ವಿಜಯಪುರ: ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಸೇರಿರುವ ಆ್ಯಂಬುಲೆನ್ಸ್ ವಿಜಯಪುರದಲ್ಲಿ ಅಪಘಾತಕ್ಕೀಡಾಗಿದ್ದು, ಆ್ಯಂಬುಲೆನ್ಸ್ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವಿಜಯಪುರ ಹೊರವಲಯದ ಹಿಟ್ನಳ್ಳಿ ಫಾರ್ಮ್ ಬಳಿ ಈ ಅಪಘಾತ ಸಂಭವಿಸಿದೆ.
ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಸೇರಿದ ಅಂಬುಲೆನ್ಸ್ ಇದಾಗಿದ್ದು, ವಿಜಯಪುರದಿಂದ ಬೆಂಗಳೂರು ಕಡೆಗೆ ಆ್ಯಂಬುಲೆನ್ಸ್ ಚಲಾಯಿಸಿಕೊಂಡು ಹೋಗುವಾಗ ವಾಹನದ ನಿಯಂತ್ರಣ ತಪ್ಪಿ ಈ ದುರ್ಘಟನೆ ಸಂಭವಿಸಿದೆ. ಸುಮಾರು 35 ವರ್ಷದ ಚಾಲಕನ ಹೆಸರು ತಿಳಿದುಬಂದಿಲ್ಲ.
ಇಂದು ಬೆಳಗ್ಗೆ ಬೆಂಗಳೂರಿನ ಜಯದೇವ ಆಸ್ಪತ್ರೆಯಿಂದ ರೋಗಿಯೊಬ್ಬನನ್ನು ವಿಜಯಪುರಕ್ಕೆ ಆ್ಯಂಬುಲೆನ್ಸ್ನಲ್ಲಿ ಕರೆದುಕೊಂಡು ಹೋಗಿ ಬಿಟ್ಟು, ವಾಪಸ್ ಬೆಂಗಳೂರಿಗೆ ತೆರಳುವ ವೇಳೆ ವಾಹನ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ವಿಜಯಪುರ ಗ್ರಾಮೀಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪ್ರಾಗ್ಜ್ಯೋತಿಷಪುರದ ರಾಣಿ ಸಿಟ್ಟಾಗಿದ್ದೇಕೆ? ನಟ್ಟಿರುಳಲಿ ಪ್ರಸಂಗದ ನಡುವೆ ಆಯ್ತು ರಸಭಂಗ!