More

    ‘ಅಮೃತಮತಿ’ ಚಿತ್ರಕ್ಕೆ ಮತ್ತೆರೆಡು ಪ್ರಶಸ್ತಿಗಳು

    ಬೆಂಗಳೂರು: ಹದಿಮೂರನೇ ಶತಮಾನದ ಕನ್ನಡ ಕವಿ ಜನ್ನನ ‘ಯಶೋಧರ ಚರಿತೆ’ಯನ್ನು ಆಧರಿಸಿ ಮರುವ್ಯಾಖ್ಯಾನದ ಮೂಲಕ ಮರು ಸೃಷ್ಟಿರೂಪದಲ್ಲಿ ನಿರ್ಮಾಣಗೊಂಡ ‘ಅಮೃತ ಮತಿ’ ಚಿತ್ರವು ಇದುವರೆಗೂ ಹತ್ತು ಅಂತಾರಾಷ್ಟ್ರೀಯ ಚಿತ್ರೋತ್ಸವಗಳಿಗೆ ಆಯ್ಕೆಯಾಗಿದೆ. ಇತ್ತೀಚೆಗೆ ನಡೆದ ಲಾಸ್ ಏಂಜಲೀಸ್ ಸನ್ ಅಂತರರಾಷ್ಟ್ರೀಯ ಚಿತ್ರೋತ್ಸವದ ಸ್ಪರ್ಧಾವಿಭಾಗಕ್ಕೆ ಆಯ್ಕೆಯಾಗಿದ್ದ, ‘ಅಮೃತಮತಿ’ ಚಿತ್ರವು ಅತ್ಯುತ್ತಮ ಚಿತ್ರವೆಂಬ ಪ್ರಶಸ್ತಿಗೆ ಭಾಜನವಾಗಿದೆ. ಜತೆಗೆ ಚಿತ್ರಕತೆ (ಸ್ಕ್ರಿಪ್ಟ್) ರಚನೆಗಾಗಿ ನಿರ್ದೇಶಕ ಬರಗೂರು ರಾಮಚಂದ್ರಪ್ಪ ವೈಯಕ್ತಿಕ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.

    ಇದನ್ನೂ ಓದಿ: ಇಂದು ಅನುಪಮ್​ ಖೇರ್​ ಪಾಲಿಗೆ ವಿಶೇಷ ದಿನ … ಯಾಕೆ?

    ಅತ್ಯುತ್ತಮ ಚಿತ್ರಕಥೆ ರಚನೆಗಾಗಿ ಪ್ರಶಸ್ತಿ ಪಡೆದಿರುವುದು ತಮಗೆ ಬಹಳ ಸಂತೋಷ ತಂದಿದೆ ಎಂದು ಬರಗೂರು ರಾಮಚಂದ್ರಪ್ಪ ಹೇಳಿಕೊಂಡಿದ್ದಾರೆ. ‘ನಾನು ನಿರ್ದೇಶಿಸಿದ ಕೆಲವು ಚಿತ್ರಗಳು ಉತ್ತಮ ಚಿತ್ರ ಪ್ರಶಸ್ತಿ ಪಡೆದಿವೆ. ನಿರ್ದೇಶನಕ್ಕಾಗಿ ನೀಡುವ ರಾಜ್ಯದ ಉನ್ನತ ಮನ್ನಣೆಯಾದ `ಪುಟ್ಟಣ್ಣ ಕಣಗಾಲ್’ ಪ್ರಶಸ್ತಿ ಬಂದಿದೆ. ನಾನು ರಚಿಸಿದ ಕತೆ, ಗೀತೆ, ಸಂಭಾಷಣೆಗಳಿಗೂ ಪ್ರಶಸ್ತಿಗಳು ಲಭ್ಯವಾಗಿವೆ. ಆದರೆ, ಇಲ್ಲೀವರೆಗೆ ನಾನು ರಚಿಸಿದ ಚಿತ್ರಕತೆಗೆ (ಸ್ಕ್ರಿಪ್ಟ್) ಒಂದೂ ಪ್ರಶಸ್ತಿ ಬಂದಿರಲಿಲ್ಲ. ಲಾಸ್ ಏಂಜಲೀಸ್ ಅಂತರರಾಷ್ಟ್ರೀಯ ಚಿತ್ರೋತ್ಸವದಲ್ಲಿ ಮೊಟ್ಟ ಮೊದಲ ಬಾರಿಗೆ ಚಿತ್ರಕತೆಗಾಗಿ ನನಗೆ ಪ್ರಶಸ್ತಿ ಬಂದಿರುವುದು ತುಂಬಾ ಸಂತೋಷ ತಂದಿದೆ. ಇದನ್ನು ನಮ್ಮ ಚಿತ್ರತಂಡಕ್ಕೆ ಅರ್ಪಿಸುತ್ತೇನೆ. ಈ ಮೂಲಕ ಇಡೀ ಚಿತ್ರತಂಡದ ಸಹಕಾರವನ್ನು ಗೌರವಿಸುತ್ತೇನೆ’ ಎಂದು ಈ ಪ್ರಶಸ್ತಿಯನ್ನು ತಮ್ಮ ತಂಡಕ್ಕೆ ಅರ್ಪಿಸಿದ್ದಾರೆ ಬರಗೂರು ರಾಮಚಂದ್ರಪ್ಪ.

    ‘ಅಮೃತಮತಿ’ ಚಿತ್ರವು ಇಂಚರ ಪುಟ್ಟಣ್ಣ ಪ್ರೊಡಕ್ಷನ್ನಡಿ ನಿರ್ಮಾಣವಾಗಿದ್ದು, ಚಿತ್ರದಲ್ಲಿ ಹರಿಪ್ರಿಯಾ, ಕಿಶೋರ್, ತಿಲಕ್, ಸುಂದರರಾಜ್, ಪ್ರಮೀಳಾ ಜೋಷಾಯ್, ಸುಪ್ರಿಯಾರಾವ್, ಅಂಬರೀಶ್ ಸಾರಂಗಿ, ವತ್ಸಲಾ ಮೋಹನ್ ಮುಂತಾದವರು ಅಭಿನಯಿಸಿದ್ದಾರೆ. ಈ ಚಿತ್ರಕ್ಕೆ ನಾಗರಾಜ್ ಆದವಾನಿ ಛಾಯಾಗ್ರಹಣ, ಶಮಿತಾ ಮಲ್ನಾಡ್ ಸಂಗೀತ ನಿರ್ದೇಶನವಿದೆ.

    ಇದನ್ನೂ ಓದಿ: ‘ಗುರುಗಳಿಗೆ ಕಿಚ್ಚನ ನಮನ’ ಸಂಕಷ್ಟದಲ್ಲಿರುವ ಶಿಕ್ಷಕರ ಸಹಾಯಕ್ಕೆ ಮುಂದಾದ ಸುದೀಪ್​

    ಮುಂಬೈನ ಸಂಸ್ಥೆಯೊಂದು ಪ್ರದರ್ಶನದ ಹಕ್ಕುಗಳನ್ನು ಪಡೆದಿದ್ದು ಕೊರೋನ ಕಡಿಮೆಯಾದ ಮೇಲೆ `ಅಮೃತಮತಿ’ ಚಿತ್ರವು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ ಎಂದು ಬರಗೂರು ರಾಮಚಂದ್ರಪ್ಪ ಹೇಳಿದ್ದಾರೆ.

    ಅಪ್ಪ-ಅಮ್ಮ ದೂರ ಆಗಿದ್ದೇ ಒಳ್ಳೆಯದಾಯ್ತು ಅಂತ ಶ್ರುತಿ ಹೇಳಿದ್ದೇಕೆ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts