ಬೆಂಗಳೂರು: ತೂಫಾನ್, ಬಳ್ಳಾರಿ ದರ್ಬಾರ್, 18 ಟು 25 ಚಿತ್ರಗಳನ್ನು ನಿರ್ದೇಶಿಸಿರುವ ಸ್ಮೈಲ್ ಶ್ರೀನು ಈಗ ಮತ್ತೊಂದು ಬಿಗ್ ಬಜೆಟ್ ಚಿತ್ರಕ್ಕೆ ಕೈ ಹಾಕಿದ್ದಾರೆ. ನಟ ಶಶಿಕುಮಾರ್ ಅವರ ಪುತ್ರ ಅಕ್ಷಿತ್ ಶಶಿಕುಮಾರ್ ಈ ಚಿತ್ರದಲ್ಲಿ ನಾಯಕನಾಗಿ ಬಣ್ಣ ಹಚ್ಚುತ್ತಿದ್ದಾರೆ. ಆರಂಭದಿಂದಲೂ ವಿಭಿನ್ನ ಚಿತ್ರಗಳನ್ನೇ ನಿರ್ದೇಶಿಸುತ್ತ ಬಂದಿರುವ ಸ್ಮೈಲ್ಶ್ರೀನು ಈಗ ಮತ್ತೊಂದು ಪ್ರೇಮಕಥೆಯನ್ನು ತೆರೆಮೇಲೆ ತರಲು ಹೊರಟಿದ್ದಾರೆ.
ಇದನ್ನೂ ಓದಿ: ‘ಮಾಸ್ಟರ್’ ಚಿತ್ರದ ತುಣುಕುಗಳನ್ನು ಲೀಕ್ ಮಾಡಿದ್ದು ಯಾರು ಅಂತ ಕೊನೆಗೂ ಗೊತ್ತಾಯ್ತು
ಲವ್, ಫ್ಯಾಮಿಲಿ ಎಂಟರ್ ಟೈನರ್ ಕಥಾನಕ ಹೊಂದಿರುವ ಈ ಚಿತ್ರದಲ್ಲಿ ಹದಿಹರೆಯದ ಪ್ರೀತಿ-ಪ್ರೇಮ, ವೈ ಫೈ ಯುಗದಲ್ಲಿ ಕಣ್ಮರೆಯಾಗುತ್ತಿರುವ ಭಾವನಾತ್ಮಕ ಸಂಬಂಧಗಳ ಕುರಿತಾಗಿ ಹೇಳಹೊರಟಿರುವ ನಿರ್ದೇಶಕ ಸ್ಮೈಲ್ಶ್ರೀನು ಅವರು ರೆಗ್ಯುಲರ್ ಜಾನರ್ ಬಿಟ್ಟು ಬೇರೆಥರದ ನಿರೂಪಣೆ ಮಾಡುತ್ತಿದ್ದಾರೆ, ಇತ್ತೀಚೆಗೆ ಈ ಚಿತ್ರದ ಫಸ್ಟ್ ಲುಕ್ ನ್ನು ಮಂತ್ರಾಲಯದ ಗುರುಗಳು ಬಿಡುಗಡೆ ಮಾಡಿ ಆಶೀರ್ವದಿಸಿದ್ದಾರೆ. ಇನ್ನು ಸಂಕ್ರಾಂತಿ ಹಬ್ಬದ ಶುಭದಿನ ಈ ಚಿತ್ರ ಸೆಟ್ಟೇರಲಿದೆ. ಸಚಿವ ಶ್ರೀರಾಮುಲು, ಉದ್ಯಮಿ ಚನ್ನಬಸಪ್ಪ ಹಾಗೂ ನಟ ಶಶಿಕುಮಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಬಿ ರಾಮಾಂಜಿನಿ ಈ ಚಿತ್ರದ ಕಥೆ ಬರೆದಿದ್ದು, ಜಿಸಿಬಿ ಪ್ರೊಡಕ್ಷನ್ಸ್ ಮೂಲಕ ಚಿತ್ರ ನಿರ್ಮಿಸಲಾಗುತ್ತಿದೆ. ಚಿತ್ರಕಥೆ, ಸಂಭಾಷಣೆಯನ್ನು ನಿರ್ದೇಶಕರೇ ರಚಿಸಿದ್ದಾರೆ. ನಾಯಕಿಯಾಗಿ ಕೀರ್ತಿ ಕಲಕೇರಿ ಅಭಿನಯಿಸುತ್ತಿದ್ದಾರೆ. ಮಗಧೀರ ವಿಲನ್ ದೇವಗಿಲ್ ಖಳನಾಯಕನಾಗಿ ಕಾಣಿಸಿಕೊಳ್ಳಲಿದ್ದಾರೆ. ಡಾ.ವಿ.ನಾಗೇಂದ್ರಪ್ರಸಾದ್ ಅವರು ಈ ಚಿತ್ರದ 6 ಹಾಡುಗಳಿಗೆ ಸಾಹಿತ್ಯ ರಚಿಸುತ್ತಿದ್ದು, ಚರಣ್ ಅರ್ಜುನ್ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ.
ಇದನ್ನೂ ಓದಿ: ವಿರಾಟ್ ಕೊಹ್ಲಿ- ಅನುಷ್ಕಾ ಶರ್ಮಾ ಪಾಪುವಿನ ಪಾದ ಅದಲುಬದಲು- ಈ ಕಾಲು ಅದಲ್ಲ… ಅದು ಇದಲ್ಲ!
ಇಸ್ಮಾರ್ಟ್ ಶಂಕರ್, ಅಲಾ ವೈಕುಂಠಪುಲೋ ಖ್ಯಾತಿಯ ರಿಯಲ್ ಸತೀಶ್ ಸಾಹಸ ನಿರ್ದೇಶನ ಮಾಡುತ್ತಿದ್ದಾರೆ. ಹೆಸರಾಂತ ಕೊರಿಯೋಗ್ರಾಫರ್ ಮುರುಳಿ ಎಲ್ಲ ಹಾಡುಗಳಿಗೆ ನೃತ್ಯ ನಿರ್ದೇಶನ ಮಾಡುತ್ತಿದ್ದಾರೆ. ಆಕಾಶ್ ಕುಮಾರ್ ಚವನ್ ಅವರ ಸಹನಿರ್ದೇಶನ ಈ ಚಿತ್ರಕ್ಕಿದೆ.
32 ಸಿನಿಮಾ ಯೂನಿಯನ್ಗಳಿಂದ ಬಹಿಷ್ಕಾರಕ್ಕೊಳಗಾದ ರಾಮ್ ಗೋಪಾಲ್ ವರ್ಮಾ!