More

    ಸರ್ಕಾರದ ಪೂರ್ವ ಪ್ರಾಥಮಿಕ ಶಾಲೆಗಳು ಅಂಗನವಾಡಿಗಳ ಅವನತಿಗೆ ಕಾರಣವಾಗದಿರಲಿ; ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ

    ಬೆಂಗಳೂರು: ಸರ್ಕಾರದ ಪೂರ್ವ ಪ್ರಾಥಮಿಕ ಶಾಲೆಗಳು ಅಂಗನವಾಡಿಗಳ ಅವನತಿಗೆ ಕಾರಣವಾಗದಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಪ್ರಾಥಮಿಕ ಶಿಕ್ಷಣ ಇಲಾಖೆ ಜಂಟಿಯಾಗಿ ಹೊಸ ಮಾದರಿಯೊಂದನ್ನು ರೂಪಿಸಬೇಕು ಎಂದು ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ ಹೇಳಿದ್ದಾರೆ.

    ಶಾಸಕರ ಭವನದಲ್ಲಿ ಮಂಗಳವಾರ ನಡೆದ ಅಂಗನವಾಡಿ ಕೇಂದ್ರಗಳಲ್ಲಿಯೇ ಪೂರ್ವ ಪ್ರಾಥಮಿಕ ಶಿಕ್ಷಣ ಕುರಿತ ಸಾಧಕ- ಬಾಧಕ ಕುರಿತ ಸಮಾಲೋಚನೆ ಸಭೆಯಲ್ಲಿ ಅವರು ಮಾತನಾಡಿದರು.

    ಅಂಗನವಾಡಿ ಶಾಲೆಯ ವಿದ್ಯಾರ್ಹತೆಯುಳ್ಳ ಶಿಕ್ಷಕಿಯರಿಗೆ ತರಬೇತಿ ನೀಡಿ ಪೂರ್ವ ಪ್ರಾಥಮಿಕ ಶಾಲೆಗಳ ಶಿಕ್ಷಕರನ್ನಾಗಿ ನೇಮಿಸಿಕೊಳ್ಳಬೇಕು.

    ಅಂಗನವಾಡಿ ಶಾಲೆಗಳಿಗೆ ಮಾರಕವಾಗಿರುವ 2019ರ ಪೂರ್ವ ಪ್ರಾಥಮಿಕ ಶಿಕ್ಷಣದ ಸುತ್ತೋಲೆ ಅನೂರ್ಜಿತಗೊಳಿಸಿ ರಾಜ್ಯದ 65 ಸಾವಿರ ಅಂಗನವಾಡಿ ಶಾಲೆ ಮತ್ತು 1.25 ಲಕ್ಷ ನೌಕರರನ್ನು ಉಳಿಸುವ ನಿಟ್ಟಿನಲ್ಲಿ ಹೊಸ ಯೋಜನೆ ರೂಪಿಸಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts