More

    ಉದ್ಯೋಗ ಕೊರತೆಯಿಂದ ಮನನೊಂದು ಸಾವಿನ ಹಾದಿ ಹಿಡಿದ ಗಗನಸಖಿ

    ಕೋಲ್ಕತ: ನಿಯಮಿತ ಕೆಲಸದ ಕೊರತೆಯಿಂದಾಗಿ ಖಿನ್ನತೆಗೆ ಜಾರಿದ ಗಗನಸಖಿಯೊಬ್ಬಳು ನಾಲ್ಕನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲ್ಕತದಲ್ಲಿ ನಡೆದಿದೆ.

    ಮೃತ ಗಗನಸಖಿಯನ್ನು ಡೆಬೊಪ್ರಿಯಾ ಬಿಸ್ವಾಸ್​ (27) ಎಂದು ಗುರುತಿಸಲಾಗಿದೆ. ನಾಲ್ಕನೇ ಮಹಡಿಯಿಂದ ಕೆಳಗೆ ಜಿಗಿದು, ಗಂಭೀರವಾಗಿ ಗಾಯಗೊಂಡಿದ್ದ ಡೆಬೊಪ್ರಿಯಾಳನ್ನು ಕೋಲ್ಕತದ ಎಸ್​ಎಸ್​ಕೆಎಂ ಮೆಡಿಕಲ್​ ಕಾಲೇಜಿಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ.

    ಡೆಬೊಪ್ರಿಯಾ, ಕೋಲ್ಕತ್ತಾದ ಪ್ರಗತಿ ಮೈದಾನ್ ಪೊಲೀಸ್ ಠಾಣೆ ವ್ಯಾಪ್ತಿಯ ಮೆಟ್ರೋಪಾಲಿಟನ್ ಕೋ-ಆಪರೇಟಿವ್ ಹೌಸಿಂಗ್ ಸೊಸೈಟಿಯಲ್ಲಿ ತನ್ನ ಸಹೋದರಿಯೊಂದಿಗೆ ನೆಲೆಸಿದ್ದಳು. ಕಳೆದ ಎರಡು ವರ್ಷಗಳಿಂದ ನಿಯಮಿತವಾಗಿ ಕೆಲಸ ಸಿಗುತ್ತಿರಲಿಲ್ಲ. ಇದರಿಂದ ಆಕೆ ಖಿನ್ನತೆಗೆ ಜಾರಿದ್ದಳು. ಇದೀಗ ಅದೇ ನೋವಿನಲ್ಲಿ ಪ್ರಾಣವನ್ನು ಕಳೆದುಕೊಂಡಿದ್ದಾಳೆ. (ಏಜೆನ್ಸೀಸ್​)

    ವೇತನ ಹೆಚ್ಚಳಕ್ಕೆ ಸಾರಿಗೆ ನೌಕರರಿಂದ ಧರಣಿ ಸತ್ಯಾಗ್ರಹ; ಜ. 24ರಂದು ಬಸ್​ ಸಂಚಾರದಲ್ಲಿ ವ್ಯತ್ಯಯ!

    ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಗಣರಾಜ್ಯೋತ್ಸವ ಆಚರಣೆಗೆ ಸರ್ಕಾರದಿಂದ ಗ್ರೀನ್ ಸಿಗ್ನಲ್

    ಕಣ್ಣಿಗೊಂದು ಸವಾಲ್​: ಸಾಧ್ಯವಾದ್ರೆ 10 ಸೆಕೆಂಡ್​ನಲ್ಲಿ ಈ ಫೋಟೋದಲ್ಲಿರೋ ನಾಯಿಯನ್ನು ಪತ್ತೆ ಹಚ್ಚಿ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts