More

    ಕಲಘಟಗಿಯಲ್ಲಿ ಅಖಿಲ ಭಾರತ ಸಹಕಾರ ಸಪ್ತಾಹ

    ಧಾರವಾಡ: ರಾಜ್ಯ ಸಹಕಾರ ಮಹಾಮಂಡಳ, ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ವತಿಯಿಂದ ಕಲಘಟಗಿಯ ಹನ್ನೆರಡೆತ್ತಿನ ಮಠದ ಹತ್ತಿರ ನ. ೧೭ರಂದು ೭೦ನೇ ಅಖಿಲ ಭಾರತ ಸಹಕಾರ ಸಪ್ತಾಹ ಆಯೋಜಿಸಲಾಗಿದೆ ಎಂದು ಕೆಸಿಸಿ ಬ್ಯಾಂಕ್ ಆಡಳಿತ ಮಂಡಳಿ ನಿರ್ದೇಶಕ ಮಂಜುನಾಥಗೌಡ ಮುರಳ್ಳಿ ಹೇಳಿದರು.
    ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ೫ ಟ್ರಿಲಿಯನ್ ಡಾಲರ್ ಆರ್ಥಿಕತೆ ಸಾಧನೆಯಲ್ಲಿ ಸಹಕಾರ ಸಂಸ್ಥೆಗಳ ಪಾತ್ರ ಮತ್ತು ಸುಸ್ಥಿರ ಅಭಿವೃದ್ಧಿ ಗುರಿಗಳು' ಎಂಬ ಧ್ಯೇಯದೊಂದಿಗೆ ಸಪ್ತಾಹ ಜರುಗಲಿದೆ.ಸಹಕಾರ ಸಂಸ್ಥೆಗಳಲ್ಲಿ ಸರಳ ವ್ಯಾಪಾರ ಪ್ರಕ್ರಿಯೆ ಮತ್ತು ಉದ್ಯೋನ್ಮುಖ ವಲಯಗಳು’ ವಿಷಯ ಕುರಿತು ತಜ್ಞ ಸಹಕಾರಿಗಳು ಉಪನ್ಯಾಸ ನೀಡಲಿದ್ದಾರೆ ಎಂದರು.
    ಅAದು ಬೆಳಗ್ಗೆ ೧೦ ಗಂಟೆಗೆ ಸಹಕಾರ ಸಚಿವ ಕೆ.ಎನ್ .ರಾಜಣ್ಣ ಸಪ್ತಾಹ ಉದ್ಘಾಟಿಸುವರು. ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಗೌರವ ಉಪಸ್ಥಿತರಿರುವರು. ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ವಸ್ತು ಪ್ರದರ್ಶನ ಉದ್ಘಾಟಿಸುವರು. ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅಧ್ಯಕ್ಷತೆ ವಹಿಸುವರು. ಸಚಿವರಾದ ಎಚ್.ಕೆ. ಪಾಟೀಲ, ಶಿವಾನಂದ ಪಾಟೀಲ, ಮಾಜಿ ಸಿಎಂಗಳಾದ ಬಸವರಾಜ ಬೊಮ್ಮಾಯಿ ಮತ್ತು ಜಗದೀಶ ಶೆಟ್ಟರ್, ಇತರರು ಉಪಸ್ಥಿತರಿರುವರು. ರಾಜ್ಯ ಸಹಕಾರ ಮಹಾಮಂಡಳ ಅಧ್ಯಕ್ಷ ಜಿ.ಟಿ. ದೇವೇಗೌಡ ಸ್ವಾಭಿಮಾನಿ ಸಹಕಾರಿ ವಿಶೇಷ ಸಂಚಿಕೆ ಬಿಡುಗಡೆಗೊಳಿಸುವರು. ಕಾರ್ಯಕ್ರಮದಲ್ಲಿ ಸಹಕಾರಿಗಳು ಮತ್ತು ಸಹಕಾರಿ ಸಂಸ್ಥೆಗಳ ಸಾಧಕರನ್ನು ಸನ್ಮಾನಿಸಲಾಗುವುದು ಎಂದರು.
    ಬೆಳಗಾವಿ ಪ್ರಾಂತ ಸಹಕಾರ ಸಂಘಗಳ ಸಂಯುಕ್ತ ನಿಬಂಧಕ ಡಾ. ಸುರೇಶಗೌಡ, ಧಾರವಾಡ ಹಾಲು ಒಕ್ಕೂಟದ ಅಧ್ಯಕ್ಷ ಶಂಕರ ಮುಗದ, ಸಹಕಾರ ಸಂಘಗಳ ಜಂಟಿ ನಿಬಂಧಕ ಕಲ್ಲಪ್ಪ ಓಬಣ್ಣಗೋಳ, ಕೆಸಿಸಿ ಬ್ಯಾಂಕ್ ಆಡಳಿತ ಮಂಡಳಿ ನಿರ್ದೇಶಕರು, ಇತರರು ಸುದ್ದಿಗೋಷ್ಠಿಯಲ್ಲಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts