More

    28 ಕ್ಷೇತ್ರಗಳಲ್ಲಿ ಮೈತ್ರಿ ಅಭ್ಯರ್ಥಿಗಳ ಗೆಲುವು ಖಚಿತ

    ಕೋಲಾರ: ಲೋಕಸಭೆಯಲ್ಲಿ ರಾಜ್ಯದ 28 ಕ್ಷೇತ್ರಗಳಲ್ಲೂ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿಗಳ ಗೆಲುವು ಖಚಿತ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.

    ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ೨೮ ಕ್ಷೇತ್ರಗಳಲ್ಲಿ ಜೆಡಿಎಸ್‌ಗೆ ಎಷ್ಟು ಕ್ಷೇತ್ರ ದೊರೆಯಲಿದೆ ಎಂಬುದು ನವದೆಹಲಿಯಲ್ಲಿ ತೀರ್ಮಾನವಾಗಲಿದೆ. ಮೈತ್ರಿಯಾಗಿದ್ದು, ಆಯಾ ಪಕ್ಷದ ಚಿಹ್ನೆಯಡಿ ಚುನಾವಣೆ ನಡೆಯಲಿದೆ ಎಂದರು.
    ಬಿಜೆಪಿಯವರು ನಮ್ಮನ್ನು ಗೌರವಯುತವಾಗಿ ನಡೆಸಿಕೊಳ್ಳುತ್ತಾರೆ ಎಂಬ ನಂಬಿಕೆಯಿದೆ. ಕುಮಾರಸ್ವಾಮಿ ಅವರು ತುಮಕೂರು, ಮಂಡ್ಯ, ಚಿಕ್ಕಬಳ್ಳಾಪುರದಲ್ಲಿ ಸ್ಪಽðಸಬೇಕು ಎಂದು ಕಾರ್ಯಕರ್ತರು ಒತ್ತಾಯಿಸಿದ್ದು, ಇನ್ನು ತೀರ್ಮಾನಿಸಿಲ್ಲ ಎಂದು ತಿಳಿಸಿದರು.
    ಮಂಡ್ಯದಲ್ಲಿ ಜೆಡಿಎಸ್ ನಡೆಸುತ್ತಿರುವ ಸಭೆಗಳ ಕುರಿತು ಪ್ರತಿಕ್ರಿಯಿಸಿ, ರಾಜ್ಯದಲ್ಲಿ 28 ಕ್ಷೇತ್ರಗಳಿದ್ದು, ಮಾಧ್ಯಮದವರು ಬರೀ ಮಂಡ್ಯದ ಬಗ್ಗೆ ಕೇಳುತ್ತಾರೆ. ಆ ಕ್ಷೇತ್ರದಲ್ಲಿನ ಮುಖಂಡರ ಜತೆ ಚರ್ಚೆ ನಡೆಯುತ್ತಿದೆ. ಕ್ಷೇತ್ರದಲ್ಲಿ ಸ್ಪರ್ಧೆಗೆ ಅರ್ಹರಾಗಿರುವ ಸ್ಥಳೀಯ ಅನೇಕ ನಾಯಕರು ಇದ್ದಾರೆ. ಹಿರಿಯರಿಗೆ ಅವಕಾಶ ಮಾಡಿಕೊಡಲಾಗುತ್ತದೆ ಎಂದು ತಿಳಿಸಿದರು.
    ಮಂಡ್ಯ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ವಿಚಾರವಾಗಿ ಡಾ.ಎಚ್.ಎನ್.ರವೀಂದ್ರ ಮಾಡಿರುವುದು ಬರೀ ಆರೋಪ ಅಲ್ಲ ಅದರಲ್ಲಿ ಸತ್ಯಾಂಶ ಇದೆ ಎಂದರು. ನಾನು ಪಕ್ಷದ ಬೆಳವಣಿಗೆ ಹಾಗೂ ಸಂಘಟನೆಯಲ್ಲಿ ತೊಡಗಿರುವುದರಿಂದ ಈ ಬಾರಿ ಸ್ಪರ್ಧಿಸುವುದಿಲ್ಲ. ನನಗಿನ್ನೂ ವಯಸ್ಸಿದೆ, ಪಕ್ಷ ಕಟ್ಟಬೇಕಿದೆ. ಕಾರ್ಯಕರ್ತರ ಜತೆಗೂಡಿ ಕೆಲಸ ಮಾಡುವ ಹುಮ್ಮಸ್ಸು ಇದೆ ಎಂದರು.
    ಕೋಲಾರದಲ್ಲಿ ಬಿಜೆಪಿಯ ಹಾಲಿ ಸಂಸದರು ಇದ್ದಾರೆ. ಹೀಗಾಗಿ, ಅಽಕೃತ ಪಟ್ಟಿ ಬಿಡುಗಡೆ ಆಗುವವರೆಗೆ ಕಾಯಬೇಕು. ಕೆಲವೇ ದಿನಗಳಲ್ಲಿ ಕುಮಾರಸ್ವಾಮಿ ಹಾಗೂ ನಾನು ನವದೆಹಲಿಗೆ ತೆರಳಲಿದ್ದು, ಬಿಜೆಪಿ ವರಿಷ್ಠರನ್ನು ಭೇಟಿಯಾಗಲಿದ್ದೇವೆ ಎಂದು ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts