ಉತ್ತರಾಖಂಡ: ಬಿಜೆಪಿಯ ಮಾಜಿ ಸಚಿವನ ಪುತ್ರನ ರೆಸಾರ್ಟ್ನಿಂದ ಕಾಣೆಯಾಗಿದ್ದ ಯುವತಿ ಕೊಲೆಗೀಡಾಗಿದ್ದು, ಆಕೆಯ ಶವ ಇಂದು ಪತ್ತೆಯಾಗಿದೆ. ಅಲ್ಲದೆ, ಆಕೆ ಗ್ರಾಹಕರಿಗೆ ‘ಸ್ಪೆಷಲ್ ಸರ್ವಿಸ್’ ಕೊಡಲು ಒಪ್ಪದ್ದಕ್ಕೆ ಕೊಲೆ ಮಾಡಲಾಗಿದೆ ಎಂಬ ಸಂಗತಿಯೂ ಹೊರಬಿದ್ದಿದೆ.
ಉತ್ತರಾಖಂಡದಲ್ಲಿನ ಬಿಜೆಪಿಯ ಹಿರಿಯ ನಾಯಕ, ಮಾಜಿ ಸಚಿವ ವಿನೋದ್ ಆರ್ಯ ಎಂಬವರ ಪುತ್ರ ಪುಳ್ಕಿತ್ ಆರ್ಯ ಮಾಲೀಕತ್ವದ ರೆಸಾರ್ಟ್ ಹರಿದ್ವಾರದ ರಿಷಿಕೇಶ್ನಲ್ಲಿದ್ದು, ಅಲ್ಲಿ 19ರ ವಯಸ್ಸಿನ ಯುವತಿ ಅಂಕಿತಾ ಭಂಡಾರಿ ರಿಸೆಪ್ಷನಿಸ್ಟ್ ಆಗಿ ಕೆಲಸದಲ್ಲಿದ್ದಳು. ಆಕೆ ವಾರದ ಹಿಂದೆ ನಾಪತ್ತೆಯಾಗಿದ್ದು, ಬಳಿಕ ಆಕೆಯ ಕೊಲೆ ಆಗಿದೆ, ಆ ಕೊಲೆಗೂ ಪುಳ್ಕಿತ್ ಆರ್ಯಗೂ ಸಂಬಂಧ ಇದೆ ಎಂಬುದಾಗಿ ಸೋಷಿಯಲ್ ಮೀಡಿಯಾದಲ್ಲಿ ಸುದ್ದಿ ಹರಿದಾಡಿತ್ತು. ಈ ಹಿನ್ನೆಲೆಯಲ್ಲಿ ನಿನ್ನೆ ಪೊಲೀಸರು ರೆಸಾರ್ಟ್ ಮಾಲೀಕ ಪುಳ್ಕಿತ್ ಆರ್ಯ, ಮ್ಯಾನೇಜರ್ ಸೌರಭ್ ಭಾಸ್ಕರ್, ಅಸಿಸ್ಟೆಂಟ್ ಮ್ಯಾನೇಜರ್ ಅಂಕಿತ್ ಗುಪ್ತಾ ಅವರನ್ನು ನಿನ್ನೆ ಬಂಧಿಸಿದ್ದರು.
ಆರೋಪಿಗಳನ್ನು ತೀವ್ರ ವಿಚಾರಣೆಗೆ ಒಳಪಡಿಸಿದ ಬಳಿಕ ಅವರು ಆಕೆಯನ್ನು ಕೊಲೆ ಮಾಡಿ ನಾಲೆಗೆ ಎಸೆದಿದ್ದಾಗಿ ಒಪ್ಪಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಶೋಧ ಕಾರ್ಯಾಚರಣೆ ನಡೆಸಿದ ಪೊಲೀಸರಿಗೆ ಇಂದು ಛೀಲಾ ನಾಲೆಯಲ್ಲಿ ಅಂಕಿತಾ ಭಂಡಾರಿ ಶವ ಸಿಕ್ಕಿದೆ. ಶವವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಿ, ಸಂಬಂಧಿಕರಿಗೆ ಹಸ್ತಾಂತರಿಸಲಾಗಿದೆ.
