More

    ಕಬ್ಬನ್‌ ಪಾರ್ಕ್​ನಲ್ಲಿ ‘ಸಿರಿಧಾನ್ಯ ನಡಿಗೆ’; ಉತ್ಸಾಹದಿಂದ ಹೆಜ್ಜೆ ಹಾಕಿದ ಯುವ ಸಮೂಹ

    ಬೆಂಗಳೂರು: ಸಾವಯವ ಮತ್ತು ಸಿರಿಧಾನ್ಯಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ವಿವಿಧ ಪ್ರಚಾರಾಂದೋಲನ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವ ಕೃಷಿ ಇಲಾಖೆ, ಜನವರಿ 5,6 ಮತ್ತು 7 ರಂದು ಅರಮನೆ ಮೈದಾನ ತ್ರಿಪುರ ವಾಸಿನಿಯಲ್ಲಿ ‘ಸಿರಿಧಾನ್ಯ, ಸಾವಯವ ಅಂತಾರಾಷ್ಟ್ರೀಯ ವಾಣಿಜ್ಯ ಮೇಳ ಆಯೋಜಿಸಿದೆ. ಈ ಹಿನ್ನೆಲೆಯಲ್ಲಿ ನಗರದಲ್ಲಿಂದು “ಸಿರಿಧಾನ್ಯ ನಡಿಗೆ” ಹಮ್ಮಿಕೊಳ್ಳಲಾಗಿತ್ತು.

    ಕೃಷಿ ಇಲಾಖೆ ಆಯುಕ್ತ ವೈ.ಎಸ್.‌ ಪಾಟೀಲ್‌, ಕೃಷಿ ಇಲಾಖೆ ಕಾರ್ಯದರ್ಶಿ ಅನ್ಬುಕುಮಾರ್‌, ನಟಿ ಸಪ್ತಮಿಗೌಡ “ನಮ್ಮ ನಡಿಗೆ ಸಿರಿಧಾನ್ಯ ಕಡೆಗೆ” ವಾಕಥಾನ್​ಗೆ ಚಾಲನೆ ನೀಡಿದರು. “ಸಿರಿಧಾನ್ಯ ಮತ್ತು ಸಾವಯವ: ಪರಂಪರೆಯ ಕೃಷಿ – ಭವಿಷ್ಯದ ಪೋಷಣೆ” ಎಂಬ ಘೋಷವಾಕ್ಯದಡಿ ಏರ್ಪಡಿಸಿದ್ದ ನಡಿಗೆಯಲ್ಲಿ ಉತ್ಸಾಹಿ ಯುವ ಸಮೂಹ ಸೇರಿದಂತೆ ಎಲ್ಲಾ ವಯೋಮಾನದವರು ಪಾಲ್ಗೊಂಡು ಹೆಜ್ಜೆ ಹಾಕಿದರು.

    ಕೃಷಿ ಇಲಾಖೆ ಆಯುಕ್ತ ವೈ.ಎಸ್.‌ ಪಾಟೀಲ್‌ ಮಾತನಾಡಿ, ಜನವರಿಯಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ವಾಣಿಜ್ಯ ಮೇಳಕ್ಕೆ ಪೂರ್ವಭಾವಿಯಾಗಿ ಆರು ಪ್ರಮುಖ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಮುಖ್ಯ ಪ್ರಚಾರ ಅಭಿಯಾನಗಳನ್ನು ಮೆಟ್ರೋ ನಗರಗಳಲ್ಲಿ ಆಯೋಜಿಸಲಾಗುತ್ತಿದೆ. ರೈತರ ಆರ್ಥಿಕ ಸ್ಥಿತಿಗತಿಯನ್ನು ಅಭಿವೃದ್ಧಿಪಡಿಸುವ ಜೊತೆಗೆ ಆರೋಗ್ಯ ಸುಧಾರಣೆಗೆ ಆದ್ಯತೆ ನೀಡಲಾಗುತಿದೆ. ರಾಸಾಯನಿಕ ಮುಕ್ತ ಆಹಾರ ಪದ್ಧತಿಯನ್ನು ಉತ್ತೇಜಿಸುವುದು ವಾಕಥಾನ್ ಉದ್ದೇಶವಾಗಿದೆ ಎಂದರು.

    ಕೃಷಿ ಇಲಾಖೆ ಕಾರ್ಯದರ್ಶಿ ಅನ್ವುಕುಮಾರ್‌ ಮಾತನಾಡಿ, ಸಿರಿಧಾನ್ಯಗಳಿಂದ ವಿವಿಧ ಉಪ ಉತ್ಪನ್ನಗಳನ್ನು ತಯಾರಿಸುವ ಜತೆಗೆ ಆರೋಗ್ಯ ರಕ್ಷಣೆಗೆ ಯಾವ ಉತ್ಪನ್ನ ಸೂಕ್ತ ಎಂಬ ಕುರಿತು ಜನ ಸಾಮಾನ್ಯರಲ್ಲಿ ಅರಿವು ಮೂಡಿಸಲಾಗುತ್ತಿದೆ. ದಿನದಿಂದ ದಿನಕ್ಕೆ ಸಿರಿಧಾನ್ಯಗಳ ಬಗ್ಗೆ ಜನರಲ್ಲಿ ತಿಳಿವಳಿಕೆ ಹೆಚ್ಚಾಗುತ್ತಿದ್ದು, ಈ ಅರಿವು ಮುಂದಿನ ಹಂತಕ್ಕೆ ಕೊಂಡೊಯ್ಯಲು ಇಲಾಖೆ ಪ್ರಚಾರ ಅಭಿಯಾನವನ್ನು ತೀವ್ರಗೊಳಿಸಿದೆ ಎಂದು ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts