More

    ಓವರ್​ನಲ್ಲಿ ಸತತ ಆರು ಸಿಕ್ಸರ್; ದೇಶೀಯ ಕ್ರಿಕೆಟ್​ನಲ್ಲಿ ಹೊಸ ಸಾಧನೆ ಮಾಡಿದ ಯುವ ಬ್ಯಾಟ್ಸ್​ಮನ್

    ಕಡಪಾ: ಇಲ್ಲಿನ ವೈ.ಎಸ್. ರಾಜಶೇಖರ ರೆಡ್ಡಿ ಕ್ರೀಡಾಂಗಣದಲ್ಲಿ ನಡೆದ ಕರ್ನಲ್ ಸಿಕೆ ನಾಯುಡು ಟ್ರೋಫಿ ಪಂದ್ಯದಲ್ಲಿ ಆಂಧ್ರಪ್ರದೇಶದ ಯುವ ಬ್ಯಾಟ್ಸ್​ಮನ್​ ಒಬ್ಬ ಒಂದೇ ಓವರ್​ನಲ್ಲಿ ಆರು ಸಿಕ್ಸರ್​ ಸಿಡಿಸುವ ಮೂಲಕ ಹೊಸ ದಾಖಲೆ ಒಂದನ್ನು ಬರೆದಿದ್ದಾನೆ.

    ಆಂಧ್ರಪ್ರದೇಶದ ಪರ ಕಣಕ್ಕಿಳಿದಿದ್ದ ವಂಶಿ ಕೃಷ್ಣ ರೈಲ್ವೇಸ್​ ವಿರುದ್ಧದ ಪಂದ್ಯದಲ್ಲಿ ಈ ಅಪರೂಪದ ಸಾಧನೆ ಮಾಡಿದ್ದು, ಇದರ ವಿಡಿಯೋವನ್ನು ಬಿಸಿಸಿಐ ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಪೋಸ್ಟ್​ ಮಾಡಿದೆ.

    ಇದನ್ನೂ ಓದಿ: ಅಪಾರ್ಟ್​ಮೆಂಟ್​ನಲ್ಲಿ ಅಗ್ನಿ ಅವಘಡ; 5 ನೇ ಮಹಡಿಯಿಂದ ಜಿಗಿದ ಮಹಿಳೆಯರು

    ರೈಲ್ವೇಸ್​ನ ಸ್ಪಿನ್ನರ್ ದಮನ್‌ದೀಪ್ ಸಿಂಗ್ ಎಸೆದ ಓವರ್​ನಲ್ಲಿ ಆರು ಸಿಕ್ಸರ್​ ಬಾರಿಸಿದ ಕೃಷ್ಣ 64 ಎಸೆತಗಳಲ್ಲಿ 110 ರನ್​ ಗಳಿಸಿ ಔಟ್​ ಆದರು. ಈ ಮೂಲಕ ಭಾರತದ ಬ್ಯಾಟ್ಸ್‌ಮನ್​ಗಳಾದ ರವಿಶಾಸ್ತ್ರಿ (1985), ಯುವರಾಜ್ ಸಿಂಗ್ (2007) ಮತ್ತು ರುತುರಾಜ್ ಗಾಯಕ್ವಾಡ್ (2022) ಅವರ ಕ್ಲಬ್​ಗೆ ಸೇರ್ಪಡೆಯಾಗಿದ್ದಾರೆ.

    ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಂಧ್ರ 378 ರನ್ ಗಳಿಸಿತ್ತು. ವಂಶಿ ಕೃಷ್ಣ 64 ಎಸೆತಗಳಲ್ಲಿ 110 ರನ್‌ಗಳ ಅದ್ಭುತ ಇನ್ನಿಂಗ್ಸ್ ಆಡಿದರು. ಇದಾದ ಬಳಿಕ ರೈಲ್ವೇಸ್ ಮೊದಲ ಇನಿಂಗ್ಸ್’ನಲ್ಲಿ 9 ವಿಕೆಟ್ ನಷ್ಟಕ್ಕೆ 865 ರನ್ ಗಳಿಸಿತ್ತು. ಆದರೆ, ಈ ಪಂದ್ಯ ಡ್ರಾ ಆಗಿಯೇ ಉಳಿಯಿತು. ಇಬ್ಬರು ರೈಲ್ವೇಸ್ ಬ್ಯಾಟ್ಸ್‌ಮನ್‌ಗಳು ದ್ವಿಶತಕ ಗಳಿಸಿದರು. ಅನ್ಷ್​​ ಯಾದವ್ 268 ರನ್ ಗಳಿಸಿದರೆ, ರವಿ ಸಿಂಗ್ 258 ರನ್‌’ಗಳ ಇನ್ನಿಂಗ್ಸ್ ಆಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts