More

    ಡಬಲ್ ಇಂಜಿನ್ ಸರ್ಕಾರ ಬಂದರೆ ಅಡಕೆಗು ಬೆಲೆ ಬರುತ್ತೆ ಎಂದ ಅಮಿತ್ ಷಾ

    ಗುಬ್ಬಿ : ತೆಂಗಿನ ಸೀಮೆಯಲ್ಲಿ ಬಿಜೆಪಿ ಚುನಾವಣಾ ಚಾಣಕ್ಯ, ಕೇಂದ್ರ ಗೃಹ ಸಚಿವ ಅಮಿತ್ ಷಾ ಅಬ್ಬರದ ಪ್ರಚಾರ ಕೈಗೊಂಡರು.

    ರಾಜ್ಯದಲ್ಲಿ ಮತ್ತೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ವಾಣಿಜ್ಯ ಬೆಳೆ ಅಡಕೆಗೆ ಬೆಂಬಲ ಬೆಲೆ ನಿಗದಿ ಮಾಡಲಾಗುವುದು.ಅಕ್ರಮವಾಗಿ ದೇಶಕ್ಕೆ ಬರುತ್ತಿದ್ದ ಅಡಕೆಯನ್ನು ಬಿಜೆಪಿ ತಡೆಹಿಡಿದಿದ್ದು ಡಬಲ್ ಇಂಜಿನ್ ಸರ್ಕಾರ ಬಂದರೆ ಅಡಕೆಗು ಬೆಲೆ ಬರುತ್ತೆ, ರೈತರಿಗು ಒಳ್ಳೆಯದಾಗುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ಭರವಸೆ ನೀಡಿದರು.

    ಗುಬ್ಬಿ ಪಟ್ಟಣದ ಚನ್ನಬಸವೇಶ್ವರ ಸ್ವಾಮಿ ದೇವಾಲಯದ ಆವರಣದಿಂದ ಬಸ್ ನಿಲ್ದಾಣದವರೆಗೆ ಬಿಜೆಪಿ ಅಭ್ಯರ್ಥಿ ಎಸ್.ಡಿ.ದಿಲೀಪ್ ಕುಮಾರ್ ಪರವಾಗಿ ಭರ್ಜರಿ ರೋಡ್ ಶೋ ಮಾಡಿ ಮತಯಾಚನೆ ಮಾಡಿ ಬಳಿಕ ಮಾತನಾಡಿದ ಅವರು, ಈ ಬಾರಿ ಗುಬ್ಬಿಯಲ್ಲಿ ದಿಲೀಪ್ ಕುಮಾರ್‌ರನ್ನು ಆಯ್ಕೆ ಮಾಡಿ ನಿಮ್ಮ ಕ್ಷೇತ್ರದ ಅಭಿವೃದ್ಧಿಗೆ ಸಹಕರಿಸಿ ಎಂದರು.
    ಮುಸ್ಲಿಮರಿಗಿದ್ದಂತಹ ಶೇ.4 ಮೀಸಲಾತಿಯನ್ನು ಒಕ್ಕಲಿಗ, ಲಿಂಗಾಯುತ ಸೇರಿದಂತೆ ಇನ್ನಿತರರಿಗೆ ಹಂಚುವ ಮೂಲಕ ಮೀಸಲಾತಿಯನ್ನು ಹೆಚ್ಚಿಸಲಾಗಿದೆ. ಇದನ್ನು ಕಾಂಗ್ರೆಸ್ ವಿರೋಧಿಸುತ್ತಿದ್ದು ನೀವು ಅರ್ಥ ಮಾಡಿಕೊಳ್ಳಿ ಎಂದು ಮತದಾರರಲ್ಲಿ ಮನವಿ ಮಾಡಿದರು.

    ನರೇಂದ್ರ ಮೋದಿ ಅವರ ಆಡಳಿತದಿಂದಾಗಿ ದೇಶ ಸುರಕ್ಷಿತವಾಗಿದೆ. ರಾಜ್ಯದಲ್ಲಿ ಯಡಿಯೂರಪ್ಪ ಹಾಗೂ ಬೊಮ್ಮಾಯಿ ಅವರ ಸರ್ಕಾರ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದು ಈ ಬಾರಿಯೂ ಬಿಜೆಪಿಯ ಕಮಲ ಅರಳುವುದು ಸತ್ಯ. ಮತ್ತೊಮ್ಮೆ ಡಬಲ್ ಇಂಜಿನ್ ಸರ್ಕಾರ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಅಮಿತ್ ಷಾ ಅಬ್ಬರಿಸಿದರು. ಬದಲಾವಣೆ ಬಯಸಿರುವ ಜನ: ತಾಲೂಕಿನಲ್ಲಿ ಬದಲಾವಣೆಯನ್ನು ಗುಬ್ಬಿ ತಾಲೂಕಿನ ಜನರು ಬಯಸಿದ್ದಾರೆ. ಖಂಡಿತವಾಗಿಯೂ ಈ ಬಾರಿ ಬಿಜೆಪಿ ತಾಲೂಕಿನಲ್ಲಿ ಹಾಗೂ ರಾಜ್ಯದಲ್ಲಿ ಮತ್ತೆ ಆಡಳಿತಕ್ಕೆ ಬರುವುದು ಸತ್ಯ ಎಂದು ಬಿಜೆಪಿ ಅಭ್ಯರ್ಥಿ ಎಸ್.ಡಿ.ದಿಲೀಪ್ ಕುಮಾರ್ ಹೇಳಿದರು.

    ಸಂಸದ ಜಿ.ಎಸ್.ಬಸವರಾಜು, ಚುನಾವಣಾ ಉಸ್ತುವಾರಿ ಸಂಜಯ್ ಬಾಟ್ಯ, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿನಯ್ ಬಿದರೆ, ಜಿಲ್ಲಾಧ್ಯಕ್ಷ ಎಚ್.ಎಸ್‌ರವಿಶಂಕರ್, ಜಿಲ್ಲಾ ಕಾರ್ಯದರ್ಶಿ ಎಚ್.ಟಿ.ಭೈರಪ್ಪ, ತಾಲೂಕು ಅಧ್ಯಕ್ಷ ಬಿ.ಎಸ್.ಪಂಚಾಕ್ಷರಿ, ಪ್ರಧಾನ ಕಾರ್ಯದರ್ಶಿ ಯತೀಶ್, ಪಟ್ಟಣಪಂಚಾಯಿತಿ ಅಧ್ಯಕ್ಷ ಜಿ.ಎನ್.ಅಣ್ಣಪ್ಪ ಸ್ವಾಮಿ, ಜಿಪಂ ಮಾಜಿ ಸದಸ್ಯ ಪಿ.ಬಿ.ಚಂದ್ರಶೇಖರ್‌ಬಾಬು, ಸಾಗರನಹಳ್ಳಿ ವಿಜಯ್ ಕುಮಾರ್, ಸಾಗರನಹಳ್ಳಿ ನಂಜೇಗೌಡ, ಎನ್.ಸಿ.ಪ್ರಕಾಶ್, ಎಚ್.ಸಿ.ಹಿತೇಶ್, ಪ್ರಭಾಕರ್ ಮತ್ತಿತರರು ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts