ಬೆಂಗಳೂರು: ಅಖಂಡ ಶ್ರೀನಿವಾಸ ಮೂರ್ತಿ ಪರವಾಗಿ ಸಿದ್ದರಾಮಯ್ಯ ಬ್ಯಾಟಿಂಗ್ ಮಾಡಿದರೂ ಕೆಜಿ ಹಳ್ಳಿ ಹಾಗೂ ಡಿಜೆ ಹಳ್ಳಿ ಪ್ರಕರಣದಿಂದಾಗಿ ಟಿಕೆಟ್ ಸಿಕ್ಕಿರಲಿಲ್ಲ. ಪುಲಕೇಶಿಯನಗರದ ಮೇಲೆ ಕಣ್ಣಿಟ್ಟಿದ್ದ ಸಂಪತ್ ರಾಜ್ ಪರವಾಗಿ ಬ್ಯಾಟಿಂಗ್ ಡಿಕೆಶಿ ಮಾಡಿದ್ದರು. ಆದರೆ ಕಡೆಗೆ ಅಖಂಡ ಶ್ರೀನಿವಾಸ್ಗೆ ಟಿಕೆಟ್ ಸಿಕ್ಕಿರಲಿಲ್ಲ. ಈ ಹಿನ್ನೆಲೆಯಲ್ಲಿ ಇದೀಗ ಬಿಎಸ್ಪಿ ಯಿಂದ ಸ್ಪರ್ಧಿಸಲು ಅಖಂಡ ಮುಂದಾಗಿದ್ದಾರೆ.
ಪುಲಕೇಶಿ ನಗರದಲ್ಲಿ ಬಿಎಸ್ಪಿಯಿಂದ ಅಖಂಡ ಶ್ರೀನಿವಾಸಮೂರ್ತಿ ಸ್ಪರ್ಧೆಮಾಡುತ್ತಿದ್ದಾರೆ. ಅಖಂಡ ಶ್ರೀನಿವಾಸಮೂರ್ತಿ ಮೊದಲಿಗೆ ಕಾಂಗ್ರೆಸ್ನಿಂದ ಟಿಕೆಟ್ ಸಿಗದ ಹಿನ್ನಲೆಯಲ್ಲಿ ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದ್ದರು. ಇದೀಗ ಬಿಎಸ್ಪಿಯಿಂದ ಅಖಂಡ ನಾಮಪತ್ರ ಸಲ್ಲಿಸಿದ್ದಾರೆ.