ಬೆಳಗಾವಿ: ಅಪಘಾತಕ್ಕೆ ಒಳಗಾಗಿ ಗಂಭೀರವಾಗಿ ಗಾಯಗೊಂಡಿದ್ದವನನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಅಪಘಾತಕ್ಕೀಡಾಗಿ ಆ ಗಾಯಾಳು ಮೃತಪಟ್ಟ ಪ್ರಕರಣವೊಂದು ನಡೆದಿದೆ. ಬೆಳಗಾವಿ ಜಿಲ್ಲೆಯಲ್ಲಿ ಅಪಘಾತದ ಮೇಲೆ ಅಪಘಾತ ಸಂಭವಿಸಿದೆ.
ಅಕ್ಬರ್ ಸಾಬ್ ಹುಸೇನ್ ನೇಸರಗಿ (28) ಸಾವಿಗೀಡಾದ ಗಾಯಾಳು. ಸವದತ್ತಿ ದೇವಸ್ಥಾನದ ಬಳಿ ಬಳೆ ವ್ಯಾಪಾರ ಮಾಡುತ್ತಿದ್ದ ಅಕ್ಬರ್ ಅಪಘಾತಕ್ಕೆ ಒಳಗಾಗಿದ್ದು, ಮೊದಲು ಆತನನ್ನು ಸವದತ್ತಿ ತಾಲೂಕು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗಿತ್ತು. ಆದರೆ ಗಂಭೀರವಾಗಿ ಗಾಯಗೊಂಡಿದ್ದರಿಂದ ಹೆಚ್ಚಿನ ಚಿಕಿತ್ಸೆ ಅಗತ್ಯವಿತ್ತು.
ಹೀಗಾಗಿ ಆತನನ್ನು ಆ್ಯಂಬುಲೆನ್ಸ್ನಲ್ಲಿ ಬೆಳಗಾವಿ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೊರಡಲಾಗಿತ್ತು. ಆದರೆ ಮಾರ್ಗಮಧ್ಯೆ ಆ್ಯಂಬುಲೆನ್ಸ್ ಕಬ್ಬು ತುಂಬಿದ್ದ ಟ್ರ್ಯಾಕ್ಟರ್ ಡಿಕ್ಕಿಯಾಗಿದೆ. ಪರಿಣಾಮವಾಗಿ ಗಂಭೀರವಾಗಿ ಗಾಯಗೊಂಡಿದ್ದ ಅಕ್ಬರ್ ಸಾವಿಗೀಡಾಗಿದ್ದಾನೆ. ಆತನೊಂದಿಗೆ ಆ್ಯಂಬುಲೆನ್ಸ್ನಲ್ಲಿದ್ದ ತಾಯಿ ಜನ್ನಿತವಬಿ, ಸಹೋದರ ಮಹಮ್ಮದ್ ಅಲಿ, ಸಂಬಂಧಿ ಮಹಮ್ಮದ್ ಸಾಬ್ ಶೆಫಿ ಸಣ್ಣಪುಟ್ಟ ಗಾಯಗಳಿಗೆ ಒಳಗಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ದೊಡ್ಡವಾಡ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ರಾಜ್ಯಕ್ಕೆ ಎದುರಾಗಿದೆ ಒಂದು ಹೊಸ ಆತಂಕ; ಸರ್ಕಾರದ ಮೊರೆ ಹೋದ ರೇಡಿಯಾಲಜಿ ಇಮೇಜಿಂಗ್ ಅಧಿಕಾರಿಗಳ ಸಂಘ
ಮಾಂಸ ಮಾರಾಟ ನಿಷೇಧ, ಮಾಂಸಾಹಾರಿ ಹೋಟೆಲ್ಗಳೂ ಬಂದ್; ಈಗ ಕ್ರೇನ್ ಕಾರ್ಯಕ್ಕೂ ನಿರ್ಬಂಧ: ಎಲ್ಲಿ, ಏಕೆ, ಯಾವಾಗ?