ಉಡುಪಿ: ಜಿಲ್ಲೆಯ ಟ್ರ್ಯಾಕ್ನಲ್ಲಿ ಸಂಚರಿಸುವ ಎಲ್ಲ ರೈಲುಗಳು ಎರಡು ಗಂಟೆಗಳಿಂದ ಸ್ಥಗಿತಗೊಂಡಿದೆ. ರೈಲ್ವೆ ಟ್ರ್ಯಾಕ್ನ ವಿದ್ಯುತ್ ಕಂಬದ ಮೇಲೆ ಮರವೊಂದು ಬಿದ್ದ ಪರಿಣಾಮವಾಗಿ ರೈಲು ಸಂಚಾರದಲ್ಲಿ ಈ ವ್ಯತ್ಯಯ ಉಂಟಾಗಿದೆ.
ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕು ಮಟಪಾಡಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ತೀವ್ರ ಮಳೆಯಿಂದಾಗಿ ಈ ಸನ್ನಿವೇಶ ಎದುರಾಗಿದ್ದು, ದೆಹಲಿ ಕೇರಳ ನಡುವೆ ಸಂಚರಿಸುವ ನಿಜಾಮುದ್ದೀನ್-ತಿರುವನಂತಪುರ ಎಕ್ಸ್ಪ್ರೆಸ್ ರೈಲು ಸ್ಥಗಿತಗೊಂಡಿದೆ.
ಇದನ್ನೂ ಓದಿ: ನೀವು ನನಗಾಗಿ ಕಾದಿದ್ದೀರಿ, ನಾನು ನಿಮ್ಮ ಭೇಟಿಗಾಗಿ ಕಾಯುತ್ತಿರುತ್ತೇನೆ: ಎಲ್ಲರಿಗೂ ನಿರ್ದೇಶಕ ರಿಷಬ್ ಶೆಟ್ಟಿ ಆಹ್ವಾನ
ತತ್ಪರಿಣಾಮವಾಗಿ ಉಡುಪಿ ಜಿಲ್ಲೆಯ ಟ್ರ್ಯಾಕ್ನಲ್ಲಿ ಸಂಚರಿಸುವ ಎಲ್ಲ ರೈಲುಗಳು ಎರಡು ಗಂಟೆಗಳಿಂದ ಸ್ಥಗಿತಗೊಂಡಿವೆ. ಮರ ತೆರವುಗೊಳಿಸುವ ಹಾಗೂ ವಿದ್ಯುತ್ ಸಂಪರ್ಕ ಕಲ್ಪಿಸುವ ಕಾರ್ಯ ಭರದಿಂದ ಸಾಗುತ್ತಿದೆ.
ಎಂಬಿಎ ಪದವೀಧರ, ಅಕೌಂಟ್ನಲ್ಲಿ 20 ಲಕ್ಷ, ಆದ್ರೂ 150 ರೂ. ದಿನಗೂಲಿ ಕೆಲಸ: ಕೊನೆಗೂ ಸಿಕ್ಕಿಬಿದ್ದ ಕೊಲೆಗಾರ ಪ್ರಿಯಕರ