ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಆಪತ್ತು ಇದೆ ಎಂಬುದಾಗಿ ಜ್ಯೋತಿಷಿಯೊಬ್ಬರು ಮತ್ತೆ ಮತ್ತೆ ಭವಿಷ್ಯ ನುಡಿಯುತ್ತಿರುವುದು ಕಂಡುಬಂದಿದೆ. ಇದೀಗ ಇನ್ನೊಮ್ಮೆ ಆಪತ್ತಿನ ಕುರಿತು ಎಚ್ಚರಿಕೆ ನೀಡಿರುವ ಅವರು ಭದ್ರತೆ ಹೆಚ್ಚಿಸುವ ಸಲಹೆಯನ್ನೂ ನೀಡಿದ್ದಾರೆ.
ಅನಿರುದ್ಧ್ ಕುಮಾರ್ ಮಿಶ್ರಾ ಎಂಬ ಈ ಜ್ಯೋತಿಷಿ ಸೋಷಿಯಲ್ ಮೀಡಿಯಾದಲ್ಲಿ ಈ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ. ಕೆಲವು ದಿನಗಳ ಹಿಂದೆ ಪ್ರಧಾನಿ ಮೋದಿಗೆ ಆಪತ್ತಿದೆ ಎಂದು ಎಕ್ಸ್ನಲ್ಲಿನ ತಮ್ಮ ಖಾತೆಯಲ್ಲಿ ಅವರು ಹೇಳಿಕೊಂಡಿದ್ದರು.
ಇದನ್ನೂ ಓದಿ: ಪ್ರಧಾನಿ ಮೋದಿಗೆ ಆಪತ್ತಿದೆಯೇ?: ಸಹಾಯಕರ ಸೋಗಿನಲ್ಲಿ ಇರುವವರಿಂದಲೇ ತೊಂದರೆ!; ಏನಿದು ಭವಿಷ್ಯ?
‘ಪ್ರೀತಿಯ ಭಾರತದ ಪ್ರಧಾನಮಂತ್ರಿಯವರೇ.. ಒಂದೇ ತಿಂಗಳಲ್ಲಿ ಎರಡು ಗ್ರಹಣಗಳು ಬರಲಿವೆ, ನಿಮ್ಮ ಸುರಕ್ಷತೆ ಮತ್ತು ಆರೋಗ್ಯದ ಬಗ್ಗೆ ನೀವು ಜಾಗರೂಕರಾಗಿರಬೇಕು. ನಿಮ್ಮ ಸಹಾಯಕನ ವೇಷದಲ್ಲಿರುವ ಕೆಲವರು ನಿಮ್ಮ ಮೇಲೆ ಬೇಹುಗಾರಿಕೆ ನಡೆಸುತ್ತಾರೆ ಮತ್ತು ನಿಮಗೆ ಹಾನಿ ಮಾಡಲು ಸಹ ಪ್ರಯತ್ನಿಸಬಹುದು. ಜಾಗರೂಕರಾಗಿರಿ..’ ಎಂದು ಅ. 9ರಂದು ಎಕ್ಸ್ನಲ್ಲಿ ಹೇಳಿಕೊಂಡಿದ್ದರು.
ಇದನ್ನೂ ಓದಿ: ಐಸ್ ಕ್ರೀಮ್ ಟ್ರಕ್ಗಳಲ್ಲಿ ಶವ!: ಹೊರಗೆ ಮಕ್ಕಳು ಐಸ್ ಕ್ರೀಮ್ ಮೆಲ್ಲುವ ಚಿತ್ರ, ಒಳಗೆ ಮೃತದೇಹಗಳು!
ಮೋದಿಗೆ ಆಪತ್ತಿದೆ ಎಂದು ಅವರೇ ನಿನ್ನೆ ಮತ್ತೊಮ್ಮೆ ಎಕ್ಸ್ನಲ್ಲಿ ಪೋಸ್ಟ್ ಮಾಡಿಕೊಂಡಿದ್ದಾರೆ. ಅಕ್ಟೋಬರ್ನಲ್ಲಿ ಎರಡು ಗ್ರಹಣಗಳ ಹಿನ್ನೆಲೆಯಲ್ಲಿ ದೇಶದ ಅತ್ಯುನ್ನತ ಹುದ್ದೆಯಲ್ಲಿರುವವರಿಗೆ ಇದು ದುರದೃಷ್ಟಕರ ಅವಧಿಯಾಗಿದೆ. ಈಗಿನಿಂದ ಮುಂದಿನ ಮಾರ್ಚ್ ವರೆಗೆ ರಾಷ್ಟ್ರಪತಿ ಹಾಗೂ ಪ್ರಧಾನ ಮಂತ್ರಿ ಅವರ ಭದ್ರತೆಯನ್ನು ಬಲಗೊಳಿಸಬೇಕು ಎಂದು ಅನಿರುದ್ಧ್ ಭವಿಷ್ಯ ಹೇಳಿದ್ದಾರೆ.
Due to the fact that there are two eclipses in the month of October, This will be a period highly unfortunate for the higher authorities of our nation. From now till March of next year, the security of our president and prime minister should be strengthened. pic.twitter.com/k9DxaXA8Bh
— Anirudh Kumar Mishra (Astrologer) (@Anirudh_Astro) October 21, 2023
ಚಡ್ಡಿ ಧರಿಸಿ ರಸ್ತೆ ಬದಿ ಕಾಣಿಸಿಕೊಂಡ ‘ರಜಿನಿಕಾಂತ್’!: ವಿಡಿಯೋ ವೈರಲ್; ಅಸಲಿ ವಿಷಯ ಏನು? ಇಲ್ಲಿದೆ ವಿವರ