More

    ಅಂಫಾನ್ ಎಫೆಕ್ಟ್: ಪಶ್ಚಿಮ ಬಂಗಾಳ, ಒಡಿಶಾದಲ್ಲಿ ಭಾರೀ ಮಳೆ

    ಕೋಲ್ಕತ: ಬಂಗಾಳಕೊಲ್ಲಿಯಲ್ಲಿ ಕಾಣಿಸಿಕೊಂಡಿರುವ ಅಂಫಾನ್ ಚಂಡಮಾರುತ ಪಶ್ಚಿಮ ಬಂಗಾಳ ಹಾಗೂ ಒಡಿಶಾ ಕರಾವಳಿಯತ್ತ ಮುನ್ನುಗುತ್ತಿದ್ದು, ಪರಿಣಾಮವಾಗಿ ಆ ರಾಜ್ಯಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ.

    ಪಶ್ಚಿಮ ಬಂಗಾಳದಲ್ಲಿ ಈಗಾಗಲೇ ಕಡಲ ಬಳಿ ವಾಸಿಸುವ ಸುಮಾರು 3 ಲಕ್ಷ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಒಡಿಶಾದಲ್ಲಿಯೂ ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

    ಇದನ್ನೂ ಓದಿ  ಭಾರತಕ್ಕೆ ಅಮೆರಿಕಾ ದೇಣಿಗೆಯಾಗಿ ನೀಡುತ್ತೆನೆಂದ ವೆಂಟಿಲೇಟರ್​ಗಳಿಗೆ ಹಣ ಪಡೆಯುತ್ತಿದ್ದೆಯೇ?

    ಪಶ್ಚಿಮ ಬಂಗಾಳ ಮತ್ತು ಒಡಿಶಾದ ವಿವಿಧೆಡೆ ಎನ್‌ಡಿಆರ್‌ಎಫ್ ನ 41 ತಂಡಗಳನ್ನು ರಕ್ಷಣಾ ಕಾರ್ಯಾಚರಣೆಗಾಗಿ ನಿಯೋಜಿಸಲಾಗಿದ್ದು, ಇನ್ನೂ ಕೆಲ ತಂಡಗಳನ್ನು ಸಿದ್ಧವಾಗಿರಿಸಲಾಗಿದೆ. ಸ್ಥಳಾಂತರಿಸಲಾಗುತ್ತಿರುವ ಜನರ ವಸತಿಗಾಗಿ ಹಲವೆಡೆ ಶಿಬಿರಗಳನ್ನು ಪ್ರಾರಂಭಿಸಲಾಗಿದೆ.

    2013ರಲ್ಲಿ ಭಾರಿ ಹಾನಿಯುಂಟು ಮಾಡಿದ್ದ ಪೈಲಿನ್ ಚಂಡಮಾರುತದ ಬಳಿಕ ಪಶ್ಚಿಮ ಬಂಗಾಳ ಮತ್ತು ಒಡಿಶಾ ಕಡಲ ತೀರಕ್ಕೆ ಅಪ್ಪಳಿಸುತ್ತಿರುವ ಅತಿ ಪ್ರಬಲ ಚಂಡಮಾರುತ ಅಂಫಾನ್ ಎಂದು ತಜ್ಞರು ಹೇಳಿದ್ದಾರೆ.

    ಈ ಮಧ್ಯೆ, ಗೃಹ ಸಚಿವ ಅಮಿತ್ ಷಾ ಪಶ್ಚಿಮ ಬಂಗಾಳ ಹಾಗೂ ಒಡಿಶಾ ಮುಖ್ಯಮಂತ್ರಿಗಳಿಗೆ ಮಂಗಳವಾರ ಮುಂಜಾನೆ ಕರೆ ಮಾಡಿ ಮಾತನಾಡಿ, ಪರಿಸ್ಥಿತಿ ನಿರ್ವಹಣೆಗೆ ಎಲ್ಲ ರೀತಿಯ ಸಹಾಯ ನೀಡುವ ಭರವಸೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರೀಯ ವಿಪತ್ತು ನಿರ್ವಹಣೆ ಪಡೆ (ಎನ್‌ಡಿಆರ್‌ಎಫ್) ಜತೆಗೆ ಮುಂಜಾಗ್ರತಾ ಕ್ರಮಗಳ ಬಗ್ಗೆ ಸೋಮವಾರವೇ ಪರಿಶೀಲನೆ ನಡೆಸಿದ್ದಾರೆ.

    ಮುಂಬೈನಲ್ಲಿ ಮಾಡುತ್ತಿದ್ದದ್ದು ಕೂಲಿ ಕೆಲಸ, ಇಲ್ಲಿ ಬೇಕಂತೆ ಬಾಸುಮತಿ ಅನ್ನ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts