More

    ಕಡೂರು ಬಿಜೆಪಿ ಮಂಡಲಕ್ಕೆ ಅಜೇಯ್ ಒಡೆಯರ್ ಅಧ್ಯಕ್ಷ

    ಕಡೂರು: ಬಿಜೆಪಿ ಕಡೂರು ಮಂಡಲ ಯುವಮೋರ್ಚಾ ಅಧ್ಯಕ್ಷರಾಗಿ ಅಜೇಯ್ ಒಡೆಯರ್ ಅವರನ್ನು ನೇಮಿಸಲಾಗಿದೆ ಎಂದು ಮಂಡಲಾಧ್ಯಕ್ಷ ಬಿ.ಪಿ.ದೇವಾನಂದ್ ತಿಳಿಸಿದರು.

    ಬಿಜೆಪಿ ಕಚೇರಿಯಲ್ಲಿ ಗುರುವಾರ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಬೆಳ್ಳಿಪ್ರಕಾಶ್ ಸಮ್ಮುಖದಲ್ಲಿ ನೇಮಕಾತಿ ಪತ್ರ ವಿತರಿಸಿ ಮಾತನಾಡಿ, ಮಂಡಲದ ಯುವಮೋರ್ಚಾ ಪ್ರಧಾನಕಾರ್ಯದರ್ಶಿಗಳಾಗಿ ಜಿ.ಕುಮಾರ್ ಮತ್ತು ಎಂ.ಬಿ.ನವೀನ್ ಅವರನ್ನು ನೇಮಿಸಲಾಗಿದೆ ಎಂದರು.
    ನೂತನ ಯುವಮೋರ್ಚಾ ಅಧ್ಯಕ್ಷ ಅಜೇಯ್ ಒಡೆಯರ್ ಮಾತನಾಡಿ, ಯುವಜನರನ್ನು ಹೆಚ್ಚು ಸಂಘಟಿಸುವ ಮೂಲಕ ಕ್ಷೇತ್ರದಲ್ಲಿ ಬಿಜೆಪಿಗೆ ಹೆಚ್ಚು ಶಕ್ತಿ ತುಂಬಲು ಪ್ರಾಮಾಣಿಕವಾಗಿ ಶ್ರಮಿಸಲಾಗುವುದು. ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಬೇಕೆಂಬುದು ಕಾರ್ಯಕರ್ತರ ಆಶಯ. ಈ ಹಿನ್ನೆಲೆಯಲ್ಲಿ ಪಕ್ಷದ ಹಿತದೃಷ್ಟಿಯಿಂದ ಹಿರಿಯ ಮುಖಂಡರ ಮಾರ್ಗದರ್ಶನದೊಂದಿಗೆ ಸಂಘಟನೆಯಲ್ಲಿ ಹೆಚ್ಚು ತೊಡಗಿಸಿಕೊಳ್ಳಲಾಗುವುದು ಎಂದು ಹೇಳಿದರು.
    ಬಿಜೆಪಿ ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ಸಂತೋಷ್ ಕೋಟ್ಯಾನ್, ಬಿಜೆಪಿ ಒಬಿಸಿ ಜಿಲ್ಲಾಧ್ಯಕ್ಷ ಟಿ.ಆರ್.ಲಕ್ಕಪ್ಪ, ಮುಖಂಡರಾದ ಜಿಗಣೇಹಳ್ಳಿ ನೀಲಕಂಠಪ್ಪ, ಶೂದ್ರ ಶ್ರೀನಿವಾಸ್, ಸುಪ್ರಿತ್, ಅರೇಹಳ್ಳಿ ಉಮೇಶ್, ನಾಗೇಂದ್ರ ಅಗ್ನಿ, ಚೌಡ್ಲಾಪುರ ದೇವರಾಜ್, ಮಂಜನಾಯ್ಕ, ಹುಲ್ಲೇಹಳ್ಳಿ ಲಕ್ಷ್ಮಣ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts