More

    ನಿಂತಿದ್ದ ಆ್ಯಂಬುಲೆನ್ಸ್​ ಅಲ್ಲಾಡುತ್ತಿತ್ತು; ಹತ್ತಿರ ಹೋಗಿ ನೋಡಿದ ಪೊಲೀಸರಿಗೆ ಕಂಡಿದ್ದು ಬೇರೆಯದ್ದೇ ದೃಶ್ಯ!

    ಲಖನೌ: ದೇಶದಾದ್ಯಂತ ಕರೊನಾ ಸೋಂಕಿನ ಅಬ್ಬರ ಹೆಚ್ಚಿದ್ದು, ಸೋಂಕಿತರಿಗೆ ಆ್ಯಂಬುಲೆನ್ಸ್​ ಸೇವೆ ಕಲ್ಪಿಸುವುದೇ ದೊಡ್ಡ ಸಾಹಸವಾಗಿಬಿಟ್ಟಿದೆ. ಹೀಗಿರುವಾಗ ಯುವಕರ ಗುಂಪೊಂದು ಆ್ಯಂಬುಲೆನ್ಸ್​ ಅನ್ನು ದುರ್ಬಳಕೆ ಮಾಡಿಕೊಂಡು ಸಿಕ್ಕಿಹಾಕಿಕೊಂಡಿರುವ ಘಟನೆ ಉತ್ತರ ಪ್ರದೇಶದ ವಾರಾಣಸಿಯಲ್ಲಿ ನಡೆದಿದೆ.

    ವಾರಾಣಸಿಯ ರಾಮನಗರ ಏರಿಯಾದಲ್ಲಿ ನಿರ್ಜನ ಪ್ರದೇಶವೊಂದರಲ್ಲಿ ಆ್ಯಂಬುಲೆನ್ಸ್​ ನಿಂತಿತ್ತು. ಸುಮಾರು ಗಂಟೆಗಳಾದರೂ ಆ್ಯಂಬುಲೆನ್ಸ್​ ಅಲ್ಲಿಯೇ ನಿಂತಿದ್ದನ್ನು ಗಮನಿಸಿದ ಸ್ಥಳೀಯರು, ಪೊಲೀಸರಿಗೆ ಕರೆ ಮಾಡಿ ವಿಚಾರ ಮುಟ್ಟಿಸಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಆ್ಯಂಬುಲೆನ್ಸ್ ಬಳಿ ಹೋಗಿ ನೋಡಿದಾಗ ಅವರಿಗೆ ಶಾಕ್​ ಆಗಿದೆ.

    ಮೂವರು ಯುವಕರು ಮತ್ತು ಓರ್ವ ಯುವತಿ ಆ್ಯಂಬುಲೆನ್ಸ್​ನೊಳಗೆ ಮಜಾ ಮಾಡುತ್ತಾ ಕುಳಿತಿದ್ದಾಗಿ ಹೇಳಲಾಗಿದೆ. ತಕ್ಷಣ ಮೂವರು ಯುವಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆ ಆ್ಯಂಬುಲೆನ್ಸ್​ ಖಾಸಗಿ ಆಸ್ಪತ್ರೆಯೊಂದಕ್ಕೆ ಸೇರಿರುವ ಆ್ಯಂಬುಲೆನ್ಸ್ ಆಗಿದ್ದು, ಅದನ್ನು ಯುವಕನೋರ್ವನಿಗೆ ಆಸ್ಪತ್ರೆ ಬಾಡಿಗೆಗೆ ಕೊಟ್ಟಿದ್ದಾಗಿ ಹೇಳಲಾಗಿದೆ. ಈ ಹಿಂದೆಯೂ ಈ ರೀತಿಯ ದೂರು ಕೇಳಿಬಂದಿತ್ತು ಎನ್ನಲಾಗಿದೆ. (ಏಜೆನ್ಸೀಸ್)

    ಸ್ವಕ್ಷೇತ್ರಕ್ಕೆ ಪಿಪಿಇ ಕಿಟ್​, ಮಾಸ್ಕ್​ & ಆ್ಯಂಬುಲೆನ್ಸ್​ ಕಳುಹಿಸಿಕೊಟ್ಟ ಮಾಜಿ ಸಿಎಂ ಸಿದ್ದರಾಮಯ್ಯ

    ನರ್ಸ್​ ಕೆನ್ನೆಗೆ ಹೊಡೆದ ವೈರಲ್​ ವಿಡಿಯೋದಲ್ಲಿದ್ದ ಡಾಕ್ಟರ್​ ಶವ ಪತ್ತೆ! ಕುಟುಂಬದವರು ಹಾಗೆ ಮಾಡಿದ್ದಾದರೂ ಏಕೆ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts