blank

ಸೊಸೆ ಓಡಿ ಹೋಗಿ ಮದುವೆಯಾಗಿದ್ದಕ್ಕೆ ಸಿಟ್ಟು; Reception ಊಟಕ್ಕೆ ವಿಷ ಬೆರೆಸಿದ ಮಾವ, ಮುಂದೇನಾಯ್ತು ಗೊತ್ತೇ?

blank

ಮಹಾರಾಷ್ಟ್ರ: ಮಹಾರಾಷ್ಟ್ರದ ಕೊಲ್ಹಪುರದಲ್ಲಿ ತನ್ನ ಸೊಸೆ ಮದುವೆಯ ಆರಕ್ಷತೆಗೆ(Reception) ಬಂದಿದ್ದ ಅತಿಥಿಯರ(ನೆಂಟರಿಗೆ) ಕೊಲೆ ಅಥವಾ ಮಾನ ಹರಾಜು ಹಾಕುವ ಉದ್ದೇಶದಿಂದ ಮದುವೆಗೆ ತಯಾರಿದ ಅಡುಗೆಯಲ್ಲಿ ವಿಷ ಬೆರಸಿ ಪರಾರಿಯಾದ ಘಟನೆ ನಡೆದಿದೆ. ಈ ಕುರಿತು ಪೊಲೀಸ್​ ಠಾಣೆಯಲ್ಲಿ ಆರೋಪಿಯ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಭೂ ದಾಖಲೆ ಗಣಕೀಕರಣ ಸಮರ್ಪಕವಾಗಲಿ – ಸಚಿವ ಶಿವರಾಜ ತಂಗಡಗಿ ಸೂಚನೆ

ವಿಷ ಬೆರಸಿದ ಊಟವನ್ನು ಯಾರು ಸೇವಿಸಿಲ್ಲ. ಆದರೆ, ಕೆಲವರು ಸೇವಿಸಿದ್ದಾರೆ ಎಂದು ವರದಿಯಾಗಿದೆ. ಈ ಹಿನ್ನೆಲೆ ಅವರ ರಕ್ತದ ಮಾದರಿಯನ್ನು ಟೆಸ್ಟ್​ಗೆ ಕಳುಹಿಸಲಾಗಿದೆ. ಜೊತೆಗೆ ಅಡುಗೆಯ ಊಟದ ಸ್ಯಾಂಪಲ್ಸ್​ ಕೂಡ ಟೆಸ್ಟ್​ಗೆ ಕಳುಹಿಸಲಾಗಿದೆ. ವರದಿ ಬವರುವವರೆಗೂ ಕಾಯಬೇಕಾಗಿದೆ. ಇಲ್ಲಿನ ಉತ್ರೆ ಗ್ರಾಮದ ನಿವಾಸಿ ಮಹೇಶ್​ ಪಾಟೀಲ್​ ಆರೋಪಿ ಎಂದು ಗುರುತಿಸಲಾಗಿದೆ. ಅಡುಗೆಯಲ್ಲಿ ವಿಷ ಬೆರಸುವುದರ ಜತೆಯ ಕಲ್ಯಾಣ ಮಂಟಪ ಕಾಪೌಂಡ್​ ಗೋಡೆ ಹೊಡೆದು ಪರಾರಿಯಾಗಿದ್ದಾನೆ. ಸ್ಥಳದಲ್ಲಿದ್ದ ಕೆಲವರು ಆರೋಪಿಯನ್ನು ಹಿಡಿಯಲು ಯತ್ನಿಸಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

 

ವಿಷ ಬೆರೆಸಲು ಕಾರಣ?

ಇತ್ತೀಚಿಗೆ ಗ್ರಾಮದ ವ್ಯಕ್ತಿಯೊಬ್ಬನೊಂದಿಗೆ ಓಡಿಹೋಗಿ ಆತನನ್ನು ಪಾಟೀಲ್​ ಸೊಸೆ ಮದುವೆಯಾಗಿದ್ದು, ಇದು ಪಾಟೀಲ್‌ಗೆ ಒಪ್ಪಿಗೆಯಾಗದ ಕಾರಣ ಮಂಗಳವಾರ ಮದುವೆ ಮಂಟಪದಲ್ಲಿ ನಡೆದ ಮದುವೆ ಆರತಕ್ಷತೆ ಸಮಾರಂಭಕ್ಕೆ ಬಂದು ಆಹಾರ ಪದಾರ್ಥಗಳಲ್ಲಿ ವಿಷ ಬೆರೆಸಿ ಪರಾರಿಯಾಗಿದ್ದಾನೆ ಎಂದು ಪ್ರಾಥಮಿಕ ತನಿಖೆಯಲ್ಲಿ ಬಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.(ಏಜೆನ್ಸೀಸ್​)

ಕರ್ನಾಟಕದ ಪ್ರೊ.ಯಜ್ಞೇಶ್ವರ ಶಾಸ್ತ್ರಿ ಸಾಂಚಿ ವಿಶ್ವವಿದ್ಯಾಲಯದ ಕುಲಾಧಿಪತಿಯಾಗಿ ನೇಮಕ | Chancellor

 

 

Share This Article

ಏಳನೇ ತಿಂಗಳಲ್ಲಿ ಹೆರಿಗೆಯಾದರೆ ಏನಾಗುತ್ತದೆ?; ಮಗುವಿನ ಆರೋಗ್ಯದ ಮೇಲಾಗುವ ಪರಿಣಾಮವೇನು.. ತಿಳಿದುಕೊಳ್ಳಲೇಬೇಕಾದ ಮಾಹಿತಿ | Health Tips

ಗರ್ಭಾವಸ್ಥೆಯಲ್ಲಿ ಮಗುವನ್ನು 9 ತಿಂಗಳುಗಳ ಕಾಲ ಇಟ್ಟುಕೊಳ್ಳುವುದು ಮುಖ್ಯ ಎಂದು ವೈದ್ಯರು ಸೇರಿದಂತೆ ಎಲ್ಲಾ ತಜ್ಞರು…

ರಕ್ತದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಕಡಿಮೆಯಾಗಬೇಕೇ?; ಅಡುಗೆಮನೆಯಲ್ಲಿನ ಈ 2 ವಸ್ತುಗಳನ್ನು ತಪ್ಪದೆ ಬಳಸಿ | Health Tips

ಇತ್ತೀಚಿನ ದಿನಗಳಲ್ಲಿ ಕಳಪೆ ಜೀವನಶೈಲಿ ಮತ್ತು ಅನಿಯಮಿತ ಆಹಾರ ಪದ್ಧತಿಯಿಂದಾಗಿ ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಾಗುವ ಸಮಸ್ಯೆ…

ಚಳಿಗಾಲದಲ್ಲಿ ಹುಣಸೆಹಣ್ಣು ತಿಂದರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ? health benefits of tamarind

health benefits of tamarind : ನಮ್ಮ ದಿನನಿತ್ಯದ ಅಡುಗೆಯಲ್ಲಿ ಹುಣಸೆಹಣ್ಣನ್ನು ಬಳಸುವುದರಿಂದ ನಮಗೆ ಅರಿವಿಲ್ಲದೆಯೇ…