ಮಾಜಿ ಶಾಸಕ ರುಪತಿ ಭಟ್ಗೆ ವ್ಯಂಗ್ಯವಾಡಿದ ಆಲಿಯಾ ಅಸಾದಿ
ವರ್ಷದ ಹಿಂದೆ ನಡೆದಿದ್ದ ಹಿಜಾಬ್ ಪ್ರಕರಣ ‘ಎಕ್ಸ್’ ಖಾತೆಯಲಿ ಉಲ್ಲೇಖ
ವಿಜಯವಾಣಿ ಸುದ್ದಿಜಾಲ ಉಡುಪಿ
ಕಳೆದ ವರ್ಷ ಹಿಜಾಬ್ ಧರಿಸಿ ಪಾಠ ಕೇಳಲು ಅನುಮತಿ ನೀಡಲೇಬೇಕು ಎಂದು ಆಗ್ರಹಿಸಿ ಉಡುಪಿಯಲ್ಲಿ ನಡೆದಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ವಿದ್ಯಾರ್ಥಿನಿ ಆಲಿಯಾ ಅಸಾದಿ ಮತ್ತೊಮ್ಮೆ ಸದ್ದು ಮಾಡಿದ್ದಾಳೆ.
ಬಿಜೆಪಿಯಿಂದ ಉಚ್ಛಾಟಿತ ಮಾಜಿ ಶಾಸಕ ಕೆ.ರಘುಪತಿ ಭಟ್ ಅವರ ಇಂದಿನ ರಾಜಕೀಯ ಪರಿಸ್ಥಿತಿಯ ಕುರಿತು ತನ್ನ ಎಕ್ಸ್ ಖಾತೆಯಲ್ಲಿ ವ್ಯಂಗ್ಯ ಮಾಡಿದ್ದಾಳೆ.
ಸಾಧನೆ ತೋರಿಸಿದ್ದರಲ್ಲವೇ?
‘ದೇವನು ತಾನಿಚ್ಛಿಸಿದ್ದನ್ನು ಮಾಡಿಯೇ ತೀರುವನು. ನನ್ನ ವಾರ್ಷಿಕ ಪರೀಕ್ಷೆಗೆ 60 ದಿನ ಬಾಕಿ ಇರುವಾಗ ಹಿಜಾಬ್ ಧರಿಸಿದ ಏಕಮಾತ್ರ ಕಾರಣಕ್ಕೆ ನನ್ನನ್ನು ಕಾಲೇಜಿನಿಂದ ಹೊರದಬ್ಬಿಸಿದಿರಿ. ನಿಮ್ಮ ಪಕ್ಷಕ್ಕೆ ದೊಡ್ಡ ಸಾಧನೆ ಮಾಡಿದ್ದೇನೆ ಎಂದು ತೋರಿಸಿದ್ದರಲ್ಲವೇ? ಆದರೆ, ಇಂದು ಅದೇ ಪಕ್ಷ ನಿಮ್ಮನ್ನು ಹೊರದಬ್ಬುವ ಆ ಕ್ಷಣವನ್ನು ನಾನು ನನ್ನ ಉಡುಪಿಯಲ್ಲೇ ನೋಡುವಂತಾಯಿತು’ ಎಂದು ಟೀಕಾತ್ಮಕವಾಗಿ ಪ್ರತಿಕ್ರಿಯೆ ನೀಡಿದ್ದಾಳೆ.

ನಾನೀಗ ವಕೀಲೆ, ಪದವಿ ವಿದ್ಯಾರ್ಥಿನಿ
‘ಅಂದು ನಾನು ಉಚ್ಚಾಟಿತ ವಿದ್ಯಾರ್ಥಿ, ನಿಮಗೆ ಪಕ್ಷದಲ್ಲಿ ಪದವಿ ಇತ್ತು. ಇಂದು ನಾನು ವಕೀಲೆಯಾಗಿದ್ದು, ಪದವಿ ವಿದ್ಯಾರ್ಥಿನಿಯಾಗಿದ್ದೇನೆ. ನೀವು ಈಗ ಪಕ್ಕಷದಿಂದಲೇ ಉಚ್ಚಾಟಿತ ವ್ಯಕ್ತಿ’ ಎಂದು ಆಲಿಯಾ ವ್ಯಂಗ್ಯವಾಡಿದ್ದಾಳೆ. ವಿದ್ಯಾರ್ಥಿನಿಯ ಈ ಟ್ವೀಟ್ಗೆ ನೂರಾರು ಮಂದಿ ಪ್ರತಿಕ್ರಿಯಿಸಿದ್ದಾರೆ.