ಇದನ್ನೂ ಓದಿ: ರೆಸಾರ್ಟಲ್ಲಿ ಯುವತಿಯ ಕೊಲೆ, ಬಿಜೆಪಿ ಮಾಜಿ ಸಚಿವನ ಪುತ್ರ ಅರೆಸ್ಟ್; ವಾರದ ಹಿಂದೆ ನಾಪತ್ತೆ ಆಗಿದ್ದ ಉದ್ಯೋಗಿ..
ರೆಸಾರ್ಟ್ಗೆ ಬರುವ ಗ್ರಾಹಕರಿಗೆ ಸ್ಪೆಷಲ್ ಸರ್ವಿಸ್ ಕೊಡಬೇಕು ಎಂಬುದಾಗಿ ಅಂಕಿತಾ ಭಂಡಾರಿಗೆ ಮಾಲೀಕ ಪುಳ್ಕಿತ್ ಒತ್ತಡ ಹಾಕುತ್ತಿದ್ದ. ಅಂಕಿತಾ ತನ್ನ ಸ್ನೇಹಿತೆಯರ ಜತೆ ನಡೆಸಿದ್ದ ಚಾಟ್ನಿಂದಾಗಿ ಈ ಮಾಹಿತಿ ತಿಳಿದುಬಂದಿದೆ ಎಂದು ಡಿಜಿಪಿ ಅಶೋಕ್ ಕುಮಾರ್ ತಿಳಿಸಿದ್ದಾರೆ. ಮತ್ತೊಂಡೆ ಆ ಸ್ಪೆಷಲ್ ಸರ್ವಿಸ್ ಏನು ಎಂಬುದು ಖಚಿತವಾಗಿಲ್ಲ. ಇದಕ್ಕೂ ಮೊದಲು ಅಂಕಿತಾ ಸ್ನೇಹಿತನೊಬ್ಬ ಫೇಸ್ಬುಕ್ನಲ್ಲಿ ಹಂಚಿಕೊಂಡಿದ್ದ ಮಾಹಿತಿ ಪ್ರಕಾರ, ರೆಸಾರ್ಟ್ ಗ್ರಾಹಕರ ಜತೆ ಲೈಂಗಿಕವಾಗಿ ಸಹಕರಿಸುವಂತೆ ಆಕೆ ಮೇಲೆ ಮಾಲೀಕರ ಒತ್ತಡವಿತ್ತು ಎಂಬುದು ತಿಳಿದುಬಂದಿದ್ದಾಗಿ ಪೊಲೀಸರು ತಿಳಿಸಿದ್ದು, ತನಿಖೆ ಮುಂದುವರಿದಿದೆ.
ಉತ್ತರಾಖಂಡದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಈ ಪ್ರಕರಣದ ತನಿಖೆ ಸಂಬಂಧ ವಿಶೇಷ ತನಿಖಾ ದಳವನ್ನು ರಚಿಸಿ, ತನಿಖೆಗೆ ಆದೇಶಿಸಿದ್ದಾರೆ. ಮೂವರು ಆರೋಪಿಗಳು ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ.
ಶ್ರೀಧರ ಎಂಬ ಯುವಕ ಮೊಹ್ಮದ್ ಸಲ್ಮಾನ್ ಆದ ಕಥೆ-ವ್ಯಥೆ; ಬಲವಂತದ ಖತ್ನಾ, ಮತಾಂತರ..
ಸಮಯದೊಂದಿಗೇ ಸ್ಪರ್ಧೆಗೆ ಬಿದ್ದಿದ್ದರಾ ಎಸ್.ಪಿ. ಬಾಲಸುಬ್ರಹ್ಮಣ್ಯಂ!