More

    ಸಾರಿಗೆ ನೌಕರರ ಪ್ರತಿಭಟನೆ ನಡುವೆಯೇ ಹೃದಯಾಘಾತದಿಂದ ಪ್ರಯಾಣಿಕ ಸಾವು

    ಬೆಂಗಳೂರು: ಸರ್ಕಾರಿ ಸಾರಿಗೆ ನೌಕರರ ಮುಷ್ಕರದ ನಡುವೆಯೇ ನಗರದ ಮೆಜಿಸ್ಟಿಕ್​ ಬಸ್​ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ.

    ಜಿಗಣಿಯಿಂದ ಬೆಂಗಳೂರಿಗೆ ಬಂದಿದ್ದ ಚನ್ನಪ್ಪ (77) ಎಂಬುವವರು ಬಿಎಂಟಿಸಿ ಬಸ್​ ನಿಲ್ದಾಣದಲ್ಲಿ ಹೃದಯಘಾತದಿಂದ ಸಾವಿಗೀಡಾಗಿದ್ದಾರೆ.‌ ಚನ್ನಪ್ಪ ಅವರು ಆನೇಕಲ್​ನ ಚಿಕ್ಕನಹಳ್ಳಿ ನಿವಾಸಿ.

    ಇದನ್ನೂ ಓದಿರಿ: ಮನೆಯ ಫ್ರಿಡ್ಜ್​ನಲ್ಲಿತ್ತು ಮೃತದೇಹ: ನಿಗೂಢ ಕೇಸ್​ ಬೆನ್ನತ್ತಿ ಹೋದ ಪೊಲೀಸರಿಗೆ ಮಹಿಳೆಯ ಕರಾಳ ಮುಖ ಬಯಲು!

    6ನೇ ವೇತನ ಆಯೋಗ ಮತ್ತು ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯಾದ್ಯಂತ ಸಾರಿಗೆ ನೌಕರರು ಸಂಚಾರವನ್ನು ಬಂದ್​ ಮಾಡಿ ಧರಣಿ ಕುಳಿತಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಯಾಣಿಕರಿಗೆ ತೀವ್ರ ತೊಂದೆಯಾಗಿದೆ. ಮುಷ್ಕರದ ಅರಿವಿಲ್ಲದೆ ಬಸ್​ ನಿಲ್ದಾಣಕ್ಕೆ ಆಗಮಿಸಿರುವ ಪ್ರಯಾಣಿಕರು ಪರದಾಡುತ್ತಿದ್ದಾರೆ.

    ಇನ್ನೊಂದೆಡೆ ಖಾಸಗಿ ಬಸ್​ಗಳಿಗೆ ಸರ್ಕಾರ ಅನುಮತಿ ನೀಡಿದ್ದು, ಇದನ್ನೇ ಬಂಡವಾಳವಾಗಿಸಿಕೊಂಡಿರುವ ಖಾಸಗಿ ಬಸ್​ ಮಾಲೀಕರು ಪ್ರಯಾಣಿಕರಿಂದ ದುಪ್ಪಟ್ಟು ಹಣ ಕೀಳುತ್ತಿರುವ ಆರೋಪಗಳು ಸಹ ಕೇಳಿಬರುತ್ತಿವೆ.

    ಬೆಳ್ಳಂಬೆಳಗ್ಗೆ ತಟ್ಟಿದ ಸಾರಿಗೆ ನೌಕರರ ಮುಷ್ಕರ ಬಿಸಿ: ಸರ್ಕಾರಿ ನಿಲ್ದಾಣದಲ್ಲಿ ಖಾಸಗಿ ದರ್ಬಾರ್​, ದುಪ್ಪಟ್ಟು ದರ

    Web Exclusive | ಇಂಜಿನಿಯರಿಂಗ್ ವ್ಯಾಸಂಗಕ್ಕೆ ನಿರಾಸಕ್ತಿ, ಖಾಸಗಿ ಸಂಸ್ಥೆಗಳಲ್ಲಿ ಮುಚ್ಚುವ ಸ್ಥಿತಿ!

    ಶಾಸಕರ ಪುತ್ರನ ಮೇಲೆಯೇ ಹಲ್ಲೆ; ಕಾರನ್ನು ಹಿಂಬಾಲಿಸಿಕೊಂಡು ಬಂದು ಕಪಾಳಕ್ಕೆ ಹೊಡೆದರು!?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts