ಬೆಂಗಳೂರು: ಅದಮ್ಯ ಚೇತನ ಮತ್ತು ಅನಂತ್ಕುಮಾರ್ ಪ್ರತಿಷ್ಠಾನವು ಹಿರಿಯ ರಾಜಕಾರಣಿ ದಿ.ಅನಂತಕುಮಾರ್ರ 61ನೇ ಹುಟ್ಟುಹಬ್ಬದ ಪ್ರಯುಕ್ತ ಹಮ್ಮಿಕೊಂಡಿರುವ ‘ಅನಂತ ನಮನ 2020’ ಕಾರ್ಯಕ್ರಮವ ಆರಂಭವಾಗಿದ್ದು, ಅನೇಕ ಗಣ್ಯರು ಹಾಗೂ ಸಾರ್ವಜನಿಕರು ಆನ್ಲೈನ್ ಸಂವಾದದಲ್ಲಿ ತೊಡಗಿಕೊಂಡಿದ್ದಾರೆ.
ಮಂಗಳವಾರ ಸಂಜೆ 4:30ಕ್ಕೆ ವಿಧಾನಸೌಧದಿಂದಲೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕಾರ್ಯಕ್ರಮ ಉದ್ಘಾಟಿಸಿದರು. ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ದೆಹಲಿಯಿಂದಲೇ ಭಾಷಣ ಮಾಡಲಿದ್ದಾರೆ. ಅಲ್ಲದೆ, ಈ ಕಾರ್ಯಕ್ರಮದಲ್ಲಿ ಕೇಂದ್ರ ಹಾಗೂ ರಾಜ್ಯ ಮಂತ್ರಿಗಳು, ಶಾಸಕರು ಕೂಡ ಪಾಲ್ಗೊಳ್ಳಲಿದ್ದಾರೆ.