ನವದೆಹಲಿ: ಯೆಸ್ ಬ್ಯಾಂಕ್ ಆರ್ಥಿಕ ಬಿಕ್ಕಟ್ಟಿಗೆ ಸಂಬಂಧಿಸಿ ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ಉದ್ಯಮಿ ಅನಿಲ್ ಅಂಬಾನಿ ಹೆಸರು ಕೇಳಿಬಂದಿದ್ದು, ವಿಚಾರಣೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ (ಇಡಿ) ಸೋಮವಾರ ಸಮನ್ಸ್ ನೀಡಿದೆ.
ಮುಂಬೈನಲ್ಲಿರುವ ಇಡಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಲು ಅಂಬಾನಿಗೆ ಸೂಚಿಸಲಾಗಿದೆ. ಯೆಸ್ ಬ್ಯಾಂಕ್ನಿಂದ ಪಡೆದ ಸಾಲದ ಮೇಲೆ ವಿಚಾರಣೆ ನಡೆಯಲಿದೆ. ಇದರ ನಡುವೆ ಅಂಬಾನಿ ಆರೋಗ್ಯ ಪರಿಸ್ಥಿತಿಯ ಕಾರಣ ನೀಡಿ ವಿಚಾರಣೆಗೆ ಹಾಜರಾಗಲು ಸಮಯ ಕೋರಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇದೇ ವಾರದಲ್ಲಿ ರಿಲಯನ್ಸ್ ಗ್ರೂಪ್ನ ಇತರೆ ಅಧಿಕಾರಿಗಳನ್ನು ವಿಚಾರಣೆಗೆ ಇಡಿ ಕರೆಯಲಿದೆ ಎಂದು ಹೇಳಲಾಗುತ್ತಿದೆ. ಸಾಲದ ಸುಳಿಯಲ್ಲಿ ಸಿಲುಕಿ ಆರ್ಥಿಕವಾಗಿ ದಿವಾಳಿಯಾಗಿರುವ ಯೆಸ್ ಬ್ಯಾಂಕ್ ಅನ್ನು ಭಾರತೀಯ ರಿಸರ್ವ್ ಬ್ಯಾಂಕ್ ಸೂಪರ್ ಸೀಡ್ ಆಗಿ ಮಾಡಿ, ನಗದು ವಿತ್ಡ್ರಾ ಮಿತಿಯನ್ನು 50 ಸಾವಿರಕ್ಕೆ ನಿಗದಿಪಡಿಸಿದೆ. ಇತ್ತ ಗ್ರಾಹಕರೂ ಕೂಡ ಕಂಗಾಲಾಗಿದ್ದು, ತಮ್ಮ ಹಣ ಹಿಂಪಡೆಯಲು ಸಾಕಷ್ಟು ಶ್ರಮ ಪಡುತ್ತಿದ್ದಾರೆ. ಖುಷಿಯ ವಿಚಾರವೆಂದರೆ ಕೇಂದ್ರ ಸರ್ಕಾರ ಗ್ರಾಹಕರ ಬೆನ್ನಿಗೆ ನಿಂತಿದ್ದು, ಯೆಸ್ ಬ್ಯಾಂಕ್ ಪುನಶ್ಚೇತನಕ್ಕೆ ಸಾಕಷ್ಟು ಕ್ರಮಗಳನ್ನು ಕೈಗೊಂಡಿದೆ. ದೇಶದ ಬಹು ದೊಡ್ಡ ಬ್ಯಾಂಕ್ ಎಸ್ಬಿಐ ಹಾಗೂ ಐಸಿಐಸಿಐ ಬ್ಯಾಂಕ್ ಯೆಸ್ ಬ್ಯಾಂಕ್ನಲ್ಲಿ ಹೂಡಿಕೆ ಮಾಡಿದ್ದು ಯೆಸ್ ಬ್ಯಾಂಕ್ ಮೊದಲಿನ ಸ್ಥಿತಿಗೆ ತರುವ ಪ್ರಯತ್ನಗಳು ನಡೆಯುತ್ತಿದೆ..
ಇನ್ನೊಂದೆಡೆ ಸಿಬಿಐ ಕೂಡ ಪ್ರಕರಣದ ತನಿಖೆಯನ್ನು ನಡೆಸುತ್ತಿದೆ. ಯೆಸ್ ಬ್ಯಾಂಕ್ ಸಂಸ್ಥಾಪಕ ರಾಣಾ ಕಪೂರ್ ಮತ್ತು ಆತನ ಪತ್ನಿ ಬಿಂದು ಕಪೂರ್ ದೆಹಲಿ ಮುಖ್ಯ ಪ್ರದೇಶದಲ್ಲಿ ಆಸ್ತಿ ಖರೀದಿಸಿರುವುದಕ್ಕೆ ಸಂಬಂಧಿಸಿದಂತೆ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. (ಏಜೆನ್ಸೀಸ್)
ಹೆಲ್ಪ್ಲೈನ್ಗಳಿಗೆ ಕರೆ ಮಾಡುವ ಮುನ್ನ ಹುಷಾರ್! ಪಾರಿವಾಳವನ್ನು ರಕ್ಷಿಸಲು ಹೋಗಿ ಒಂದು ಲಕ್ಷ ರೂಪಾಯಿ ಕಳೆದುಕೊಂಡ
ಐಸಿಸ್ ಸೇರಲು ದೇಶ ತೊರೆದಿದ್ದ ಕೇರಳ ಮಹಿಳೆಯರಿಬ್ಬರಿಗೆ ಆಫ್ಘಾನ್ನಲ್ಲಿ ನರಕ ದರ್ಶನ: ತವರಿಗೆ ಮರಳುವ ಬಯಕೆ