More

    ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

    ವಿಜಯಪುರ: ಹಿಂದು ಧರ್ಮದ ವಿರುದ್ಧ, ಪ್ರಧಾನಿ ನರೇಂದ್ರ ಮೋದಿ ಹಾಗೂ ಸಂಸದ ಅನಂತಕುಮಾರ ಹೆಗಡೆ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದವರ ಮೇಲೆ ಸೂಕ್ತ ಕ್ರಮ ಜರುಗಿಸಬೇಕೆಂದು ಒತ್ತಾಯಿಸಿ ವಿಶ್ವ ಹಿಂದು ಪರಿಷತ್ ವತಿಯಿಂದ ಜಿಲ್ಲಾಧಿಕಾರಿ ಪಿ. ಸುನೀಲಕುಮಾರ ಅವರಿಗೆ ಮನವಿ ಸಲ್ಲಿಸಲಾಯಿತು.
    ಆ.11ರಂದು ಬಿಎಸ್‌ಎನ್‌ಎಲ್‌ನಲ್ಲಿ ಜೂನಿಯರ್ ಇಂಜಿನಿಯರ್ ವಿ.ಡಿ. ನಾಯಕ ಎಂಬುವವರು ವಾಟ್ಸ್‌ಆ್ಯಪ್ ಸ್ಟೇಟಸ್‌ನಲ್ಲಿ ಹಿಂದು ಧರ್ಮದ ಬಗ್ಗೆ, ಪ್ರಧಾನಿ ಮೋದಿ ಹಾಗೂ ಸಂಸದ ಅನಂತಕುಮಾರ ಹೆಗಡೆ ಅವರ ಬಗ್ಗೆ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿರುತ್ತಾರೆ. ಅದಕ್ಕೆ ಸಂಬಂಧಪಟ್ಟಂತೆ ನಾವು ಕೆಲ ದಾಖಲೆಗಳನ್ನು ಮನವಿಯೊಂದಿಗೆ ಲಗತ್ತಿಸಿದ್ದೇವೆ. ಕಾರಣ ತಾವು ಯಾವುದೇ ಮುಲಾಜಿಗೆ ಒಳಪಡದೆ ಆ ವ್ಯಕ್ತಿ ಮೇಲೆ ಕಾನೂನು ಕ್ರಮ ಜರುಗಿಸಬೇಕೆಂದು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನೀಲ ಭೈರವಾಡಗಿ ಒತ್ತಾಯಿಸಿದರು.
    ಸುರೇಶ ಬಿರಾದಾರ, ಭಾರತೀಯ ಮಜದೂರ್ ಸಂಘದ ಜಿಲ್ಲಾ ಪ್ರಮುಖ ಬಸವರಾಜ ಆಲೂರ, ಎಸ್.ಪಿ. ಕುಲಕರ್ಣಿ, ಭಾರತೀಯ ಜನತಾ ಪಾರ್ಟಿ ನಗರ ಉಪಾಧ್ಯಕ್ಷ ವಿಕಾಸ ಪದಕಿ, ಕರವೇ ಜಿಲ್ಲಾಧ್ಯಕ್ಷ ಬಸವರಾಜ ತಾಳಿಕೋಟಿ, ಸಂಜೀವ ದೇವಣಗಾಂವ, ದಯಾನಂದ ಸಾವಳಗಿ ಮತ್ತಿತರರಿದ್ದರು.

    ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts