ರಾಜಕಾರಣಿ, ಉದ್ಯಮಿಗಳಿಗೆ ಐಶ್ವರ್ಯಾ ವಂಚನೆ

blank

ಬೆಂಗಳೂರು: ರಾಜಕಾರಣಿ, ಉದ್ಯಮಿಗಳಿಗೆ ಹೆಚ್ಚಿನ ಲಾಭಾಂಶದ ಆಮಿಷವೊಡ್ಡಿ ಚಿನ್ನ, ನಗದು ಮತ್ತು ಬ್ಯಾಂಕ್ ಖಾತೆ ಮೂಲಕ ಹಣ ಪಡೆದು ಐಶ್ವರ್ಯಾ ಗೌಡ ವಂಚನೆ ಮಾಡಿರುವುದು ಜಾರಿ ನಿರ್ದೇಶನಾಲಯ (ಇ.ಡಿ.) ತನಿಖೆಯಿಂದ ಬೆಳಕಿಗೆ ಬಂದಿದೆ.

blank

ಕಾಂಗ್ರೆಸ್ ಮಾಜಿ ಸಂಸದ ಡಿ.ಕೆ. ಸುರೇಶ್ ಸಹೋದರಿ ಸೋಗಿನಲ್ಲಿ ವಂಚನೆ ಮಾಡಿದ್ದ ಐಶ್ವರ್ಯಾ ಗೌಡ ಮತ್ತು ಆಕೆಯ ಪತಿ ಕೆ.ಎನ್. ಹರೀಶ್ ಮನೆ ಮೇಲೆ ಏ. 24 ಮತ್ತು 25ರಂದು ಇ.ಡಿ. ಅಧಿಕಾರಿಗಳು ದಾಳಿ ನಡೆಸಿದ್ದರು. ಅಲ್ಲದೆ, ಐಶ್ವರ್ಯಾ ಜತೆಗೆ ಸಂಪರ್ಕ ಹೊಂದಿದ್ದ ಶಾಸಕ ವಿನಯ್ ಕುಲಕರ್ಣಿ, ಕಾಂಗ್ರೆಸ್ ಮುಖಂಡ ತಿಬ್ಬೇಗೌಡ ಸೇರಿ ಹಲವರಿಗೆ ಸೇರಿ ಮನೆ, ಕಚೇರಿ ಸೇರಿ 14 ಸ್ಥಳಗಳಲ್ಲಿ ಶೋಧ ನಡೆಸಿದ್ದರು. 2.25 ಕೋಟಿ ರೂ. ನಗದು ಮತ್ತು ಅಕ್ರಮ ಹಣಕಾಸು ವಹಿವಾಟು ಸಂಬಂಧ ದಾಖಲೆಪತ್ರಗಳನ್ನು ಜಪ್ತಿ ಮಾಡಿದ್ದರು.

ಇದಲ್ಲದೆ, ಐಶ್ವರ್ಯಾ ಗೌಡನನ್ನು ಬಂಧಿಸಿ ಕೋರ್ಟ್‌ಗೆ ಹಾಜರುಪಡಿಸಿ 14 ದಿನಗಳ ಕಾಲ ಕಸ್ಟಡಿಗೆ ಪಡೆದಿರುವ ಇ.ಡಿ. ಅಧಿಕಾರಿಗಳು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಐಶ್ವರ್ಯಾ ಮತ್ತು ಹರೀಶ್ ಸೇರಿ ಉದ್ಯಮಿಗಳು, ರಾಜಕಾರಣಿಗಳಿಗೆ ಹೆಚ್ಚಿನ ಲಾಭಾಂಶ ಕೊಡುವುದಾಗಿ ನಂಬಿಸಿ ಅವರಿಂದ ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಮತ್ತು ವಿವಿಧ ಬ್ಯಾಂಕ್ ಖಾತೆಗಳಿಗೆ ಹಣವನ್ನು ವರ್ಗಾವಣೆ ಮಾಡಿಕೊಂಡು ವಂಚನೆ ಮಾಡಿದ್ದಾರೆ.

ಯಾರಿಗೂ ಭರವಸೆ ನೀಡಿದಂತೆ ಲಾಭಾಂಶ ಅಥವಾ ಅಸಲು ನೀಡದೆ ವಂಚನೆ ಮಾಡಿದ್ದಾರೆ. ವಾಪಸ್ ಹಣ ಕೇಳಿದಾಗ, ‘ನನಗೆ ಪ್ರಭಾವಿ ರಾಜಕಾರಣಿಗಳು ಗೊತ್ತಿದ್ದಾರೆ’ ಎಂದು ಬೆದರಿಕೆವೊಡ್ಡಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Share This Article

ಈ ಜ್ಯೂಸ್ ಕುಡಿದರೆ ಸಾಕು.. ತೂಕ ಇಳಿಸಿಕೊಳ್ಳಲು ಬೆವರು ಸುರಿಸಿ ಕಷ್ಟಪಡುವ ಅಗತ್ಯವಿಲ್ಲ! juice

juice: ತೂಕ ಇಳಿಸಿಕೊಳ್ಳಲು ಜನರು ಅನೇಕ ಪ್ರಯತ್ನಗಳನ್ನು ಮಾಡುತ್ತಾರೆ. ಅವರು ಜಿಮ್‌ನಲ್ಲಿ ಕಷ್ಟಪಟ್ಟು ಕೆಲಸ ಮಾಡುತ್ತಾರೆ,…

ಪ್ರತಿದಿನ ಸ್ನಾನ ಮಾಡುವ ಮೊದಲು ಇವುಗಳನ್ನು ನಿಮ್ಮ ಮುಖಕ್ಕೆ ಹಚ್ಚಿಕೊಳ್ಳಿ.. ಆಗ ನಿಮ್ಮ ಮುಖ ಖಂಡಿತವಾಗಿಯೂ ಸುಂದರವಾಗಿ ಹೊಳೆಯುತ್ತದೆ! Beauty Tips

Beauty Tips : ಮಹಿಳೆಯರು ಸಾಮಾನ್ಯವಾಗಿ ಸುಂದರವಾಗಿ ಕಾಣಲು ಮಾರುಕಟ್ಟೆಯಲ್ಲಿ ಲಭ್ಯವಿರುವ ವಿವಿಧ ಕ್ರೀಮ್‌ಗಳನ್ನು ಬಳಸುತ್ತಾರೆ.…

ಬೇಸಿಗೆಯಲ್ಲಿ ಪಿತ್ತಕೋಶ ಸಮಸ್ಯೆ ಹೆಚ್ಚಳ

| ಪಂಕಜ ಕೆ.ಎಂ., ಬೆಂಗಳೂರು ಬಿಸಿಲ ಝುಳ ಹೆಚ್ಚಾಗಿದ್ದರೂ ದೇಹದಲ್ಲಿ ನೀರಿನಂಶ ಕಾಪಾಡಿಕೊಳ್ಳುವಲ್ಲಿ ವಿಫಲರಾಗುತ್ತಿರುವ ಜನರು…