More

    ರಾಜಕಾರಣಕ್ಕೆ ವಯಸ್ಸು ಮುಖ್ಯವಲ್ಲ; ಯಡಿಯೂರಪ್ಪ ಅವರನ್ನು ದೂರವಿಟ್ಟು ಸರ್ಕಾರ ರಚನೆ ಕಷ್ಟ: ದೇವೇಗೌಡ

    ಬೆಂಗಳೂರು: ಭೀಷ್ಮನಿಗೆ ವಯಸ್ಸಾಗಿದ್ದರೂ 10 ದಿನ ಯುದ್ಧ ಮಾಡಿದ. ಅದೇ ಕರ್ಣ ಒಂದೂವರೆ ದಿನ ಅಷ್ಟೇ ಯುದ್ಧ ಮಾಡಿದ. ನಾವು ಮಹಾಭಾರತದ ಘಟನೆ ನೆನಪಿಸಿಕೊಳ್ಳಬೇಕು ಎಂದು ಹೇಳಿದವರು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ.
    ಸಂದರ್ಭ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ.
    ರಾಜಕಾರಣದಲ್ಲಿ ವಯಸ್ಸು ಮುಖ್ಯವಲ್ಲ. ರಾಜಕಾರಣ, ಜನರ ಕೆಲಸ ಮಾಡಲು ಉತ್ಸಾಹ ಮುಖ್ಯ. ವಯಸ್ಸು ಇದೆ ಎಂದು ಮನೆಯಲ್ಲಿ ಮಲಗಿಕೊಂಡರೆ ಪ್ರಯೋಜನವೇನು? ಉತ್ಸಾಹದಲ್ಲಿ ಜನರ ಕೆಲಸ ಮಾಡುವುದು ಮುಖ್ಯ ಎಂದರು.

    ನಮ್ಮಿಂದ ಸಿಎಂಗೆ ತೊಂದರೆ ಇಲ್ಲ

    ವಯಸ್ಸಿನ ಕಾರಣ ನೀಡಿ ಸಿಎಂ ಸ್ಥಾನದಿಂದ ಬಿ.ಎಸ್. ಯಡಿಯೂರಪ್ಪರನ್ನು ಕೆಳಗಿಳಿಸಿದ್ದರ ಬಗ್ಗೆ ಪ್ರತಿಕ್ರಿಯಿಸಿದ ದೇವೇಗೌಡರು, ಯಡಿಯೂರಪ್ಪ ಅವರನ್ನು ತೆಗೆಯುವಂತೆ ನಾವು ಹೇಳಿಲ್ಲ. ಕೇಂದ್ರದವರು 75 ವರ್ಷ ಆದ ಮೇಲೆ ಅವಕಾಶ ಇಲ್ಲ ಎಂದು ಹೇಳಿದ್ದಾರೆ. ಯಡಿಯೂರಪ್ಪಗೆ ವಿಶೇಷ ಸಂದರ್ಭದಲ್ಲಿ ಎರಡು ವರ್ಷ ಅವಕಾಶ ಕೊಟ್ಟಿದ್ದಾರೆ. ಬಳಿಕ ಕೇಂದ್ರದವರು ರಾಜೀನಾಮೆ ಕೊಡಲು ಹೇಳಿ, ಬೊಮ್ಮಾಯಿ ಅವರನ್ನು ಸಿಎಂ ಮಾಡಿದ್ದಾರೆ. ಬೊಮ್ಮಾಯಿ ಎರಡು ವರ್ಷ ಪೂರೈಸಲು ನಮ್ಮಿಂದ ಯಾವುದೇ ತೊಂದರೆ ಇಲ್ಲ. ಎಲ್ಲರೂ ಮುಖ್ಯಮಂತ್ರಿ ಆಗಲೂ ಸಾಧ್ಯವಿಲ್ಲ ಎಂದು ದೇವೇಗೌಡರು ತಿಳಿಸಿದರು.

    ಕಷ್ಟ ಬಂದರೆ ಸಪೋರ್ಟ್ ನಿಶ್ಚಿತ

    ಯಡಿಯೂರಪ್ಪ ಅವರನ್ನು ದೂರವಿಟ್ಟು ಸರ್ಕಾರ ರಚನೆ ಮಾಡುವುದು ಕಷ್ಟ. ಈ ಸರ್ಕಾರಕ್ಕೆ ಕಷ್ಟಕಾಲ ಬಂದರೆ ನಾನು ಸಪೋರ್ಟ್ ಮಾಡುತ್ತೇನೆ. ಅವಧಿಗೂ ಮೊದಲೇ ಚುನಾವಣೆಗೆ ಹೋಗುವ ಆಸೆ ನಮಗೆ ಇಲ್ಲ. ಅವಧಿಗೂ ಮೊದಲೇ ಚುನಾವಣೆ ಬರುವುದಿಲ್ಲ ಎಂದು ದೇವೇಗವಡರು ಹೇಳಿದರು.

    ಕಾಲಿಗೆ ನಮಸ್ಕರಿಸಿ ಆಶೀರ್ವಾದ

    ನೂತನ ಸಿಎಂ ಆದ ಬಳಿಕ ಬಸವರಾಜ ಬೊಮ್ಮಾಯಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರನ್ನು ಭೇಟಿಯಾದರು. ಅವರ ನಿವಾಸಕ್ಕೆ ತೆರಳಿ ದೇವೇಗೌಡರ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆದರು. ಮಾಜಿ ಸಚಿವರಾದ ವಿ.ಸೋಮಣ್ಣ, ಎಚ್.ಡಿ.ರೇವಣ್ಣ ಅವರು ಮುಖ್ಯಮಂತ್ರಿಗೆ ಸಾಥ್ ಕೊಟ್ಟರು.

    ಎಸ್.ಆರ್.ಬೊಮ್ಮಾಯಿ ನಾನು ಒಟ್ಟಿಗೆ ಕೆಲಸ ಮಾಡಿದ್ದೆವು. ಅವರ ಜತೆಗೆ ನಾವಿದ್ದೆವು. ಅವರ ತಂದೆ ನಾವು ಹೇಗೆ ಕೆಲಸ ಮಾಡಿದ್ದೇವೆ ಎಂಬ ಬಗ್ಗೆ ಬಸವರಾಜಗೂ ತಿಳಿದಿದೆ. ಬಸವರಾಜ ಬೊಮ್ಮಾಯಿ ಕೂಡ ನಮ್ಮ ಜತೆ ಕೆಲಸ ಮಾಡಿದ್ದಾರೆ.
    | ಎಚ್.ಡಿ.ದೇವೇಗೌಡ ಮಾಜಿ ಪ್ರಧಾನಿ.

    ನಾನು ದೇವೇಗೌಡರ ಗರಡಿಯಲ್ಲೇ ಬೆಳೆದವನು. ನನ್ನ ತಂದೆ ಎಸ್.ಆರ್. ಬೊಮ್ಮಾಯಿ ಜತೆ ಮಾಜಿ ಪ್ರಧಾನಿ ದೇವೇಗೌಡರು ಒಡನಾಟ ಹೊಂದಿದ್ದರು. ನಾನು ಮುಖ್ಯಮಂತ್ರಿಯಾಗಿದ್ದಕ್ಕೆ ಸಾಕಷ್ಟು ಖುಷಿಯಿಂದ ನನಗೆ ಆಶೀರ್ವಾದ ಮಾಡಿದ್ದಾರೆ. ಅವರ ಪತ್ನಿ ಚನ್ನಮ್ಮ ತಾಯಿಯ ಆಶೀರ್ವಾದ ಕೂಡ ಪಡೆದಿದ್ದೇನೆ. ದೇವೇಗೌಡರು ಸಾಕಷ್ಟು ಹಿರಿಯರು, ಅನುಭವಿಗಳು ಆಡಳಿತಕ್ಕೆ ಸಹಕಾರ ನೀಡುವುದಾಗಿ ಹೇಳಿದ್ದಾರೆ.
    | ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ.

    ಇಲ್ಲಿ 4 ಅಥವಾ ಅದಕ್ಕೂ ಹೆಚ್ಚು ಮಕ್ಕಳಿದ್ದರೆ ಜಾಸ್ತಿ ಸೌಲಭ್ಯ; ಶಿಕ್ಷಣ-ಉದ್ಯೋಗಕ್ಕೂ ಸಿಗುತ್ತೆ ಆದ್ಯತೆ!

    ನಿಮ್ಮಲ್ಲಿ ಈ ಲಕ್ಷಣಗಳಿದ್ದರೆ ತುರ್ತಾಗಿ ಕರೊನಾ ಲಸಿಕೆ ತೆಗೆದುಕೊಳ್ಳುವುದು ಅನಿವಾರ್ಯ..

    ಆನ್​ಲೈನ್​ನಲ್ಲಿ ಗೋಣಿಚೀಲ ಖರೀದಿಸಲು ಹೋಗಿ 1.13 ಲಕ್ಷ ರೂ. ಕಳೆದುಕೊಂಡ ಶಿಕ್ಷಕಿ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts