More

    ಅಂಗನವಾಡಿಯಲ್ಲೇ ಎಲ್‌ಕೆಜಿ, ಯುಕೆಜಿ ಆರಂಭಿಸಲು ಒತ್ತಾಯ: ಹೂವಿನಹಡಗಲಿಯಲ್ಲಿ ಕಾರ್ಯಕರ್ತೆಯರ ಪ್ರತಿಭಟನೆ

    ಹೂವಿನಹಡಗಲಿ: ಅಂಗನವಾಡಿಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭಿಸುವುದು ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪಟ್ಟಣದ ಶಾಸ್ತ್ರೀ ವೃತ್ತದಲ್ಲಿ ಅಂಗನವಾಡಿ ಫೆಡರೇಷನ್ ತಾಲೂಕು ಘಟಕದಿಂದ ಪ್ರತಿಭಟನೆ ನಡೆಸಲಾಯಿತು.

    ಮಕ್ಕಳನ್ನು ಪ್ರಾಥಮಿಕ ಶಾಲೆಗಳಿಗೆ ದಾಖಲಿಸಲು ಅಂಗನವಾಡಿಗಳಲ್ಲೇ ವರ್ಗಾವಣೆ ಪತ್ರಗಳನ್ನು ನೀಡುವಂತೆ ಸರ್ಕಾರ ಆದೇಶ ನೀಡಬೇಕು. ಪ್ರತಿ ಮಗವಿಗೂ ಸಮವಸ್ತ್ರ ವಿತರಣೆ ಮಾಡಬೇಕು. ಹಲವಾರು ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಬೇಡಿಕೆಗಳನ್ನು ಸರ್ಕಾರ ಕೂಡಲೇ ಈಡೇರಿಸಬೇಕು. ಇಲ್ಲದಿದ್ದರೆ ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಗುವುದು ಎಂದು ಕಾರ್ಯಕರ್ತೆಯರು ಎಚ್ಚರಿಸಿದರು. ಬಳಿಕ ತಹಸೀಲ್ದಾರ್ ವಿಶ್ವಜಿತ್ ಮೆಹತಾಗೆ ಮನವಿ ಸಲ್ಲಿಸಲಾಯಿತು. ಎಐಟಿಯುಸಿ ಸಂಚಾಲಕ ಸುರೇಶ ಹಲಗಿ, ಅಂಗನವಾಡಿ ಫೆಡರೇಷನ್ ತಾಲೂಕು ಅಧ್ಯಕ್ಷೆ ಮಂಜುಳಾ, ಕಾರ್ಯದರ್ಶಿ ಬಿ.ಜಯಲಕ್ಷ್ಮೀ, ಸದಸ್ಯರಾದ ಕಮಲಾಕ್ಷಿ, ಇಂದಿರಾ, ಶಾಂತಿಬಾಯಿ, ಎಂ.ವಿಜಯಲಕ್ಷ್ಮೀ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts