More

    ವಿಮಾನ ನಿಲ್ದಾಣಕ್ಕೆ ಭೂಮಿ ಕೊಟ್ಟವರಿಗೆ ಆದೇಶ ಪತ್ರ: ಬಿ.ವೈ.ರಾಘವೇಂದ್ರ

    ಶಿವಮೊಗ್ಗ: ವಿಮಾನ ನಿಲ್ದಾಣಕ್ಕೆ ಭೂಮಿ ಕೊಟ್ಟವರಿಗೆ ನಿವೇಶನ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಈ ಸಂಬಂಧ ಈಗಾಗಲೇ ಹೌಸಿಂಗ್ ಬೋರ್ಡ್‌ಗೆ 35 ಕೋಟಿ ರೂ. ಬಿಡುಗಡೆಯಾಗಿದ್ದು, ವಿಮಾನ ನಿಲ್ದಾಣ ಲೋಕಾರ್ಪಣೆಗೂ ಮುನ್ನವೇ ಆದೇಶ ಪತ್ರಗಳನ್ನು ವಿತರಿಸಲಾಗುವುದು ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ತಿಳಿಸಿದರು.
    ವಿಮಾನ ನಿಲ್ದಾಣಕ್ಕೆ ಭೂಮಿ ಕೊಟ್ಟವರಿಗೆ ನೀಡಿದ ಮಾತಿನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಜಿಲ್ಲಾಧಿಕಾರಿಗೆ ಕಡತ ರವಾನೆ ಆಗಿದೆ. ಕೆಲ ರೈತರು ಕೋರ್ಟ್‌ಗೆ ಹೋದರು. ಆ ಕಾರಣಕ್ಕೆ ವಿಳಂಬವಾಗಿದೆಯೇ ಹೊರತು ಅದಕ್ಕೆ ನಾವು ಕಾರಣರಲ್ಲ. ಕೊಟ್ಟ ಮಾತಿನಿಂದ ಹಿಂದೆ ಸರಿಯುವುದಿಲ್ಲ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಸ್ಪಷ್ಟಪಡಿಸಿದರು.
    ವಿಮಾನ ನಿಲ್ದಾಣದಲ್ಲಿ ಕನ್ನಡ ಭಾಷೆಯನ್ನು ನಿರ್ಲಕ್ಷೃ ಮಾಡಿಲ್ಲ. ನಾಮಫಲಕಗಳಲ್ಲಿ ಕನ್ನಡ ಅಡಕ ಮಾಡಲಾಗಿದೆ. ಈಗಾಗಲೇ ತಾಂತ್ರಿಕ ಹುದ್ದೆಗಳು ಭರ್ತಿಯಾಗಿದ್ದು ಬೇರೆ ಹುದ್ದೆಗಳಿಗೆ ಅವಕಾಶವಿದ್ದರೆ ಖಂಡಿತವಾಗಿ ಮಾಡಿಸಲಾಗುವುದು. ಅದರಲ್ಲೂ ಕನ್ನಡಿಗರಿಗೆ ಕೆಲಸ ಕೊಡಿಸುವ ಪ್ರಯತ್ನವನ್ನೂ ಮಾಡಲಾಗುವುದು ಎಂದು ಭರವಸೆ ನೀಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts