More

    ಎನ್​​​ಡಿಎ ಜೊತೆ ಹೋಗಲು ಕುಮಾರಸ್ವಾಮಿ ತಯಾರಿ; ದೇವೇಗೌಡರ ನೇತೃತ್ವದಲ್ಲಿ ಇಂದು ಮಹತ್ವದ ಸಭೆ

    ಬೆಂಗಳೂರು: ಇಂದು ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡರ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ. ಸಂಜೆ 6 ಗಂಟೆಗೆ ಖಾಸಗಿ ಹೋಟೆಲ್​​​​​ನಲ್ಲಿ ಸಭೆ ನಡೆಯಲಿದ್ದು, ದೇವೆಗೌಡರು ಎನ್​​​​ಡಿಎ ಮೈತ್ರಿಕೂಟದ ಜೊತೆ ಸೇರ್ಪಡೆ ಬಗ್ಗೆ ಶಾಸಕರ ಅಭಿಪ್ರಾಯವನ್ನು ಪಡೆಯಲಿದ್ದಾರೆ ಎನ್ನಲಾಗಿದೆ.

    ಈಗಾಗಲೇ ಕುಮಾರಸ್ವಾಮಿ ಕಾಂಗ್ರೆಸ್‌ ವಿರುದ್ಧ ಹೋರಾಟ ಮಾಡುತ್ತಿದ್ದು, ಎನ್​​​ಡಿಎ ಮೈತ್ರಿಕೂಟದಲ್ಲಿ ಸೇರ್ಪಡೆಯಾಗುವಂತೆ ಬಿಜೆಪಿ ಆಹ್ವಾನ ಹಿನ್ನೆಲೆಯಲ್ಲಿ ದೇವೆಗೌಡರು ಶಾಸಕರ ಅಭಿಪ್ರಾಯ ಪಡೆಯಲಿದ್ದಾರೆ.

    ಶಾಸಕರ ಅಭಿಪ್ರಾಯ ಪಡೆದ ನಂತರ ದಳಪತಿಗಳು ಮುಂದಿನ ತೀರ್ಮಾನ ಕೈಗೊಳ್ಳಲಿದ್ದಾರೆ. ಈಗಾಗಲೇ ಎನ್​​​​ಡಿಎ ಜೊತೆ ಹೋಗಲು ಕುಮಾರಸ್ವಾಮಿ ತಯಾರಿ ನಡೆಸಿದ್ದು, ಇಂದು ದೇವೇಗೌಡರು ಶಾಸಕರನ್ನ ವಿಶ್ವಾಸಕ್ಕೆ ಪಡೆದು ಒಂದು ತೀರ್ಮಾನ ಕೈಗೊಳ್ಳಲಿದ್ದಾರೆ. 

    ಕೃಷಿಕರಿಗೆ ಹೆಣ್ಣು ಕೊಡಲು ಹಿಂದೇಟು; ಕನ್ಯಾಭಾಗ್ಯ ಘೋಷಣೆ ಮಾಡುವಂತೆ ಸಿದ್ದರಾಮಯ್ಯಗೆ ಪತ್ರ ಬರೆದ ಯುವ ರೈತರು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts