ಬೆಂಗಳೂರು: ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರಿಗೆ ಕರೊನಾ ಭೀತಿ ಎದುರಾಗಿದ್ದು, ಅವರು ಇಂದಿನಿಂದಲೇ ಸ್ವಯಂ ಕ್ವಾರಂಟೈನ್ ಆಗಿದ್ದಾರೆ.
ಬಿ.ಸಿ.ಪಾಟೀಲ್ ಅವರು ಈ ಬಗ್ಗೆ ಟ್ವೀಟ್ ಮಾಡಿದ್ದು, ಬೆಂಗಳೂರಿನ ಮಿನಿಸ್ಟರ್ ಕ್ವಾಟರ್ಸ್ನಲ್ಲಿ ನನ್ನ ಸಂಬಂಧಿಕರೊಬ್ಬರಿಗೆ ಕರೊನಾ ಸೋಂಕು ತಗುಲಿದೆ. ನಾನೂ ಅವರೊಂದಿಗೆ ಸಂಪರ್ಕದಲ್ಲಿದ್ದೆ. ಹಾಗಾಗಿ ನಾನು ಮತ್ತು ನನ್ನ ಕುಟುಂಬಸ್ಥರು, ಸಿಬ್ಬಂದಿ ವರ್ಗದವರು ಒಂದು ವಾರಗಳ ಕಾಲ ಕ್ವಾರಂಟೈನ್ ಆಗುತ್ತಿದ್ದೇವೆ. ಏನಾದರೂ ಅಗತ್ಯವಿದ್ದರೆ 9448467366ಗೆ ಕರೆ ಮಾಡಿ ಎಂದು ಹೇಳಿದ್ದಾರೆ.
ಜನಪ್ರತಿನಿಧಿಗಳನ್ನು ಕರೊನಾ ಬೆಂಬಿಡದೆ ಕಾಡುತ್ತಿದೆ. ಪ್ರವಾಸೋದ್ಯಮ ಇಲಾಖೆ ಸಚಿವ ಸಿ.ಟಿ.ರವಿಯವರಲ್ಲಿ ಮೊನ್ನೆಯಷ್ಟೇ ಕರೊನಾ ದೃಢಪಟ್ಟಿದ್ದು, ಅವರೂ ಸಹ ತಮ್ಮ ಫಾರ್ಮ್ ಹೌಸ್ನಲ್ಲಿ ಸೆಲ್ಫ್ ಕ್ವಾರಂಟೈನ್ನಲ್ಲಿದ್ದಾರೆ.
ಸಚಿನ್ ಪೈಲಟ್ ಜತೆ ದೆಹಲಿಗೆ ಹೋಗಿ, ಈಗ ಉಲ್ಟಾ ಹೊಡೆದ ಶಾಸಕರು; ನಾವು ಕಾಂಗ್ರೆಸ್ ಸೈನಿಕರು ಎಂದರು…!