ವಿಶಾಖಪಟ್ಟಣಂ: ಉತ್ತರ ಪ್ರದೇಶ ಬೆನ್ನಲ್ಲೇ ಆಂಧ್ರ ಪ್ರದೇಶ ಸರ್ಕಾರವೂ ಕೂಡ ಕರೊನಾ ವೈರಸ್ ಲಾಕ್ಡೌನ್ನಿಂದ ನಲುಗಿಹೋಗಿರುವ ಬಡ ಜನತೆಯ ಬೆನ್ನಿಗೆ ನಿಂತಿದೆ.
ಭಾನುವಾರ ಪತ್ರಿಕಾಗೋಷ್ಠಿ ನಡೆಸಿದ ಸಿಎಂ ವೈ.ಎಸ್. ಜಗನ್ ಮೋಹನ್ ರೆಡ್ಡಿ, ಬಡವರಿಗೆ ಉಚಿತ ರೇಷನ್ ಮತ್ತು ಒಂದು ಕುಟಂಬಕ್ಕೆ 1000 ರೂ. ಅನ್ನು ಕರೊನಾ ವೈರಸ್ನಿಂದ ಉಂಟಾಗಿರುವ ಲಾಕ್ಡೌನ್ ತೆರವು ಆಗುವವರೆಗೂ ನೀಡುವುದಾಗಿ ಘೋಷಿಸಿದ್ದಾರೆ.
ಆಂಧ್ರದಲ್ಲೂ ಕೂಡ ಅಂತಾರಾಜ್ಯ ಸಾರಿಗೆ ವ್ಯವಸ್ಥೆಯನ್ನು ಮಾರ್ಚ್ 31ರವರೆಗೆ ನಿರ್ಬಂಧಿಸಲಾಗಿದೆ. ಅಲ್ಲದೆ, ಮನೆಯಿಂದ ಯಾರೂ ಹೊರಬರಬೇಡಿ, ಅಗತ್ಯವಿದ್ದಲ್ಲಿ ಮಾತ್ರ ಹೊರಬನ್ನಿ ಎಂದು ಜನತೆಯಲ್ಲಿ ಜಗನ್ ಮನವಿ ಮಾಡಿಕೊಂಡಿದ್ದಾರೆ. ಸರ್ಕಾರಿ ನೌಕರರನ್ನು ರೊಟೇಶನ್ ಆಧಾರದ ಮೇಲೆ ಕೆಲಸ ಮಾಡಲು ಅವಕಾಶ ನೀಡಲಾಗಿದೆ.
ಇತರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ರಾಜ್ಯದಲ್ಲಿ ಪರಿಸ್ಥಿತಿ ಉತ್ತಮವಾಗಿದೆ. ಈವರೆಗೂ ರಾಜ್ಯದಲ್ಲಿ ಆರು ಸೋಂಕಿತ ಪ್ರಕರಣಗಳು ಮಾತ್ರ ವರದಿಯಾಗಿವೆ. ಅದರಲ್ಲಿ ಓರ್ವ ಚೇತರಿಸಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ. (ಏಜೆನ್ಸೀಸ್)
ಕರೊನಾ ಭೀತಿ: ಸಂಕಷ್ಟದಲ್ಲಿರೋ ದಿನಗೂಲಿ ನೌಕರರಿಗೆ ಪ್ರತಿದಿನ 1000 ರೂ. ನೀಡುವುದಾಗಿ ಸಿಎಂ ಯೋಗಿ ಘೋಷಣೆ
PHOTOS| ಕರೊನಾ ಸೋಂಕು ತಗುಲದಂತೆ ಏನು ಮಾಡಬೇಕು? ಮಾಡಬಾರದು?: ಉಪಯುಕ್ತ ಮಾಹಿತಿ ಫೋಟೋಗಳಲ್ಲಿ…