ಆ್ಯಂಬುಲೆನ್ಸ್ ಅಪಘಾತ ಪ್ರಕರಣ; ಗ್ರಾಮಸ್ಥರಿಂದ ಸಾಮೂಹಿಕವಾಗಿ ನಾಲ್ವರ ಅಂತಿಮಸಂಸ್ಕಾರ

ಉತ್ತರಕನ್ನಡ: ನಿನ್ನೆ ಶಿರೂರು ಟೋಲ್​ಗೇಟ್​ನಲ್ಲಿ ಸಂಭವಿಸಿದ್ದ ಭೀಕರ ಅಪಘಾತದಲ್ಲಿ ಸಾವಿಗೀಡಾದ ನಾಲ್ವರ ಶವಸಂಸ್ಕಾರವನ್ನು ಇಂದು ಗ್ರಾಮಸ್ಥರೇ ಸಾಮೂಹಿಕವಾಗಿ ನಡೆಸಿದ್ದಾರೆ. ಉತ್ತರಕನ್ನಡ ಜಿಲ್ಲೆಯ ಹೊನ್ನಾವರದ ಹಾಡುಗೇರಿ ಗ್ರಾಮದಲ್ಲಿ ಈ ಅಂತ್ಯಸಂಸ್ಕಾರ ನಡೆದಿದೆ. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರು ಟೋಲ್ ಗೇಟ್ ಬಳಿ ಈ ಭಯಂಕರ ಅಪಘಾತ ಸಂಭವಿಸಿದೆ. ಆ್ಯಂಬುಲೆನ್ಸ್ ತೀವ್ರ ಅಸ್ವಸ್ಥರನ್ನು ಕರೆದುಕೊಂಡು ಹೊನ್ನಾವರದಿಂದ ಕುಂದಾಪುರಕ್ಕೆ ಹೊರಟಿತ್ತು. ಆದರೆ ಅತಿಯಾದ ವೇಗದಿಂದ ಬಂದ ಆ್ಯಂಬುಲೆನ್ಸ್ ಟೋಲ್ ಗೇಟ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಟೋಲ್ ಕಂಬಕ್ಕೆ … Continue reading ಆ್ಯಂಬುಲೆನ್ಸ್ ಅಪಘಾತ ಪ್ರಕರಣ; ಗ್ರಾಮಸ್ಥರಿಂದ ಸಾಮೂಹಿಕವಾಗಿ ನಾಲ್ವರ ಅಂತಿಮಸಂಸ್ಕಾರ