಸಲ್ಲ


    ಶಾಂತಾರಾಮ, ಗುರುಸ್ವಾಮಿ, ಮಹಿಬೂಬ್ ಪಾಷಾ, ಶಿವರುದ್ರಯ್ಯ, ನಿಂಗೇಗೌಡ ಎಂಬುವವರು ಸಂಘದ ಅಧ್ಯಕ್ಷ, ಜಿಲ್ಲೆ ಹಾಗೂ ತಾಲೂಕು ಘಟಕದ ಪದಾಧಿಕಾರಿಗಳ ವಿರುದ್ಧ ನಕಲಿ ದಾಖಲೆ ಸೃಷ್ಟಿಸುವ ಮೂಲಕ ಆರೋಪಗಳನ್ನು ಮಾಡುತ್ತಿದ್ದಾರೆ. ಈ ಮೂಲಕ ಆಡಳಿತಾಧಿಕಾರಿ ನೇಮಕ ಮಾಡುವಂತೆ ಒತ್ತಾಯಿಸುತ್ತಿದ್ದಾರೆ. ಈ ಕುರಿತ ದೂರಿಗೆ ಮಹತ್ವ ನೀಡದೆ ಸಂಬಂಧಿಸಿದವರ ವಿರುದ್ಧ ಕಾನೂನು ಕ್ರಮ ವಹಿಸುವಂತೆ ಆಗ್ರಹಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts