ಜೈಪುರ: ರಾಜಸ್ಥಾನದಲ್ಲಿ ಬಂಡಾಯವೆದ್ದಿದ್ದ ಕಾಂಗ್ರೆಸ್ ಶಾಸಕರು ಪಕ್ಷಕ್ಕೆ ಮರಳಿದ್ದಾರೆ. ನಾಳೆಯಿಂದ ವಿಧಾನಸಭೆ ಕಲಾಪವೂ ಪ್ರಾರಂಭವಾಗಲಿದ್ದು, ಈ ಮಧ್ಯೆ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ವಿಶ್ವಾಸಮತ ಯಾಚನೆಗೂ ಮುಂದಾಗಿದ್ದಾರೆ.
ಇದೀಗ ಇನ್ನೊಂದು ಮಹತ್ವದ ಬೆಳವಣಿಗೆ ನಡೆದಿದ್ದು, ಮಾಜಿ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ಅವರು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ರನ್ನು ಅವರ ನಿವಾಸದಲ್ಲಿ ಭೇಟಿಯಾಗಿದ್ದಾರೆ.
ಸಚಿನ್ ಪೈಲಟ್ ಹಾಗೂ ಅವರ ಬೆಂಬಲಿಗರಾದ 18 ಕಾಂಗ್ರೆಸ್ ಶಾಸಕರು ಅಶೋಕ್ ಗೆಹ್ಲೋಟ್ ವಿರುದ್ಧ ಜುಲೈನಲ್ಲಿ ಬಂಡಾಯ ಎದ್ದಿದ್ದರು. ಇದರಿಂದಾಗಿ ಸಚಿನ್ ಪೈಲಟ್ ಅವರನ್ನು ಡಿಸಿಎಂ ಸ್ಥಾನ ಮತ್ತು ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷನ ಸ್ಥಾನದಿಂದ ವಜಾ ಮಾಡಲಾಗಿತ್ತು. ಇದನ್ನೂ ಓದಿ: ನಾಲ್ಕನೇ ದೀರ್ಘಾವಧಿಯ ಪ್ರಧಾನಿ ನಮೋ: ನಾಳೆ ಏಳನೇ ಬಾರಿ ಕೆಂಪುಕೋಟೆಯಿಂದ ಭಾಷಣ
ಇಂದು ಪೈಲಟ್ ಹಾಗೂ ಗೆಹ್ಲೋಟ್ ಇಬ್ಬರೂ ಭೇಟಿಯಾಗಿದ್ದಾರೆ. ಇಬ್ಬರೂ ನಗುತ್ತ, ಶೇಕ್ ಹ್ಯಾಂಡ್ ಮಾಡಿದ್ದಾರೆ. ಈ ವೇಳೆ ಕೆ.ಸಿ.ವೇಣುಗೋಪಾಲ್, ಅವಿನಾಶ್ ಪಾಂಡೆ, ರಣದೀಪ್ ಸುರ್ಜೇವಾಲಾ, ಅಜಯ್ ಮೇಕನ್, ಗೋವಿಂದ್ ಸಿಂಗ್ ದೋತ್ಸಾರಾ ಇದ್ದರು.
ಸಚಿನ್ ಪೈಲಟ್ ಪಕ್ಷದಿಂದ ಬಂಡಾಯ ಎದ್ದ ಬಳಿಕ ಅಶೋಕ್ ಗೆಹ್ಲೋಟ್ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದರು. ಅವರೊಬ್ಬ ಯೂಸ್ಲೆಸ್ ಎಂದು ಹೇಳಿದ್ದರು. (ಏಜೆನ್ಸೀಸ್)
ರಾಜಸ್ಥಾನ ರಾಜಕೀಯದಲ್ಲಿ ರೋಚಕ ಟ್ವಿಸ್ಟ್!: ಅವಿಶ್ವಾಸ ಗೊತ್ತುವಳಿಗೆ ಬಿಜೆಪಿ ಸಿದ್ಧತೆ